AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanchari Vijay: ನಟ ಸಂಚಾರಿ ವಿಜಯ್​​ಗೆ ಬೈಕ್ ಅಪಘಾತ; ಪ್ರಜ್ಞಾಹೀನ ಸ್ಥಿತಿಯಲ್ಲಿ ಸ್ಯಾಂಡಲ್​ವುಡ್​ ಹೀರೋ

Sanchari Vijay Accident: ಶನಿವಾರ (ಜೂನ್​ 12) ರಾತ್ರಿ ಬೈಕ್​ ಅಪಘಾತ ಸಂಭವಿಸಿದೆ. ಅವರನ್ನು ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮೆದುಳಿನ ಬಲ ಭಾಗದಲ್ಲಿ ರಕ್ತಸ್ರಾವ ಉಂಟಾಗಿದ್ದು, ತೊಡೆಯಲ್ಲಿ ಗಾಯಗಳಾಗಿವೆ.

Sanchari Vijay: ನಟ ಸಂಚಾರಿ ವಿಜಯ್​​ಗೆ ಬೈಕ್ ಅಪಘಾತ; ಪ್ರಜ್ಞಾಹೀನ ಸ್ಥಿತಿಯಲ್ಲಿ ಸ್ಯಾಂಡಲ್​ವುಡ್​ ಹೀರೋ
ಸಂಚಾರಿ ವಿಜಯ್
ರಾಜೇಶ್ ದುಗ್ಗುಮನೆ
| Edited By: |

Updated on:Jun 13, 2021 | 4:59 PM

Share

2020ರಲ್ಲಿ ಸ್ಯಾಂಡಲ್​ವುಡ್​ ಸಾಕಷ್ಟು ನೋವು ತಿಂದಿದೆ. ಇದು ಈಗ 2021ಕ್ಕೂ ವಿಸ್ತರಣೆ ಆದಂತೆ ಕಾಣುತ್ತಿದೆ. ಸ್ಯಾಂಡಲ್​ವುಡ್​ನಲ್ಲಿ ಭಿನ್ನ ನಟನೆ ಮೂಲಕ ಗುರುತಿಸಿಕೊಂಡ ನಟ ಸಂಚಾರಿ ವಿಜಯ್​ ಅವರು ಅಪಘಾತಕ್ಕೆ ತುತ್ತಾಗಿದ್ದಾರೆ. ಬೈಕ್​ನಲ್ಲಿ ಸಂಚಾರ ಮಾಡುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ.

ಶನಿವಾರ (ಜೂನ್​ 12) ರಾತ್ರಿ ಬೈಕ್​ ಅಪಘಾತ ಸಂಭವಿಸಿದೆ. ಅವರನ್ನು ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮೆದುಳಿನ ಬಲ ಭಾಗದಲ್ಲಿ ರಕ್ತಸ್ರಾವ ಉಂಟಾಗಿದ್ದು, ತೊಡೆಯಲ್ಲಿ ಗಾಯಗಳಾಗಿವೆ. ನಿನ್ನೆ ರಾತ್ರಿಯೇ ಅವರಿಗೆ ವೈದ್ಯರು ಮೆದುಳಿನ ಶಸ್ತ್ರಚಿಕಿತ್ಸೆ  ನಡೆಸಿದ್ದಾರೆ. ಸದ್ಯ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.

2011ರಲ್ಲಿ ತೆರೆಗೆ ಬಂದ ‘ರಂಗಪ್ಪ ಹೋಗ್​ಬಿಟ್ನಾ’ ಸಿನಿಮಾ ಮೂಲಕ ಸಂಚಾರಿ ವಿಜಯ್​ ಚಿತ್ರರಂಗಕ್ಕೆ ಕಾಲಿಟ್ಟರು. 2015ರಲ್ಲಿ ತೆರೆಗೆ ಬಂದ ‘ನಾನು ಅವನಲ್ಲ.. ಅವಳು’ ಸಿನಿಮಾ ಅವರ ಖ್ಯಾತಿಯನ್ನು ದುಪ್ಪಟ್ಟು ಮಾಡಿತ್ತು. ಈ ಸಿನಿಮಾದಲ್ಲಿ ಅವರ ನಟನೆಗೆ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿಗಳು ಸಿಕ್ಕಿವೆ. ಇದಾದ ನಂತರದಲ್ಲಿ ಅವರು ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿದರು. ಸದ್ಯ, ಎರಡು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಸಂಚಾರಿ ವಿಜಯ್​ ಅಪಘಾತಗೊಂಡಿರುವ ವಿಚಾರ ಕೇಳಿ ಅಭಿಮಾನಿಗಳು ಹಾಗೂ ಸ್ಯಾಂಡಲ್​ವುಡ್​ ಮಂದಿಯಲ್ಲಿ ಆತಂಕ ಮನೆ ಮಾಡಿದೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ರಂಗಭೂಮಿ ಹಿನ್ನೆಲೆಯಿಂದ ಬಂದ ಸಂಚಾರಿ ವಿಜಯ್​ ಓರ್ವ ಪ್ರತಿಭಾನ್ವಿತ ನಟ. 2014ರಲ್ಲಿ ಅವರ ನಟಿಸಿದ ಹರಿವು ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ‘ನಾನು ಅವನಲ್ಲ.. ಅವಳು’ ಚಿತ್ರದ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದ ಬಳಿಕ ಅವರಿಗೆ ಸ್ಯಾಂಡಲ್​ವುಡ್​ನಲ್ಲಿ ಅವಕಾಶಗಳು ಹೆಚ್ಚಾಗಿದ್ದವು. ಲಾಕ್​ಡೌನ್​ ಸಂದರ್ಭದಲ್ಲಿ ಅವರು ಅನೇಕರಿಗೆ ಸಹಾಯ ಮಾಡುತ್ತಿದ್ದರು. ಅಷ್ಟರಲ್ಲೇ ಈ ಅಪಘಾತ ಸಂಭವಿಸಿರುವುದು ನೋವಿನ ಸಂಗತಿ.

ಇದನ್ನೂ ಓದಿ: ಕೊರೊನಾ ವೈರಸ್​ನಿಂದಾಗಿ ಮೂವರು ಆತ್ಮೀಯರನ್ನು ಕಳೆದುಕೊಂಡ ನಟ ಸಂಚಾರಿ ವಿಜಯ್

Published On - 3:50 pm, Sun, 13 June 21

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ