AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಗಂಡನ ಫ್ಯಾಮಿಲಿ ಕಡೆಗೆ ಮತ್ತೆ ಒಲವು ತೋರಿದ ಸಮಂತಾ; ಏನಿದು ಹೊಸ ಸಮಾಚಾರ?

ಅಕ್ಕಿನೇನಿ ಫ್ಯಾಮಿಲಿ ಸದಸ್ಯರ ಕಡೆಗೆ ಸಮಂತಾ ಒಲವು ತೋರಿಸುತ್ತಿದ್ದಾರೆ. ನಾಗ ಚೈತನ್ಯ ಅವರ ಕಿರಿಯ ಸಹೋದರ ಅಕ್ಕಿನೇನಿ ಅಖಿಲ್​ಗೆ ಅವರು ವಿಶ್​ ಮಾಡಿದ್ದಾರೆ.​

ಮಾಜಿ ಗಂಡನ ಫ್ಯಾಮಿಲಿ ಕಡೆಗೆ ಮತ್ತೆ ಒಲವು ತೋರಿದ ಸಮಂತಾ; ಏನಿದು ಹೊಸ ಸಮಾಚಾರ?
ಸಮಂತಾ
Follow us
TV9 Web
| Updated By: ಮದನ್​ ಕುಮಾರ್​

Updated on: Apr 09, 2022 | 12:07 PM

ನಟಿ ಸಮಂತಾ (Samantha) ಅವರು ಅಕ್ಕಿನೇನಿ ಕುಟುಂಬದಿಂದ ಹೊರಬಂದು ಬಹಳ ದಿನಗಳೇ ಕಳೆದಿವೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯ ಜೀವನಕ್ಕೆ ಅವರು ಅಂತ್ಯ ಹಾಡಿದ ಬಳಿಕ ಸಿಂಗಲ್​ ಆಗಿ ಬದುಕು ಸಾಗಿಸುತ್ತಿದ್ದಾರೆ. ಪರಸ್ಪರ ಪ್ರೀತಿಸಿ ಮದುವೆ ಆಗಿ, ನಾಲ್ಕು ವರ್ಷಗಳ ಕಾಲ ಯಾವುದೇ ಕಿರಿಕ್​ ಇಲ್ಲದೇ ಸಂಸಾರ ನಡೆಸಿದ ಈ ಜೋಡಿ ಏಕಾಏಕಿ ವಿಚ್ಛೇದನ ಪಡೆಯಬಹುದು ಎಂದು ಯಾರೂ ಊಹಿಸಿರಲಿಲ್ಲ. ನಾಗ ಚೈತನ್ಯ (Naga Chaitanya) ಮತ್ತು ಸಮಂತಾ ಡಿವೋರ್ಸ್​ ಪಡೆಯಲು ಕಾರಣ ಏನು ಎಂಬುದು ಈವರೆಗೂ ತಿಳಿದುಬಂದಿಲ್ಲ. ಮಾಜಿ ಪತಿಗೆ ಸಂಬಂಧಿಸಿದ ಎಲ್ಲ ಪೋಸ್ಟ್​ಗಳನ್ನು ಕೂಡ ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಿಂದ ಡಿಲೀಟ್​ ಮಾಡಿರುವ ಸಮಂತಾ ಅವರು ಅಕ್ಕಿನೇನಿ ಕುಟುಂಬದಿಂದ ಪೂರ್ತಿ ಸಂಪರ್ಕ ಕಡಿದುಕೊಂಡಿದ್ದರು. ಆದರೆ ಈಗ ಅವರೇಕೋ ಮತ್ತೆ ಆ ಫ್ಯಾಮಿಲಿ ಸದಸ್ಯರ ಕಡೆಗೆ ಒಲವು ತೋರಿಸುತ್ತಿದ್ದಾರೆ. ನಾಗ ಚೈತನ್ಯ ಅವರ ಕಿರಿಯ ಸಹೋದರ ಅಕ್ಕಿನೇನಿ ಅಖಿಲ್​ (Akhil Akkineni) ಅವರಿಗೆ ಏ.8ರಂದು ಜನ್ಮದಿನದ ಸಂಭ್ರಮ. ಆ ಪ್ರಯುಕ್ತ ಸಮಂತಾ ಅವರು ವಿಶೇಷವಾಗಿ ಶುಭ ಹಾರೈಸಿದ್ದಾರೆ. ಅಭಿಮಾನಿಗಳ ವಲಯದಲ್ಲಿ ಈ ವಿಷಯ ಚರ್ಚೆ ಆಗುತ್ತಿದೆ.

‘ಹ್ಯಾಪಿ ಬರ್ತ್​ಡೇ ಅಖಿಲ್​ ಅಕ್ಕಿನೇನಿ. ಈ ವರ್ಷ ನಿಮಗೆ ಅತ್ಯುತ್ತಮವಾಗಿರಲಿ ಅಂತ ಹಾರೈಸುತ್ತೇನೆ. ನೀವು ಬಯಸಿದ್ದೆಲ್ಲವೂ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ದೇವರು ಒಳ್ಳೆಯದು ಮಾಡಲಿ’ ಎಂದು ಸಮಂತಾ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ಇದು ಅನೇಕರ ಅಚ್ಚರಿಗೆ ಕಾರಣ ಆಗಿದೆ. ಕೆಲವೇ ದಿನಗಳ ಹಿಂದೆ ಸಮಂತಾ ಅವರು ‘ಮಜಿಲಿ’ ಸಿನಿಮಾದ ಪೋಸ್ಟರ್​ ಅನ್ನು ಇದೇ ರೀತಿ ಶೇರ್​ ಮಾಡಿಕೊಂಡಿದ್ದರು. ಅದರಲ್ಲಿ ಮಾಜಿ ಪತಿ ನಾಗ ಚೈತನ್ಯ ಫೋಟೋ ಹೈಲೈಟ್​ ಆಗಿತ್ತು. ಹೀಗೆ ಒಂದಿಲ್ಲೊಂದು ರೀತಿಯಲ್ಲಿ ಅಕ್ಕಿನೇನಿ ಕುಟುಂಬದ ಕಡೆಗೆ ಸಮಂತಾ ಒಲವು ತೋರಿಸುತ್ತಿರುವುದು ಅಭಿಮಾನಿಗಳ ಅನುಮಾನಕ್ಕೆ ಕಾರಣ ಆಗಿದೆ.

ವಿಚ್ಛೇದನ ಪಡೆದ ನಂತರ ಒಂದಷ್ಟು ದಿನಗಳು ಕಳೆದ ಬಳಿಕ ಇನ್​ಸ್ಟಾಗ್ರಾಮ್​ನಲ್ಲಿ ನಾಗ ಚೈತನ್ಯ ಅವರನ್ನು ಸಮಂತಾ ಅನ್​ಫಾಲೋ ಮಾಡಿದರು. ಅದು ಅವರ ವೈಯಕ್ತಿಕ ನಿರ್ಧಾರ. ಆದರೆ ಸಿನಿಮಾ ವಿಚಾರದಲ್ಲಿ ಅವರು ಬೇರೆಯದೇ ನಿಲುವು ಹೊಂದಿದ್ದಾರೆ. ‘ಮಜಿಲಿ’ ಚಿತ್ರಕ್ಕೆ 3 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಅವರು ಪೋಸ್ಟರ್​ ಶೇರ್​ ಮಾಡಿಕೊಂಡಿದ್ದರು.  2019ರ ಏ.5ರಂದು ‘ಮಜಿಲಿ’ ಸಿನಿಮಾ ತೆರೆಕಂಡಿತ್ತು. ನಾಗ ಚೈತನ್ಯ ಮತ್ತು ಸಮಂತಾ ಅವರು ಜೋಡಿಯಾಗಿ ನಟಿಸಿದ್ದ 4ನೇ ಚಿತ್ರ ಅದಾಗಿತ್ತು. ಪ್ರೇಕ್ಷಕರಿಂದ ಒಳ್ಳೆಯ ವಿಮರ್ಶೆ ಪಡೆಯುವುದರ ಜೊತೆಗೆ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆ ಮಾಡಿತ್ತು. ಹಾಗಾಗಿ ಸಮಂತಾ ಪಾಲಿಗೆ ‘ಮಜಿಲಿ’ ಚಿತ್ರ ಸ್ಪೆಷಲ್. ‘ಯೇ ಮಾಯ ಚೇಸಾವೆ’, ‘ಮನಂ’, ‘ಆಟೋನಗರ್​ ಸೂರ್ಯ’ ಮತ್ತು ‘ಮಜಿಲಿ’ ಸಿನಿಮಾಗಳಲ್ಲಿ ಸಮಂತಾ ಮತ್ತು ನಾಗ ಚೈತನ್ಯ ಜೊತೆಯಾಗಿ ತೆರೆ ಹಂಚಿಕೊಂಡಿದ್ದಾರೆ.

ಚಿತ್ರರಂಗದಲ್ಲಿ ಸಮಂತಾ ಅವರಿಗೆ ಸಖತ್​ ಡಿಮ್ಯಾಂಡ್​​ ಇದೆ. ಹಲವು ಪ್ರಾಜೆಕ್ಟ್​ಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ವಿಘ್ನೇಶ್​ ಶಿವನ್​ ನಿರ್ದೇಶನ ಮಾಡುತ್ತಿರುವ ‘ಕಾದು ವಾಕುಲ ರೆಂಡು ಕಾದಲ್​’ ಚಿತ್ರದಲ್ಲಿ ಸಮಂತಾ ಮುಖ್ಯಪಾತ್ರ ಮಾಡಿದ್ದಾರೆ. ಇತ್ತೀಚೆಗಷ್ಟೇ ಅದರ ಶೂಟಿಂಗ್ ಮುಗಿಸಲಾಗಿದೆ. ‘ಶಾಕುಂತಲಂ’, ‘ಯಶೋಧ’ ಇತ್ಯಾದಿ ಬಹುನಿರೀಕ್ಷಿತ ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ. ಇಂಗ್ಲಿಷ್​ ನಿರ್ದೇಶಕ ಫಿಲಿಪ್​​ ಜಾನ್​ ಅವರ ‘ಅರೇಂಜ್​ಮೆಂಟ್ಸ್​ ಆಫ್​ ಲವ್​’ ಚಿತ್ರದಲ್ಲೂ ಸಮಂತಾ ಅಭಿನಯಿಸುತ್ತಿದ್ದಾರೆ. ಒಟ್ಟಿನಲ್ಲಿ ವಿಚ್ಛೇದನದ ಬಳಿಕ ಅವರ ವೃತ್ತಿಜೀವನ ಸೂಪರ್ ಆಗಿದೆ.

ಇದನ್ನೂ ಓದಿ:

ಸಮಂತಾಗೆ ಡ್ಯಾನ್ಸ್​ ಸ್ಟೆಪ್​ ಹೇಳಿಕೊಟ್ಟಿದ್ದ ಖ್ಯಾತ ಕೊರಿಯೋಗ್ರಾಫರ್​ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಪಡ್ಡೆಗಳ ಕಣ್ಣು ಕುಕ್ಕಿದ ಸಮಂತಾ ಹೊಸ ಅವತಾರ; ಇಲ್ಲಿದೆ ಫೋಟೋ ಗ್ಯಾಲರಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ