AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಜಾ ಹೆಗ್ಡೆ ಆಫರ್​ ಬಾಚಿಕೊಂಡ ಸಮಂತಾ; ಮಹೇಶ್​ ಬಾಬುಗೆ ಜತೆಯಾಗಲಿದ್ದಾರೆ ನಟಿ?

ತ್ರಿವಿಕ್ರಮ್​ ಹಾಗೂ ಸಮಂತಾ ನಡುವೆ ಒಳ್ಳೆಯ ಗೆಳೆತನವಿದೆ. ಇನ್ನು, ಸಮಂತಾ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಈ ಕಾರಣಕ್ಕೆ ಅವರಿಗೆ ಈ ಆಫರ್​ ನೀಡಿದ್ದಾರೆ ತ್ರಿವಿಕ್ರಮ್​.

ಪೂಜಾ ಹೆಗ್ಡೆ ಆಫರ್​ ಬಾಚಿಕೊಂಡ ಸಮಂತಾ; ಮಹೇಶ್​ ಬಾಬುಗೆ ಜತೆಯಾಗಲಿದ್ದಾರೆ ನಟಿ?
ಸಮಂತಾ-ಮಹೇಶ್​ ಬಾಬು
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 30, 2021 | 7:50 PM

Share

ಸಮಂತಾ ವಿಚ್ಛೇದನ ಪಡೆದ ನಂತರದಲ್ಲಿ ಅಭಿಮಾನಿಗಳು ತುಂಬಾನೇ ಬೇಸರ ಮಾಡಿಕೊಂಡಿದ್ದರು. ಸಮಂತಾ ಚಿತ್ರರಂಗದಿಂದ ದೂರ ಉಳಿಯುತ್ತಾರಾ ಎನ್ನುವ ಆತಂಕವೂ ಕಾಡಿತ್ತು. ಆದರೆ, ಅವರು ಆ ರೀತಿ ಮಾಡಿಲ್ಲ. ಬದಲಿಗೆ ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ವಿಶೇಷ ಹಾಡಿಗೆ ಹೆಜ್ಜೆ ಹಾಕುತ್ತಿದ್ದಾರೆ. ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆ ಊರುತ್ತಿದ್ದಾರೆ. ‘ಪುಷ್ಪ’ ಸಿನಿಮಾದಲ್ಲಿ ಅವರು ಹೆಜ್ಜೆ ಹಾಕಿದ, ‘ಹೂ ಅಂತೀಯಾ ಮಾವ, ಊಹೂ ಅಂತೀಯಾ ಮಾವ..’ ಹಾಡು ಸೂಪರ್-ಡೂಪರ್​ ಹಿಟ್​ ಆಗಿದೆ. ಈ ಬೆನ್ನಲ್ಲೇ ಸಮಂತಾ ಕಡೆಯಿಂದ ಒಂದು ದೊಡ್ಡ ಅಪ್​ಡೇಟ್​ ಸಿಕ್ಕಿದೆ. ಮಹೇಶ್​ ಬಾಬು ಮುಂದಿನ ಚಿತ್ರಕ್ಕೆ ಸಮಂತಾ ನಾಯಕಿ ಎನ್ನಲಾಗುತ್ತಿದೆ.

ಇತ್ತೀಚೆಗೆ ಸಮಂತಾ ಅವರು ಜ್ಯೂ. ಎನ್​ಟಿಆರ್​ ಜತೆ ನಟಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಅಧಿಕೃತ ಮಾಹಿತಿ ಹೊರ ಬೀಳುವುದರೊಳಗೆ ಮತ್ತೊಂದು ಸುದ್ದಿ ಹೊರ ಬಿದ್ದಿದೆ. ಅವರ ಬಗ್ಗೆ ಕೇಳಿ ಬಂದ ಹೊಸ ಅಪ್​ಡೇಟ್​ ಕೇಳಿ ಸಮಂತಾ ಅಭಿಮಾನಿಗಳು ಹಿರಿಹಿರಿ ಹಿಗುತ್ತಿದ್ದಾರೆ.

ಮಹೇಶ್​ ಬಾಬು ಹಾಗೂ ನಿರ್ದೇಶಕ ತ್ರಿವಿಕ್ರಮ್ ಅವರು ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ‘ಸರ್ಕಾರಿ ವಾರಿ ಪಾಟ’ ಚಿತ್ರ ತೆರೆಗೆ ಬಂದ ನಂತರದಲ್ಲಿ ಹೊಸ ಸಿನಿಮಾದ ಕೆಲಸ ಆರಂಭಗೊಳ್ಳಲಿದೆ. ಈ ಚಿತ್ರದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ಕಾಣಿಸಿಕೊಳ್ಳಬೇಕಿತ್ತು. ಆದರೆ, ಈಗ ಅದು ಸಾಧ್ಯವಾಗುತ್ತಿಲ್ಲ. ಪೂಜಾಗೆ ಡೇಟ್ಸ್​ ಹೊಂದಿಸೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಅವರು ಸಿನಿಮಾದಿಂದ ಹೊರ ನಡೆದಿದ್ದಾರಂತೆ.

ತ್ರಿವಿಕ್ರಮ್​ ಹಾಗೂ ಸಮಂತಾ ನಡುವೆ ಒಳ್ಳೆಯ ಗೆಳೆತನವಿದೆ. ಇನ್ನು, ಸಮಂತಾ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಈ ಕಾರಣಕ್ಕೆ ಅವರಿಗೆ ಈ ಆಫರ್​ ನೀಡಿದ್ದಾರೆ ತ್ರಿವಿಕ್ರಮ್​. ಇದನ್ನು ಸಮಂತಾ ಒಪ್ಪಿಕೊಂಡಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

ಪ್ರಿಯಾಂಕಾ ಚೋಪ್ರಾ ನಟನೆಯ ಅಮೆರಿಕದ ಸ್ಪೈ ಸರಣಿ ‘ಸಿಟಾಡೆಲ್​’ಅನ್ನು ಸ್ಫೂರ್ತಿಯಾಗಿ ಇಟ್ಟುಕೊಂಡು ರಾಜ್​ ಮತ್ತು ಡಿಕೆ ಹೊಸ ವೆಬ್​ ಸೀರಿಸ್​ ಮಾಡುತ್ತಿದ್ದಾರೆ. ಈ ಸರಣಿಯಲ್ಲಿ ವರುಣ್​ ಧವನ್​ ಮುಖ್ಯಭೂಮಿಕೆ ನಿರ್ವಹಿಸಿದರೆ, ಸಮಂತಾ ವರುಣ್​ಗೆ ಜತೆಯಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಅವರು ವರುಣ್​ಗೆ ಜತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:  ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇದನದಿಂದ ಇಕ್ಕಟ್ಟಿಗೆ ಸಿಲುಕಿದ ನಿರ್ದೇಶಕಿ; ಪರಿಹಾರ ಕೊಡೋದು ಯಾರು?

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!