AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಜಾ ಹೆಗ್ಡೆ ಆಫರ್​ ಬಾಚಿಕೊಂಡ ಸಮಂತಾ; ಮಹೇಶ್​ ಬಾಬುಗೆ ಜತೆಯಾಗಲಿದ್ದಾರೆ ನಟಿ?

ತ್ರಿವಿಕ್ರಮ್​ ಹಾಗೂ ಸಮಂತಾ ನಡುವೆ ಒಳ್ಳೆಯ ಗೆಳೆತನವಿದೆ. ಇನ್ನು, ಸಮಂತಾ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಈ ಕಾರಣಕ್ಕೆ ಅವರಿಗೆ ಈ ಆಫರ್​ ನೀಡಿದ್ದಾರೆ ತ್ರಿವಿಕ್ರಮ್​.

ಪೂಜಾ ಹೆಗ್ಡೆ ಆಫರ್​ ಬಾಚಿಕೊಂಡ ಸಮಂತಾ; ಮಹೇಶ್​ ಬಾಬುಗೆ ಜತೆಯಾಗಲಿದ್ದಾರೆ ನಟಿ?
ಸಮಂತಾ-ಮಹೇಶ್​ ಬಾಬು
TV9 Web
| Edited By: |

Updated on: Dec 30, 2021 | 7:50 PM

Share

ಸಮಂತಾ ವಿಚ್ಛೇದನ ಪಡೆದ ನಂತರದಲ್ಲಿ ಅಭಿಮಾನಿಗಳು ತುಂಬಾನೇ ಬೇಸರ ಮಾಡಿಕೊಂಡಿದ್ದರು. ಸಮಂತಾ ಚಿತ್ರರಂಗದಿಂದ ದೂರ ಉಳಿಯುತ್ತಾರಾ ಎನ್ನುವ ಆತಂಕವೂ ಕಾಡಿತ್ತು. ಆದರೆ, ಅವರು ಆ ರೀತಿ ಮಾಡಿಲ್ಲ. ಬದಲಿಗೆ ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ವಿಶೇಷ ಹಾಡಿಗೆ ಹೆಜ್ಜೆ ಹಾಕುತ್ತಿದ್ದಾರೆ. ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆ ಊರುತ್ತಿದ್ದಾರೆ. ‘ಪುಷ್ಪ’ ಸಿನಿಮಾದಲ್ಲಿ ಅವರು ಹೆಜ್ಜೆ ಹಾಕಿದ, ‘ಹೂ ಅಂತೀಯಾ ಮಾವ, ಊಹೂ ಅಂತೀಯಾ ಮಾವ..’ ಹಾಡು ಸೂಪರ್-ಡೂಪರ್​ ಹಿಟ್​ ಆಗಿದೆ. ಈ ಬೆನ್ನಲ್ಲೇ ಸಮಂತಾ ಕಡೆಯಿಂದ ಒಂದು ದೊಡ್ಡ ಅಪ್​ಡೇಟ್​ ಸಿಕ್ಕಿದೆ. ಮಹೇಶ್​ ಬಾಬು ಮುಂದಿನ ಚಿತ್ರಕ್ಕೆ ಸಮಂತಾ ನಾಯಕಿ ಎನ್ನಲಾಗುತ್ತಿದೆ.

ಇತ್ತೀಚೆಗೆ ಸಮಂತಾ ಅವರು ಜ್ಯೂ. ಎನ್​ಟಿಆರ್​ ಜತೆ ನಟಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಅಧಿಕೃತ ಮಾಹಿತಿ ಹೊರ ಬೀಳುವುದರೊಳಗೆ ಮತ್ತೊಂದು ಸುದ್ದಿ ಹೊರ ಬಿದ್ದಿದೆ. ಅವರ ಬಗ್ಗೆ ಕೇಳಿ ಬಂದ ಹೊಸ ಅಪ್​ಡೇಟ್​ ಕೇಳಿ ಸಮಂತಾ ಅಭಿಮಾನಿಗಳು ಹಿರಿಹಿರಿ ಹಿಗುತ್ತಿದ್ದಾರೆ.

ಮಹೇಶ್​ ಬಾಬು ಹಾಗೂ ನಿರ್ದೇಶಕ ತ್ರಿವಿಕ್ರಮ್ ಅವರು ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ‘ಸರ್ಕಾರಿ ವಾರಿ ಪಾಟ’ ಚಿತ್ರ ತೆರೆಗೆ ಬಂದ ನಂತರದಲ್ಲಿ ಹೊಸ ಸಿನಿಮಾದ ಕೆಲಸ ಆರಂಭಗೊಳ್ಳಲಿದೆ. ಈ ಚಿತ್ರದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ಕಾಣಿಸಿಕೊಳ್ಳಬೇಕಿತ್ತು. ಆದರೆ, ಈಗ ಅದು ಸಾಧ್ಯವಾಗುತ್ತಿಲ್ಲ. ಪೂಜಾಗೆ ಡೇಟ್ಸ್​ ಹೊಂದಿಸೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಅವರು ಸಿನಿಮಾದಿಂದ ಹೊರ ನಡೆದಿದ್ದಾರಂತೆ.

ತ್ರಿವಿಕ್ರಮ್​ ಹಾಗೂ ಸಮಂತಾ ನಡುವೆ ಒಳ್ಳೆಯ ಗೆಳೆತನವಿದೆ. ಇನ್ನು, ಸಮಂತಾ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಈ ಕಾರಣಕ್ಕೆ ಅವರಿಗೆ ಈ ಆಫರ್​ ನೀಡಿದ್ದಾರೆ ತ್ರಿವಿಕ್ರಮ್​. ಇದನ್ನು ಸಮಂತಾ ಒಪ್ಪಿಕೊಂಡಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

ಪ್ರಿಯಾಂಕಾ ಚೋಪ್ರಾ ನಟನೆಯ ಅಮೆರಿಕದ ಸ್ಪೈ ಸರಣಿ ‘ಸಿಟಾಡೆಲ್​’ಅನ್ನು ಸ್ಫೂರ್ತಿಯಾಗಿ ಇಟ್ಟುಕೊಂಡು ರಾಜ್​ ಮತ್ತು ಡಿಕೆ ಹೊಸ ವೆಬ್​ ಸೀರಿಸ್​ ಮಾಡುತ್ತಿದ್ದಾರೆ. ಈ ಸರಣಿಯಲ್ಲಿ ವರುಣ್​ ಧವನ್​ ಮುಖ್ಯಭೂಮಿಕೆ ನಿರ್ವಹಿಸಿದರೆ, ಸಮಂತಾ ವರುಣ್​ಗೆ ಜತೆಯಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಅವರು ವರುಣ್​ಗೆ ಜತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:  ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇದನದಿಂದ ಇಕ್ಕಟ್ಟಿಗೆ ಸಿಲುಕಿದ ನಿರ್ದೇಶಕಿ; ಪರಿಹಾರ ಕೊಡೋದು ಯಾರು?

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ