AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಗಂಡನ ಕುಟುಂಬದ ಮೇಲೆ ಸಮಂತಾಗೆ ಇನ್ನೂ ಕಡಿಮೆ ಆಗಿಲ್ಲ ಪ್ರೀತಿ; ಇಲ್ಲಿದೆ ಹೊಸ ಸಾಕ್ಷಿ

Samantha | Akhil Akkineni: ಇನ್​​ಸ್ಟಾಗ್ರಾಮ್​ ಸ್ಟೋರಿ ಮೂಲಕ ಸಮಂತಾ ಅವರು ಅಖಿಲ್​ ಅಕ್ಕಿನೇನಿಗೆ ಶುಭ ಹಾರೈಸಿದ್ದಾರೆ. ‘ಏಜೆಂಟ್​’ ಸಿನಿಮಾ ಸೂಪರ್​ ಹಿಟ್​ ಆಗಲಿ ಎಂದು ಅವರು ವಿಶ್​ ಮಾಡಿದ್ದಾರೆ.

ಮಾಜಿ ಗಂಡನ ಕುಟುಂಬದ ಮೇಲೆ ಸಮಂತಾಗೆ ಇನ್ನೂ ಕಡಿಮೆ ಆಗಿಲ್ಲ ಪ್ರೀತಿ; ಇಲ್ಲಿದೆ ಹೊಸ ಸಾಕ್ಷಿ
ಸಮಂತಾ ರುತ್ ಪ್ರಭು
ಮದನ್​ ಕುಮಾರ್​
|

Updated on:Apr 09, 2023 | 8:40 AM

Share

ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರು ಈಗ ಒಂಟಿಯಾಗಿ ಜೀವನ ಸಾಗಿಸುತ್ತಿದ್ದಾರೆ. ಪ್ರೀತಿಸಿ ಮದುವೆ ಆಗಿದ್ದ ನಾಗ ಚೈತನ್ಯ (Naga Chaitany) ಮತ್ತು ಸಮಂತಾ ನಡುವೆ ವೈಮನಸ್ಸು ಮೂಡಿದ್ದು ಬೇಸರದ ಸಂಗತಿ. ವಿಚ್ಛೇದನದ ಬಳಿಕ ಮಾಜಿ ಗಂಡನ ಬಗ್ಗೆ ಸಮಂತಾ ಎಲ್ಲಿಯೂ ಮಾತನಾಡಿಲ್ಲ. ಇಬ್ಬರ ಡಿವೋರ್ಸ್​ಗೆ ನಿಜವಾದ ಕಾರಣ ಏನು ಎಂಬುದು ಇನ್ನೂ ಗೌಪ್ಯವಾಗಿಯೇ ಉಳಿದಿದೆ. ಅಚ್ಚರಿ ಏನೆಂದರೆ, ನಾಗ ಚೈತನ್ಯ ಕುಟುಂಬದ ಬಗ್ಗೆ ಸಮಂತಾ ಅವರಿಗೆ ಇನ್ನೂ ಪ್ರೀತಿ ಇದೆ. ಅದಕ್ಕೆ ಹೊಸ ಸಾಕ್ಷಿ ಎಂಬಂತೆ ನಾಗ ಚೈತನ್ಯ ಅವರ ಸಹೋದರ ಅಖಿಲ್​ ಅಕ್ಕಿನೇನಿಗೆ (Akhil Akkineni) ಸಮಂತಾ ಅವರು ಬರ್ತ್​ಡೇ ವಿಶ್​ ಮಾಡಿದ್ದಾರೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಅಖಿಲ್​ ಅಕ್ಕಿನೇನಿ ಅವರಿಗೆ ಈಗ 29 ವರ್ಷ ವಯಸ್ಸು. ಶನಿವಾರ (ಏಪ್ರಿಲ್​ 08) ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಆ ಪ್ರಯುಕ್ತ ಅವರ ಹೊಸ ಸಿನಿಮಾ ‘ಏಜೆಂಟ್​’ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಸ್ನೇಹಿತರು, ಅಭಿಮಾನಿಗಳು, ಸೆಲೆಬ್ರಿಟಿಗಳು ಅಖಿಲ್​ಗೆ ಶುಭಾಶಯ ಕೋರಿದ್ದಾರೆ. ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ಸಮಂತಾ ಕೂಡ ಅಖಿಲ್​ಗೆ ಶುಭ ಹಾರೈಸಿದ್ದಾರೆ. ‘ಏಜೆಂಟ್​’ ಸಿನಿಮಾ ಸೂಪರ್​ ಹಿಟ್​ ಆಗಲಿ ಎಂದು ಅವರು ವಿಶ್​ ಮಾಡಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕಾ ಚೋಪ್ರಾ ರೀತಿ ಬ್ಯಾಕ್​ಲೆಸ್​ ಆಗಿ ನಟಿಸ್ತಾರಾ ಸಮಂತಾ ರುತ್​ ಪ್ರಭು?

ಇದನ್ನೂ ಓದಿ
Image
Naga Chaitanya: ‘ಸಮಂತಾ ಸಿಕ್ಕರೆ ತಬ್ಬಿಕೊಳ್ತೀನಿ, ಟ್ಯಾಟೂ ತೆಗೆಸಲ್ಲ’: ಹಳೇ ಹೆಂಡತಿ ಬಗ್ಗೆ ನಾಗ ಚೈತನ್ಯ ನೇರ ಮಾತು
Image
Samantha: ನಾಗ ಚೈತನ್ಯ ಜತೆ ವಾಸಿಸಿದ್ದ ಮನೆಯನ್ನು ದುಬಾರಿ ಬೆಲೆ ಕೊಟ್ಟು ಖರೀದಿಸಿದ ಸಮಂತಾ; ಏನಿದು ಸೆಂಟಿಮೆಂಟ್​?
Image
Samantha: ‘ನಾಗ ಚೈತನ್ಯಗೆ ಡಿವೋರ್ಸ್​ ನೀಡಿದ ಬಳಿಕ ಕಷ್ಟ ಆಯ್ತು’; ಕಡೆಗೂ ನಿಜ ಒಪ್ಪಿಕೊಂಡ ಸಮಂತಾ
Image
‘ಊ ಅಂಟಾವಾ ಮಾವ..’ ಎಂದು ಸಖತ್ ಆಗಿ ಸ್ಟೆಪ್ ಹಾಕಿದ ಸಮಂತಾ-ಅಕ್ಷಯ್ ಕುಮಾರ್

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಏಜೆಂಟ್​’ ಸಿನಿಮಾ ರಿಲೀಸ್​ ಆಗಲಿದೆ. ತೆಲುಗಿನ ಜೊತೆಗೆ ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳಿನಲ್ಲಿ ಈ ಚಿತ್ರ ತೆರೆಕಾಣಲಿದೆ. ಏಪ್ರಿಲ್​ 28ರಂದು ಚಿತ್ರವನ್ನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಹೊಸ ಪೋಸ್ಟರ್​ನಲ್ಲಿ ಅಖಿಲ್​ ಅಕ್ಕಿನೇನಿ ಅವರು ಗನ್​ ಹಿಡಿದು ಪೋಸ್​ ನೀಡಿದ್ದಾರೆ.

ಇದನ್ನೂ ಓದಿ: Samantha: ‘ನಾನು ಇದನ್ನು ಹೇಳಲೇ ಇಲ್ಲ’: ಮಾಜಿ ಗಂಡನ ವಿಷಯಕ್ಕೆ ಸ್ಪಷ್ಟನೆ ನೀಡಿದ ಸಮಂತಾ

ಇನ್ನು, ಸಮಂತಾ ಅವರ ಸಿನಿಮಾಗಳ ವಿಚಾರಕ್ಕೆ ಬರುವುದಾದರೆ ಏಪ್ರಿಲ್​ 14ರಂದು ‘ಶಾಕುಂತಲಂ’ ಚಿತ್ರ ಬಿಡುಗಡೆ ಆಗಲಿದೆ. ಪೌರಾಣಿಕ ಕಥಾಹಂದರ ಇರುವ ಈ ಸಿನಿಮಾದಲ್ಲಿ ಸಮಂತಾ ಅವರು ಶಕುಂತಲೆಯ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಅವರು ಬ್ಯುಸಿ ಆಗಿದ್ದಾರೆ. ‘ಶಾಕುಂತಲಂ’ ಚಿತ್ರಕ್ಕೆ ಗುಣಶೇಖರ್​ ಅವರು ನಿರ್ದೇಶನ ಮಾಡಿದ್ದಾರೆ. ಅಲ್ಲು ಅರ್ಜುನ್​ ಪುತ್ರಿ ಅಲ್ಲು ಅರ್ಹಾ ಕೂಡ ಇದರಲ್ಲಿ ನಟಿಸಿರುವುದು ವಿಶೇಷ. ಅಭಿಮಾನಿಗಳು ಈ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: Rashmika Mandanna: ರಶ್ಮಿಕಾ ಮಂದಣ್ಣಗೆ ಮಹಿಳಾ ಪ್ರಧಾನ ಸಿನಿಮಾ ಸಿಗಲು ಕಾರಣವಾಗಿದ್ದು ಸಮಂತಾ

ಸಮಂತಾ ಅವರ ಕೈಯಲ್ಲಿ ಹಲವು ಸಿನಿಮಾ ಆಫರ್​ಗಳಿವೆ. ವಿಜಯ್​ ದೇವರಕೊಂಡ ಜೊತೆ ‘ಖುಷಿ’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಪ್ರಿಯಾಂಕಾ ಚೋಪ್ರಾ ಅಭಿನಯಿಸುತ್ತಿರುವ ‘ಸಿಟಾಡೆಲ್​’ ವೆಬ್​ ಸಿರೀಸ್​ನ ಭಾರತದ ವರ್ಷನ್​ನಲ್ಲಿ ಸಮಂತಾ ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:40 am, Sun, 9 April 23

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ