AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TikTok Star Suicide: ಟಿಕ್​ಟಾಕ್​ ಸ್ಟಾರ್​ ಸಮೀರ್​ ಗಾಯಕ್​ವಾಡ್​​ ಆತ್ಮಹತ್ಯೆ, 21 ವರ್ಷದ ಯುವಕನ ಸಾವಿಗೆ ಕಾರಣವೇನು?

Sameer Gaikwad: ಸಾಮಾಜಿಕ ಜಾಲತಾಣಗಳಲ್ಲಿ (Social Media) ಸಕ್ರಿಯರಾಗಿದ್ದ ಸಮೀರ್​ ಗಾಯಕ್​ವಾಡ್​ ಅಪಾರ ಪ್ರಮಾಣದ ಅಭಿಮಾನಿಗಳನ್ನೂ ಗಳಿಸಿದ್ದರು. ಇದೀಗ ಅವರ ಸಾವು ಅಭಿಮಾನಿಗಳಿಗೆ ಆಘಾತ ಉಂಟುಮಾಡಿದೆ.

TikTok Star Suicide: ಟಿಕ್​ಟಾಕ್​ ಸ್ಟಾರ್​ ಸಮೀರ್​ ಗಾಯಕ್​ವಾಡ್​​ ಆತ್ಮಹತ್ಯೆ, 21 ವರ್ಷದ ಯುವಕನ ಸಾವಿಗೆ ಕಾರಣವೇನು?
ಸಮೀರ್​ ಗಾಯಕ್​ವಾಡ್​
Skanda
| Edited By: |

Updated on:Feb 22, 2021 | 11:20 AM

Share

ಮುಂಬೈ: ಟಿಕ್​ಟಾಕ್ (TikTok)​ ಮೂಲಕ ಪ್ರಸಿದ್ಧಿಯಾಗಿದ್ದ ಮಹಾರಾಷ್ಟ್ರ ಮೂಲದ 22 ವರ್ಷದ ಯುವಕ ಸಮೀರ್​ ಗಾಯಕ್​ವಾಡ್ (Sameer Gaikwad)​ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ (Social Media) ಸಕ್ರಿಯರಾಗಿದ್ದ ಸಮೀರ್​ ಗಾಯಕ್​ವಾಡ್​ ಅಪಾರ ಪ್ರಮಾಣದ ಅಭಿಮಾನಿಗಳನ್ನೂ ಗಳಿಸಿದ್ದರು. ಇದೀಗ ಅವರ ಸಾವು ಅಭಿಮಾನಿಗಳಿಗೆ ಆಘಾತ ಉಂಟುಮಾಡಿದ್ದು, ಹಲವು ಪ್ರಶ್ನೆಗಳನ್ನೂ ಹುಟ್ಟುಹಾಕಿದೆ. 

ಲೋನಿಕಂದ್ ಪೊಲೀಸರು ತಿಳಿಸಿರುವ ಪ್ರಕಾರ ಸಮೀರ್ ಆತ್ಮಹತ್ಯೆ ಕುರಿತಾಗಿ ಆತನ ಸ್ನೇಹಿತರು ಸೋದರ ಸಂಬಂಧಿ ಪ್ರಫುಲ್ಲ ಗಾಯಕ್​ವಾಡ್​ಗೆ ಮೊದಲು ವಿಷಯ ಮುಟ್ಟಿಸಿದ್ದಾರೆ. ತಕ್ಷಣ ಎಚ್ಚೆತ್ತ ಪ್ರಫುಲ್ಲ ಗಾಯಕ್​ವಾಡ್ ಪೊಲೀಸರಿಗೆ ಮಾಹಿತಿ ನೀಡಿ ವಾಘೋಲಿಯ ಕೇಸ್​ನಂದ್ ರಸ್ತೆಯಲ್ಲಿರುವ ಸಮೀರ್ ಅವರ ಫ್ಲಾಟ್​ಗೆ ಆಗಮಿಸಿದ್ದಾರೆ. ನಂತರ ತುರ್ತಾಗಿ ಸಮೀರ್​ ಅವರನ್ನು ಲೈಫ್​ಲೈನ್​ ಆಸ್ಪತ್ರೆಗೆ ಕರೆದೊಯ್ಯಯಲಾಯಿತಾದರೂ ಅಲ್ಲಿನ ವೈದ್ಯರು ಸಮೀರ್​ ಅದಾಗಲೇ ಸಾವಿಗೀಡಾಗಿರುವುದನ್ನು ದೃಢಪಡಿಸಿದ್ದಾರೆ.

ಸಮೀರ್​ ಗಾಯಕ್​ವಾಡ್​ ಅವರ ರೆಡ್​ಲೈಟ್​ ಡೈರೀಸ್​ ಎಂಬ ಬ್ಲಾಗ್​ ಸೀರಿಸ್​ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅತ್ಯುತ್ತಮ ಪ್ರತಿಕ್ರಿಯೆ ಕೂಡ ಸಿಕ್ಕಿದ್ದು, ಆತನ ಪ್ರತಿಭೆಯನ್ನು ಅನೇಕರು ಮೆಚ್ಚಿಕೊಂಡಿದ್ದರು. ಸಾವಿಗೆ ಒಂದು ದಿನ ಮುಂಚೆಯೂ ತನ್ನ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಳೆಯ ವಿಡಿಯೋ ಒಂದನ್ನು ಅಪ್​ಲೋಡ್ ಮಾಡಿದ್ದ ಸಮೀರ್​, ಉತ್ತಮ ಪ್ರತಿಕ್ರಿಯೆ ಪಡೆದಿದ್ದರು. ಇನ್​ಸ್ಟಾಗ್ರಾಂನಲ್ಲಿ ಸುಮಾರು 2,73,090 ಜನ ಹಿಂಬಾಲಕರನ್ನು ಹೊಂದಿದ್ದ ಯುವಕ ಟಿಕ್​ಟಾಕ್ ಬ್ಯಾನ್ ನಂತರ ಇನ್​ಸ್ಟಾಗ್ರಾಂ ರೀಲ್ಸ್​ ಮೂಲಕ ಅಭಿಮಾನಿಗಳನ್ನು ತಲುಪುತ್ತಿದ್ದರು.

ಮರಾಠಿ ಭಾಷೆಯಲ್ಲಿ ಅನೇಕ ಅಭಿಮಾನಿಗಳನ್ನು ಹೊಂದಿದ್ದ ಈ ಯುವಕ ಹೀಗೆ ಆತ್ಮಹತ್ಯೆಗೆ ಶರಣಾಗಿರುವುದಕ್ಕೆ ಯಾವುದೇ ನಿಖರ ಮಾಹಿತಿಗಳು ಲಭ್ಯವಾಗಿಲ್ಲ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆಯೇ ಕಂಡುಬರುತ್ತಿದ್ದು, ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಶೀಘ್ರವೇ ಆತನ ಕುಟುಂಬಸ್ಥರು ಮತ್ತು ಆಪ್ತರಿಂದ ಮಾಹಿತಿ ಕಲೆ ಹಾಕಲಾಗುವುದು ಎಂದು ಲೋನಿಕಂದ್ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: 18ನೇ ವಯಸ್ಸಿಗೆ ನೇಣಿಗೆ ಶರಣಾದ ಟಿಕ್‌ಟಾಕ್ ತಾರೆ ಡಜಾರಿಯಾ ಕ್ವಿಂಟ್, ಆತ್ಮಹತ್ಯೆಗೆ ಕಾರಣವೇನು?

Published On - 11:17 am, Mon, 22 February 21

Follow Us
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ