AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಸ್ಟರ್​ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಸಿಹಿ ಸುದ್ದಿ ಹಂಚಿಕೊಂಡ ಶಿವಣ್ಣ

ಸ್ಯಾಂಡಲ್​ವುಡ್ ನ ಹ್ಯಾಟ್ರಿಕ್ ಹೀರೋ , ಅಭಿಮಾನಿಗಳ ಪಾಲಿನ ಮೆಚ್ಚಿನ ಶಿವಣ್ಣ ತಮ್ಮ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಪೋಸ್ಟರ್​ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಸಿಹಿ ಸುದ್ದಿ ಹಂಚಿಕೊಂಡ ಶಿವಣ್ಣ
Actor Shiva Rajkumar
TV9 Web
| Edited By: |

Updated on:Dec 08, 2022 | 9:49 PM

Share

ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ (Hattrick Hero Shivaraj Kumar ) ನಟನೆಯ ಬಹು ನಿರೀಕ್ಷಿತ ‘ವೇದ’ ಸಿನಿಮಾ ಇದೇ ಡಿಸೆಂಬರ್ 23ರಂದು ತೆರೆಗೆ ಬರಲು ಸಜ್ಜಾಗಿದೆ. ಇದಕ್ಕೆ ಅಭಿಮಾನಿಗಳು ಸಹ ಕಾತರದಿಂದ ಕಾಯುತ್ತಿದ್ದಾರೆ. ಇದರ ಮಧ್ಯೆ ತಮ್ಮ ಅಭಿಮಾನಿಗಳಿಗೆ ಗುಡ್​ನ್ಯೂಸ್ ಕೊಟ್ಟಿದ್ದಾರೆ. ಹೌದು.. ಶಿವಣ್ಣ ಎಂದೇ ಹೆಸರಾದ ಸ್ಯಾಂಡಲ್​ವುಡ್(Sandalwood) ಹ್ಯಾಟ್ರಿಕ್ ಶಿವರಾಜ್‍ಕುಮಾರ್ ಇದೀಗ ಕಾಲಿವುಡ್​ಗೆ ಎಂಟ್ರಿಕೊಟ್ಟಿದ್ದಾರೆ.

ಇದನ್ನೂ ಓದಿ: ಜಾಕ್​ ಮಂಜು ನಿರ್ಮಾಣದ ಮುಂದಿನ ಚಿತ್ರದ ಟೈಟಲ್ ಲಾಂಚ್: 5 ಭಾಷೆಗಳಲ್ಲಿ ಚಿತ್ರ ತೆರೆಗೆ

ಅರುಣ್ ಮಾಥೇಶ್ವರನ್ ನಿರ್ದೇಶನದಲ್ಲಿ ಶಿವರಾಜ್ ಕುಮಾರ್ ಅಭಿನಯಿಸಿದ್ದು, ಈ ಬಗ್ಗೆ ಶಿವಣ್ಣ ಸಿನಿಮಾ ಪೋಸ್ಟರ್ ಹಂಚಿಕೊಳ್ಳುವುದರ ಮೂಲಕ ಅಭಿಮಾನಿಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ಇದರೊಂದಿಗೆ ಕಾಲಿವುಡ್ ಗೆ ಸ್ಯಾಂಡಲ್ ವುಡ್ ಶಿವಣ್ಣನ ಆಗಮನವಾಗಿದೆ.

ಸ್ಯಾಂಡಲ್ ವುಡ್ ಶಿವಣ್ಣ ಈಗ ಅರುಣ್ ಮಾಥೇಶ್ವರನ್ ನಿರ್ದೇಶನದ ತಮಿಳು ನಟ ಧನುಷ್ ಅಭಿನಯದ ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲಿ ಸ್ಕ್ರೀನ್ ಶೇರ್ ಮಾಡಲಿದ್ದು, ಧನುಷ್ ಅಣ್ಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕ್ಯಾಪ್ಟನ್ ಮಿಲ್ಲರ್ ಚಿತ್ರಕ್ಕೆ ಸತ್ಯಜ್ಯೋತಿ ಫಿಲ್ಮ್ಸ್‌ ಬಂಡವಾಳ ಹೂಡಿದೆ.

ಇನ್ನು ಸಂದೀಪ್ ಕಿಶನ್ ಮತ್ತು ಪ್ರಿಯಾಂಕಾ ಅರುಲ್ ಮೋಹನ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ತಮಿಳು, ತೆಲುಗು ಹಾಗೂ ಹಿಂದಿಯಲ್ಲಿ ಈ ‘ಕ್ಯಾಪ್ಟನ್ ಮಿಲ್ಲರ್ ಸಿನಿಮಾ ಬಿಡುಗಡೆಯಾಗಲಿದೆ. ಆದ್ರೆ, ಯಾವಾಗ ಏನು ಎನ್ನುವುದು ಮಾತ್ರ ಇನ್ನೂ ಡೇಟ್ ಫಿಕ್ಸ್ ಆಗಿಲ್ಲ. ಚಿತ್ರತಂಡ ಸಹ ಈ ಬಗ್ಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:42 pm, Thu, 8 December 22

Follow Us
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ