AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನದ ನಂತರ ಕಿರುತೆರೆಯಲ್ಲಿ ಕಾಣಿಸಿಕೊಳ್ಳೋಕೆ ರೆಡಿ ಆದ್ರು ಸಮಂತಾ

ಜೆಮಿನಿ ಟಿವಿಯಲ್ಲಿ ‘ಎವರು ಮೀಲೊ ಕೋಟಿಶ್ವರುಲು’ ಶೋ ಪ್ರಸಾರವಾಗುತ್ತಿದೆ. ‘ಕೌನ್​ ಬನೇಗಾ ಕರೋಡ್​​ಪತಿಯ’ ತೆಲುಗು ವರ್ಷನ್​ ಇದು. ಇದನ್ನು ಖ್ಯಾತ ನಟ ಜ್ಯೂ.ಎನ್​ಟಿಆರ್​ ನಡೆಸಿಕೊಡುತ್ತಿದ್ದಾರೆ.

ವಿಚ್ಛೇದನದ ನಂತರ ಕಿರುತೆರೆಯಲ್ಲಿ ಕಾಣಿಸಿಕೊಳ್ಳೋಕೆ ರೆಡಿ ಆದ್ರು ಸಮಂತಾ
ಸಮಂತಾ
TV9 Web
| Edited By: |

Updated on:Oct 07, 2021 | 8:25 PM

Share

ಸಮಂತಾ ಅಕ್ಕಿನೇನಿ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ನಾಗ ಚೈತನ್ಯ ಜತೆ ವಿಚ್ಛೇದನ ಪಡೆಯುತ್ತಾರೆ ಎನ್ನುವ ಸುದ್ದಿ ಹೊರ ಬಿದ್ದಾಗಿನಿಂದಲೇ ಅವರ ಬಗ್ಗೆ ಸಾಕಷ್ಟು ವಿಚಾರಗಳು ಚರ್ಚೆಗೆ ಬಂದಿವೆ. ಈಗ ಸಮಂತಾ ಮತ್ತೆ ಸುದ್ದಿಯಲ್ಲಿದ್ದಾರೆ. ಹಾಗಂತ ಇದು ಅವರ ಖಾಸಗಿ ವಿಚಾರದ ಬಗ್ಗೆ ಅಲ್ಲ, ಅವರು ಸುದ್ದಿ ಆಗೋಕೆ ಕಿರುತೆರೆ ಕಾರಣ.

ಜೆಮಿನಿ ಟಿವಿಯಲ್ಲಿ ‘ಎವರು ಮೀಲೊ ಕೋಟಿಶ್ವರುಲು’ ಶೋ ಪ್ರಸಾರವಾಗುತ್ತಿದೆ. ‘ಕೌನ್​ ಬನೇಗಾ ಕರೋಡ್​​ಪತಿಯ’ ತೆಲುಗು ವರ್ಷನ್​ ಇದು. ಇದನ್ನು ಖ್ಯಾತ ನಟ ಜ್ಯೂ.ಎನ್​ಟಿಆರ್​ ನಡೆಸಿಕೊಡುತ್ತಿದ್ದಾರೆ. ಈ ಶೋಗೆ ಸಮಂತಾ ಅವರು ಅತಿಥಿಯಾಗಿ ಆಗಮಿಸುತ್ತಿದ್ದಾರೆ.

ಸಮಂತಾ ವಿಚ್ಛೇದನ ಪಡೆದ ನಂತರ ಒಂದು ಬ್ರೇಕ್​ ಪಡೆದುಕೊಂಡಿದ್ದರು. ಆದರೆ, ಈಗ ಅವರು ಮತ್ತೆ ಕೆಲಸಕ್ಕೆ ಮರಳೋಕೆ ನಿರ್ಧರಿಸಿದ್ದಾರೆ. ಈ ಕಾರಣಕ್ಕೆ ಅವರು ಇತ್ತೀಚೆಗೆ ಜಾಹೀರಾತಿನ ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದರು. ಇದರ ಜತೆಗೆ ಅವರು ಹೊಸ ಸಿನಿಮಾದ ಕಥೆ ಕೂಡ ಕೇಳುತ್ತಿದ್ದಾರೆ. ಈಗ ಅವರು ಕಿರುತೆರೆ ಶೋನಲ್ಲಿ ಮರಳೋಕೆ ರೆಡಿ ಆಗಿದ್ದಾರೆ ಎನ್ನಲಾಗಿದೆ.

ಚರ್ಚೆ ಆಗುತ್ತಿದೆ ಸಮಂತಾ ಟ್ಯಾಟೂ ವಿಚಾರ

ಸಮಂತಾ ದೇಹದ ಮೇಲೆ ಮೂರು ಟ್ಯಾಟೂಗಳಿವೆ. ಅವರು ಮೊದಲ ಬಾರಿಗೆ ವೈಎಂಸಿ ಎಂದು ಟ್ಯಾಟೂ ಹಾಕಿಸಿಕೊಂಡಿದ್ದರು. ಇದರ ಅರ್ಥ ‘ಯೇ ಮಾಯಾ ಚೇಸಾವೆ’. ಈ ಸಿನಿಮಾ ರಾತ್ರೋರಾತ್ರಿ ಸಮಂತಾ ಅವರನ್ನು ಸ್ಟಾರ್​ ಆಗಿ ಮಾಡಿತು. ಮತ್ತೊಂದು ಟ್ಯಾಟೂನಲ್ಲಿ ನಾಗ ಚೈತನ್ಯ ಅವರ ಸಹಿ ಇದೆ. ಸಾಕಷ್ಟು ಫೋಟೋಶೂಟ್​​ಗಳಲ್ಲಿ ಈ ಸಹಿ ಎದ್ದು ಕಾಣಿಸಿದೆ. ಮತ್ತೊಂದು ಟ್ಯಾಟೂ ಬಾಣದ ಚಿಹ್ನೆಯನ್ನು ಹೊಂದಿದೆ. ನಾಗ ಚೈತನ್ಯ ಕೂಡ ಇದೇ ಟ್ಯಾಟೂ ಹಾಕಿಸಿಕೊಂಡಿದ್ದರು.

ಬಾಲಿವುಡ್​ ಸ್ಟಾರ್​ ನಟಿ ದೀಪಿಕಾ ಪಡುಕೋಣೆ ಅವರು ರಣಬೀರ್ ಕಪೂರ್​ ಅವರನ್ನು ಪ್ರೀತಿಸುತ್ತಿದ್ದಾಗ ಆರ್​ಕೆ ಎಂದು ಟ್ಯಾಟೂ ಹಾಕಿಸಿಕೊಂಡಿದ್ದರು. ಇನ್ನು, ನಯನತಾರಾ ಪಿಡಿ (ಪ್ರಭುದೇವ) ಎಂದು ಟ್ಯಾಟೂ ಹಾಕಿಸಿಕೊಂಡಿದ್ದರು. ಆದರೆ, ಇವೆರಡೂ ಸಂಬಂಧ ಉಳಿದಿಲ್ಲ. ನಂತರ ಅವರು ಲೇಸರ್​ ಸಹಾಯದಿಂದ ಈ ಟ್ಯಾಟೂ ತೆಗೆಸಿ ಹಾಕಿದ್ದರು. ಈಗ ಸಮಂತಾ ಕೂಡ ಇದೇ ಮಾರ್ಗ ತುಳಿಯಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅಭಿಮಾನಿ ವಲಯದಲ್ಲಿ ಚರ್ಚೆ ಆಗುತ್ತಿದೆ.

ಇದನ್ನೂ ಓದಿ: ಸಮಂತಾರ ಪ್ರತಿಭೆ ಮತ್ತು ಜನಪ್ರಿಯತೆ ಬಗ್ಗೆ ನಾಗ ಚೈತನ್ಯರಲ್ಲಿ ಹುಟ್ಟಿದ ಈರ್ಷ್ಯೆಯೇ ಡಿವೋರ್ಸ್​ಗೆ ಕಾರಣವಾಯಿತೇ?

ಸಮಂತಾ ದೇಹದ ಮೇಲಿರುವ ಟ್ಯಾಟೂ ಗತಿಯೇನು? ಅದರಲ್ಲಿದೆ ನಾಗ ಚೈತನ್ಯ ನೆನಪು

Published On - 8:18 pm, Thu, 7 October 21

Follow Us
Web contact
Web contact

TV9 Kannada

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು