AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಡಿವೋರ್ಸ್ ಬೆನ್ನಲ್ಲೇ ಆಶ್ರಮಕ್ಕೆ ತೆರಳಿದ್ದಾರಾ ಸಮಂತಾ?; ಉತ್ತರ ನೀಡುತ್ತಿವೆ ಈ ಚಿತ್ರಗಳು

Rishikesh: ಟಾಲಿವುಡ್ ನಟಿ ಸಮಂತಾ ರಿಷಿಕೇಶಕ್ಕೆ ತೆರಳಿದ್ದಾರೆ. ಅಲ್ಲಿ ರಜೆಯ ದಿನಗಳನ್ನು ಕಳೆಯುತ್ತಿರುವ ಅವರು, ಸುತ್ತಲ ಪರಿಸರದ ಚಿತ್ರಗಳನ್ನೂ ಹಂಚಿಕೊಂಡಿದ್ದಾರೆ. ಈ ನಡುವೆ ಅವರು ಹಂಚಿಕೊಂಡಿರುವ ಕೆಲವು ಚಿತ್ರಗಳು ಎಲ್ಲರ ಕುತೂಹಲ ಕೆರಳಿಸಿದೆ.

Samantha: ಡಿವೋರ್ಸ್ ಬೆನ್ನಲ್ಲೇ ಆಶ್ರಮಕ್ಕೆ ತೆರಳಿದ್ದಾರಾ ಸಮಂತಾ?; ಉತ್ತರ ನೀಡುತ್ತಿವೆ ಈ ಚಿತ್ರಗಳು
ಸಮಂತಾ
TV9 Web
| Edited By: |

Updated on: Oct 20, 2021 | 4:21 PM

Share

ದಾಂಪತ್ಯ ಜೀವನದಿಂದ ಹೊರ ಬಂದ ಬೆನ್ನಲ್ಲೇ ಟಾಲಿವುಡ್ ನಟಿ ಸಮಂತಾ ರಿಷಿಕೇಶಕ್ಕೆ ತೆರಳಿದ್ದಾರೆ. ತಾವು ತಂಗಿರುವ ಬೆಟ್ಟಗಳ ನಡುವಿರುವ ರೆಸಾರ್ಟ್​ನಿಂದ ಮನಮೋಹಕ ಚಿತ್ರಗಳನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಸುಂದರವಾಗಿರುವ ಈಜುಕೊಳದ ಚಿತ್ರವನ್ನೂ ಅವರು ಹಂಚಿಕೊಂಡಿದ್ದು, ಎಲ್ಲರ ಗಮನ ಸೆಳೆದಿದೆ. ಇವುಗಳಿಗಿಂತ ಹೆಚ್ಚಾಗಿ ಸದ್ಯ ಚರ್ಚೆಯಾಗುತ್ತಿರುವುದು ಸಮಂತಾ ಹಂಚಿಕೊಂಡಿರುವ ಆಶ್ರಮದ ಚಿತ್ರಗಳು. ಆಶ್ರಮವೊಂದರ ದ್ವಾರದ ಹಾಗೂ ಅಲ್ಲಿರುವ ಫಲಕವೊಂದರ ಚಿತ್ರಗಳನ್ನು ಸಮಂತಾ ಪೋಸ್ಟ್ ಮಾಡಿದ್ದು, ಅವರು ಆಶ್ರಮಕ್ಕೆ ತೆರಳಿದ್ದಾರೆಯೇ ಎಂಬ ಪ್ರಶ್ನೆಯನ್ನೂ ಹುಟ್ಟುಹಾಕಿದೆ.

ರಿಷಿಕೇಶದಲ್ಲಿರುವ ಶ್ರೀ ಸ್ವಾಮಿ ಪುರುಷೋತ್ತಮಾನಂದ ಜೀ ಮಹರಾಜ್ ವಸಿಷ್ಠ್ ಆಶ್ರಮದ ದ್ವಾರದ ಚಿತ್ರವನ್ನು ಸಮಂತಾ ಹಂಚಿಕೊಂಡಿದ್ದಾರೆ. ಜೊತೆಗೆ ‘ಸಂತಸ ಬೇರೆಲ್ಲೂ ಇಲ್ಲ, ನಮ್ಮೊಳಗಿದೆ’ ಎಂದು ಬರೆದುಕೊಂಡಿರುವ ಫಲಕದ ಚಿತ್ರವನ್ನೂ ಹಂಚಿಕೊಂಡಿದ್ದು, ಸಮಂತಾ ರಜೆಯ ಅವಧಿಯಲ್ಲಿ ಆಶ್ರಮಕ್ಕೂ ತೆರಳಿದ್ದಾರೆ ಎಂಬುದನ್ನು ಸಾಬೀತುಪಡಿಸುವಂತಿದೆ. ಒಟ್ಟಿನಲ್ಲಿ ವಿವಿಧ ಚಟುವಟಿಕೆಗಳ ಮೂಲಕ ಸಮಂತಾ ತಮ್ಮನ್ನು ತಾವು ಸದಾ ಕ್ರಿಯಾಶೀಲರಾಗಿಟ್ಟುಕೊಂಡಿದ್ದಾರೆ.

ಸಮಂತಾ ಹಂಚಿಕೊಂಡ ಆಶ್ರಮದ ಚಿತ್ರಗಳು ಇಲ್ಲಿವೆ:

Samantha went to Ashram

ಸಮಂತಾ ಹಂಚಿಕೊಂಡ ಆಶ್ರಮದ ಚಿತ್ರ

ಕೆಲ ಸಮಯದ ಹಿಂದಷ್ಟೇ ಸಾಮಾಜಿಕ ಜಾಲತಾಣಗಳ ಮುಖಾಂತರ ಸಮಂತಾ ಹಾಗೂ ನಾಗ ಚೈತನ್ಯ ಪರಸ್ಪರ ದೂರವಾಗುತ್ತಿರುವ ನಿರ್ಧಾರವನ್ನು ಘೋಷಿಸಿದ್ದರು. ಇದೊಂದು ಕಠಿಣ ನಿರ್ಧಾರವಾಗಿದ್ದು, ಬಹಳ ನೋವು ನೀಡುತ್ತಿದೆ ಎಂದೂ ಅವರು ಬರೆದುಕೊಂಡಿದ್ದರು. ಇತ್ತೀಚೆಗೆ ಅವರು ಡಿವೋರ್ಸ್​​ ಕುರಿತು ಹರಿದಾಡುತ್ತಿರುವ ವೈಯಕ್ತಿಕ ದಾಳಿಯ ವಿರುದ್ಧ ಮಾತನಾಡಿ, ಅವುಗಳನ್ನು ಸಂಪೂರ್ಣ ನಿರಾಕರಿಸಿದ್ದರು.

ಇದನ್ನೂ ಓದಿ:

‘ಇಲ್ಲಿ ಕೂರಲು ಭಯವಾಗುತ್ತಿದೆ’; ಡಿವೋರ್ಸ್ ಬಳಿಕ ಮೊದಲ ಬಾರಿಗೆ ಸ್ಕ್ರೀನ್ ಮೇಲೆ ಕಾಣಿಸಿಕೊಂಡ ಸಮಂತಾ ಮಾತು

ಕರ್ನಾಟಕದಲ್ಲಿ ‘ಸಲಗ’ ವಿಜಯಯಾತ್ರೆ; ಯಾರೆಲ್ಲಾ ಪಾಲ್ಗೊಳ್ಳಲಿದ್ದಾರೆ?

ಯಶ್​ 19ನೇ ಸಿನಿಮಾ ಬಗ್ಗೆ ಹರಿದಾಡುತ್ತಿರುವ ಸುದ್ದಿಯ ಅಸಲಿಯತ್ತೇನು?

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ