AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ತಪ್ಪು ಆಯ್ಕೆಗಳನ್ನು ಮಾಡುತ್ತಲೇ ಇದ್ದೆ’; ಸಮಂತಾ ಹೀಗೆ ಮರುಗಿದ್ದೇಕೆ?

ಸಮಂತಾ ಅದ್ಭುತ ನಟನೆಯ ಮೂಲಕ ಮೆಚ್ಚುಗೆ ಪಡೆದರೂ ಹಿಂದಿ ಚಿತ್ರರಂಗದಿಂದ ಅವರು ಅಂತರ ಕಾಯ್ದುಕೊಂಡಿದ್ದರು. ಹೀಗೇಕೆ ಎಂದು ಕೇಳಿದ ಪ್ರಶ್ನೆಗೆ ಅವರ ಕಡೆಯಿಂದ ಉತ್ತರ ಬಂದಿದೆ.

‘ನಾನು ತಪ್ಪು ಆಯ್ಕೆಗಳನ್ನು ಮಾಡುತ್ತಲೇ ಇದ್ದೆ’; ಸಮಂತಾ ಹೀಗೆ ಮರುಗಿದ್ದೇಕೆ?
ಸಮಂತಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 31, 2021 | 5:01 PM

Share

ಸಮಂತಾ (Samantha) ದಕ್ಷಿಣ ಭಾರತದಲ್ಲಿ ಸಾಕಷ್ಟು ಖ್ಯಾತಿ ಗಳಿಸಿಕೊಂಡಿದ್ದಾರೆ. ‘ದಿ ಫ್ಯಾಮಿಲಿ ಮ್ಯಾನ್​ 2’ ಮೂಲಕ ಅವರು ವೆಬ್​ ಸೀರಿಸ್​ ಲೋಕಕ್ಕೂ ಕಾಲಿಟ್ಟಿದ್ದಾರೆ. ಅವರು ನಟಿಸಿದ ಪಾತ್ರಕ್ಕೆ ಬಂದ ಪ್ರತಿಕ್ರಿಯೆ ಅಷ್ಟಿಷ್ಟಲ್ಲ. ಅವರು ನಿರ್ವಹಿಸಿದ ರಾಜಿ ಪಾತ್ರವನ್ನು ಎಲ್ಲರೂ ಮೆಚ್ಚಿಕೊಂಡು ಕೊಂಡಾಡಿದ್ದರು. ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿತ್ತು. ಇದನ್ನು ನೋಡಿ ಸಮಂತಾ ನಿಜಕ್ಕೂ ಖುಷಿಪಟ್ಟಿದ್ದಾರೆ. ಅವರು ಅದ್ಭುತ ನಟನೆಯ ಮೂಲಕ ಮೆಚ್ಚುಗೆ ಪಡೆದರೂ ಹಿಂದಿ ಚಿತ್ರರಂಗದಿಂದ ಅವರು ಅಂತರ ಕಾಯ್ದುಕೊಂಡಿದ್ದರು. ಹೀಗೇಕೆ ಎಂದು ಕೇಳಿದ ಪ್ರಶ್ನೆಗೆ ಅವರ ಕಡೆಯಿಂದ ಉತ್ತರ ಬಂದಿದೆ.

‘ನಾನು ವೆಬ್​ ಸೀರಿಸ್​ ಮಾಡುತ್ತೇನೆ ಎಂದು ಅಂದುಕೊಂಡಿರಲಿಲ್ಲ. ನಿರ್ದೇಶಕರಾದ ರಾಜ್​ ಮತ್ತು ಡಿಕೆ ಮೂಲಕ ಇದು ಸಾಧ್ಯವಾಯಿತು. ನನ್ನ ಪಾತ್ರಕ್ಕೆ ಇಷ್ಟೊಂದು ಮೆಚ್ಚುಗೆ ಬರುತ್ತದೆ ಎಂದು ನಾನು ಊಹಿಸಿಯೂ ಇರಲಿಲ್ಲ. ಹೊಸ ಸವಾಲುಗಳನ್ನು ಸ್ವೀಕರಿಸುವ ಆತ್ಮವಿಶ್ವಾಸ ನನ್ನಲ್ಲಿ ಬಂದಿದೆ’ ಎಂದಿದ್ದಾರೆ ಸಮಂತಾ.

ಬಾಲಿವುಡ್​ನಿಂದ ಅಂತರ ಕಾಯ್ದುಕೊಂಡಿದ್ದು ಯಾಕೆ ಎನ್ನುವ ಪ್ರಶ್ನೆಗೆ ಸಮಂತಾ ಕಡೆಯಿಂದ ಉತ್ತರ ಸಿಕ್ಕಿದೆ. ‘ದಕ್ಷಿಣ ಭಾರತದಲ್ಲಿ ನಾನು ನೆಲೆ ಕಂಡುಕೊಂಡಿದ್ದೇನೆ. ಕಳೆದ ಎರಡು ವರ್ಷಗಳಿಂದ ನನ್ನ ಮೇಲಿನ ಆತ್ಮವಿಶ್ವಾಸ ಹೆಚ್ಚಿದೆ. ನನ್ನ ಸಾಮರ್ಥ್ಯಕ್ಕೆ ತಕ್ಕಂತಹ ಪಾತ್ರಗಳ ಆಯ್ಕೆ ಮಾಡುವುದರಲ್ಲಿ ನಾನು ಎಡವುತ್ತಿದ್ದೆ. ತಪ್ಪು ನಿರ್ಧಾರಗಳನ್ನು ನಾನು ಮಾಡುತ್ತಲೇ ಇದ್ದೆ. ಆದರೆ, ಕಳೆದ ಎರಡು ವರ್ಷಗಳಿಂದ ಇದೆಲ್ಲವೂ ಬದಲಾಗಿದೆ. ಚಾಲೆಂಜ್​ಗಳನ್ನು ಸ್ವೀಕರಿಸುವ ಆತ್ಮವಿಶ್ವಾಸ ಬಂದಿದೆ’ ಎಂಬುದು ಸಮಂತಾ ಮಾತು.

ಇತ್ತೀಚೆಗೆ ಸಮಂತಾ ಅವರು ಜ್ಯೂ. ಎನ್​ಟಿಆರ್​ ಜತೆ ನಟಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಅಧಿಕೃತ ಮಾಹಿತಿ ಹೊರ ಬೀಳುವುದರೊಳಗೆ ಮತ್ತೊಂದು ಸುದ್ದಿ ಹೊರ ಬಿದ್ದಿದೆ. ಅವರ ಬಗ್ಗೆ ಕೇಳಿ ಬಂದ ಹೊಸ ಅಪ್​ಡೇಟ್​ ಕೇಳಿ ಸಮಂತಾ ಅಭಿಮಾನಿಗಳು ಹಿರಿಹಿರಿ ಹಿಗುತ್ತಿದ್ದಾರೆ. ಮಹೇಶ್​ ಬಾಬು ಹಾಗೂ ನಿರ್ದೇಶಕ ತ್ರಿವಿಕ್ರಮ್ ಅವರು ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ‘ಸರ್ಕಾರಿ ವಾರಿ ಪಾಟ’ ಚಿತ್ರ ತೆರೆಗೆ ಬಂದ ನಂತರದಲ್ಲಿ ಹೊಸ ಸಿನಿಮಾದ ಕೆಲಸ ಆರಂಭಗೊಳ್ಳಲಿದೆ. ಈ ಚಿತ್ರದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ಕಾಣಿಸಿಕೊಳ್ಳಬೇಕಿತ್ತು. ಆದರೆ, ಈಗ ಅದು ಸಾಧ್ಯವಾಗುತ್ತಿಲ್ಲ. ಪೂಜಾಗೆ ಡೇಟ್ಸ್​ ಹೊಂದಿಸೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಅವರು ಸಿನಿಮಾದಿಂದ ಹೊರ ನಡೆದಿದ್ದಾರಂತೆ. ಈ ಚಿತ್ರ ಸಮಂತಾಗೆ ಸಿಕ್ಕಿದೆ ಎನ್ನಲಾಗಿದೆ.

ಇದನ್ನೂ ಓದಿ: ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇದನದಿಂದ ಇಕ್ಕಟ್ಟಿಗೆ ಸಿಲುಕಿದ ನಿರ್ದೇಶಕಿ; ಪರಿಹಾರ ಕೊಡೋದು ಯಾರು?

ಪೂಜಾ ಹೆಗ್ಡೆ ಆಫರ್​ ಬಾಚಿಕೊಂಡ ಸಮಂತಾ; ಮಹೇಶ್​ ಬಾಬುಗೆ ಜತೆಯಾಗಲಿದ್ದಾರೆ ನಟಿ?

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!