AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಡಿವೋರ್ಸ್ ಬೆನ್ನಲ್ಲೇ ಆಶ್ರಮಕ್ಕೆ ತೆರಳಿದ್ದಾರಾ ಸಮಂತಾ?; ಉತ್ತರ ನೀಡುತ್ತಿವೆ ಈ ಚಿತ್ರಗಳು

Rishikesh: ಟಾಲಿವುಡ್ ನಟಿ ಸಮಂತಾ ರಿಷಿಕೇಶಕ್ಕೆ ತೆರಳಿದ್ದಾರೆ. ಅಲ್ಲಿ ರಜೆಯ ದಿನಗಳನ್ನು ಕಳೆಯುತ್ತಿರುವ ಅವರು, ಸುತ್ತಲ ಪರಿಸರದ ಚಿತ್ರಗಳನ್ನೂ ಹಂಚಿಕೊಂಡಿದ್ದಾರೆ. ಈ ನಡುವೆ ಅವರು ಹಂಚಿಕೊಂಡಿರುವ ಕೆಲವು ಚಿತ್ರಗಳು ಎಲ್ಲರ ಕುತೂಹಲ ಕೆರಳಿಸಿದೆ.

Samantha: ಡಿವೋರ್ಸ್ ಬೆನ್ನಲ್ಲೇ ಆಶ್ರಮಕ್ಕೆ ತೆರಳಿದ್ದಾರಾ ಸಮಂತಾ?; ಉತ್ತರ ನೀಡುತ್ತಿವೆ ಈ ಚಿತ್ರಗಳು
ಸಮಂತಾ
TV9 Web
| Edited By: |

Updated on: Oct 20, 2021 | 4:21 PM

Share

ದಾಂಪತ್ಯ ಜೀವನದಿಂದ ಹೊರ ಬಂದ ಬೆನ್ನಲ್ಲೇ ಟಾಲಿವುಡ್ ನಟಿ ಸಮಂತಾ ರಿಷಿಕೇಶಕ್ಕೆ ತೆರಳಿದ್ದಾರೆ. ತಾವು ತಂಗಿರುವ ಬೆಟ್ಟಗಳ ನಡುವಿರುವ ರೆಸಾರ್ಟ್​ನಿಂದ ಮನಮೋಹಕ ಚಿತ್ರಗಳನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಸುಂದರವಾಗಿರುವ ಈಜುಕೊಳದ ಚಿತ್ರವನ್ನೂ ಅವರು ಹಂಚಿಕೊಂಡಿದ್ದು, ಎಲ್ಲರ ಗಮನ ಸೆಳೆದಿದೆ. ಇವುಗಳಿಗಿಂತ ಹೆಚ್ಚಾಗಿ ಸದ್ಯ ಚರ್ಚೆಯಾಗುತ್ತಿರುವುದು ಸಮಂತಾ ಹಂಚಿಕೊಂಡಿರುವ ಆಶ್ರಮದ ಚಿತ್ರಗಳು. ಆಶ್ರಮವೊಂದರ ದ್ವಾರದ ಹಾಗೂ ಅಲ್ಲಿರುವ ಫಲಕವೊಂದರ ಚಿತ್ರಗಳನ್ನು ಸಮಂತಾ ಪೋಸ್ಟ್ ಮಾಡಿದ್ದು, ಅವರು ಆಶ್ರಮಕ್ಕೆ ತೆರಳಿದ್ದಾರೆಯೇ ಎಂಬ ಪ್ರಶ್ನೆಯನ್ನೂ ಹುಟ್ಟುಹಾಕಿದೆ.

ರಿಷಿಕೇಶದಲ್ಲಿರುವ ಶ್ರೀ ಸ್ವಾಮಿ ಪುರುಷೋತ್ತಮಾನಂದ ಜೀ ಮಹರಾಜ್ ವಸಿಷ್ಠ್ ಆಶ್ರಮದ ದ್ವಾರದ ಚಿತ್ರವನ್ನು ಸಮಂತಾ ಹಂಚಿಕೊಂಡಿದ್ದಾರೆ. ಜೊತೆಗೆ ‘ಸಂತಸ ಬೇರೆಲ್ಲೂ ಇಲ್ಲ, ನಮ್ಮೊಳಗಿದೆ’ ಎಂದು ಬರೆದುಕೊಂಡಿರುವ ಫಲಕದ ಚಿತ್ರವನ್ನೂ ಹಂಚಿಕೊಂಡಿದ್ದು, ಸಮಂತಾ ರಜೆಯ ಅವಧಿಯಲ್ಲಿ ಆಶ್ರಮಕ್ಕೂ ತೆರಳಿದ್ದಾರೆ ಎಂಬುದನ್ನು ಸಾಬೀತುಪಡಿಸುವಂತಿದೆ. ಒಟ್ಟಿನಲ್ಲಿ ವಿವಿಧ ಚಟುವಟಿಕೆಗಳ ಮೂಲಕ ಸಮಂತಾ ತಮ್ಮನ್ನು ತಾವು ಸದಾ ಕ್ರಿಯಾಶೀಲರಾಗಿಟ್ಟುಕೊಂಡಿದ್ದಾರೆ.

ಸಮಂತಾ ಹಂಚಿಕೊಂಡ ಆಶ್ರಮದ ಚಿತ್ರಗಳು ಇಲ್ಲಿವೆ:

Samantha went to Ashram

ಸಮಂತಾ ಹಂಚಿಕೊಂಡ ಆಶ್ರಮದ ಚಿತ್ರ

ಕೆಲ ಸಮಯದ ಹಿಂದಷ್ಟೇ ಸಾಮಾಜಿಕ ಜಾಲತಾಣಗಳ ಮುಖಾಂತರ ಸಮಂತಾ ಹಾಗೂ ನಾಗ ಚೈತನ್ಯ ಪರಸ್ಪರ ದೂರವಾಗುತ್ತಿರುವ ನಿರ್ಧಾರವನ್ನು ಘೋಷಿಸಿದ್ದರು. ಇದೊಂದು ಕಠಿಣ ನಿರ್ಧಾರವಾಗಿದ್ದು, ಬಹಳ ನೋವು ನೀಡುತ್ತಿದೆ ಎಂದೂ ಅವರು ಬರೆದುಕೊಂಡಿದ್ದರು. ಇತ್ತೀಚೆಗೆ ಅವರು ಡಿವೋರ್ಸ್​​ ಕುರಿತು ಹರಿದಾಡುತ್ತಿರುವ ವೈಯಕ್ತಿಕ ದಾಳಿಯ ವಿರುದ್ಧ ಮಾತನಾಡಿ, ಅವುಗಳನ್ನು ಸಂಪೂರ್ಣ ನಿರಾಕರಿಸಿದ್ದರು.

ಇದನ್ನೂ ಓದಿ:

‘ಇಲ್ಲಿ ಕೂರಲು ಭಯವಾಗುತ್ತಿದೆ’; ಡಿವೋರ್ಸ್ ಬಳಿಕ ಮೊದಲ ಬಾರಿಗೆ ಸ್ಕ್ರೀನ್ ಮೇಲೆ ಕಾಣಿಸಿಕೊಂಡ ಸಮಂತಾ ಮಾತು

ಕರ್ನಾಟಕದಲ್ಲಿ ‘ಸಲಗ’ ವಿಜಯಯಾತ್ರೆ; ಯಾರೆಲ್ಲಾ ಪಾಲ್ಗೊಳ್ಳಲಿದ್ದಾರೆ?

ಯಶ್​ 19ನೇ ಸಿನಿಮಾ ಬಗ್ಗೆ ಹರಿದಾಡುತ್ತಿರುವ ಸುದ್ದಿಯ ಅಸಲಿಯತ್ತೇನು?

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!