AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾಕೆ ನೀನಿನ್ನೂ ಮದುವೆ ಆಗಿಲ್ಲ…ವಿಡಿಯೋ ಮೂಲಕ ಉತ್ತರ ಕೊಟ್ಟ ನಟಿ ರಮ್ಯಾ

Sandalwood ActressRamya: ಸ್ಯಾಂಡಲ್​ವುಡ್​ನಲ್ಲಿ ಕ್ವೀನ್​ ಆಗಿ ಮೆರೆದಿದ್ದ ನಟಿ ರಮ್ಯಾ ಮತ್ತೆ ಕಂಬ್ಯಾಕ್ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇದನ್ನು ಪುಷ್ಠೀಕರಿಸುವಂತೆ ಇತ್ತೀಚಿನ ದಿನಗಳಲ್ಲಿ ಅವರು ಚಿತ್ರರಂಗದ ಪ್ರಮುಖರೊಂದಿಗೆ ಕಾಣಿಸಿಕೊಂಡಿದ್ದರು.

ಯಾಕೆ ನೀನಿನ್ನೂ ಮದುವೆ ಆಗಿಲ್ಲ...ವಿಡಿಯೋ ಮೂಲಕ ಉತ್ತರ ಕೊಟ್ಟ ನಟಿ ರಮ್ಯಾ
Actress Ramya
TV9 Web
| Edited By: |

Updated on: Aug 20, 2022 | 10:29 AM

Share

ಸ್ಯಾಂಡಲ್​ವುಡ್ ಕ್ವೀನ್ ನಟಿ ರಮ್ಯಾ (Actress Ramya) ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಆಕ್ಟೀವ್ ಆಗಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಸಂಗಾತಿ ಕುರಿತಾದ ಹಾಡೊಂದನ್ನು ಇನ್​ಸ್ಟಾಗ್ರಾಮ್ ರೀಲ್ಸ್​ನಲ್ಲಿ ಹಂಚಿಕೊಂಡಿದ್ದ ಮೋಹಕತಾರೆ ಇದೀಗ ಅದೇ ಹಾಡಿಗೆ ರೀಲ್ಸ್ ಮಾಡಿದ್ದಾರೆ. ಆದರೆ ಈ ಹಾಡು ಮುರಿದು ಬಿದ್ದ ಪ್ರೇಮಕಹಾನಿಗೆ ಹೇಳಿ ಮಾಡಿಸಿದ ಹಾಡು ಎಂಬುದು ವಿಶೇಷ. ಇದೀಗ ಹಳೆಯ ಸಂಗಾತಿಯನ್ನು ನೆನಪಿಸಿಕೊಳ್ಳುವಂತಹ ಹಾಡಿನ ರೀಲ್ಸ್​ನಲ್ಲಿ ರಮ್ಯಾ ಮತ್ತೆ ಕಾಣಿಸಿಕೊಂಡಿದ್ದಾರೆ. ಯಾಕೆ ನೀನಿನ್ನೂ ಮದುವೆಯಾಗಿಲ್ಲ… ಎಂಬ ಪ್ರಶ್ನಾರ್ಥಕ ಸಾಹಿತ್ಯ ಹೊಂದಿರುವ ಈ ಇಂಗ್ಲಿಷ್​ ಹಾಡು, ನನ್ನ ಸಂಗಾತಿ ಸತ್ತಿರಬಹುದು…ಇಲ್ಲ ನನಗೆ ಸಂಗಾತಿನೇ ಹುಟ್ಟಿಲ್ಲ ಎಂಬ ಸಾಹಿತ್ಯದೊಂದಿಗೆ ಮುಂದುವರೆಯುತ್ತದೆ. ಇದೇ ಹಾಡಿನ ರೀಲ್ಸ್​ನಲ್ಲಿ ಸ್ಯಾಂಡಲ್​ವುಡ್​ನ ಚೆಂದುಳ್ಳಿ ಚೆಲುವೆ ಕಾಣಿಸಿಕೊಂಡಿರುವುದು ವಿಶೇಷ.

ಯುವ ಗಾಯಕ ಐನಾಟ್​ಶೇನ್ ಹಾಡಿರುವ ಈ ಹಾಡು ಭಗ್ನ ಪ್ರೇಮಿಗಳಿಗೆ ಮಾಡಿಸಿದಂತಹ ಸಾಹಿತ್ಯವನ್ನು ಹೊಂದಿದೆ. ಇದೇ ಹಾಡಿಗೆ ಇದೀಗ ರಮ್ಯಾ ರೀಲ್ಸ್ ಮಾಡುವ ಮೂಲಕ ಮದುವೆ ಯಾವಾಗ ಎಂದು ಕೇಳುವವರಿಗೆ ಉತ್ತರ ನೀಡಿದ್ದಾರೆ ಎನ್ನಲಾಗುತ್ತಿದೆ.

ಒಟ್ಟಿನಲ್ಲಿ ತೆರೆಮೇಲೆ ಕಾಣಿಸಿಕೊಳ್ಳದ ಸ್ಯಾಂಡಲ್​ವುಡ್​ನ ಚೆಂದುಳ್ಳಿ ಚೆಲುವೆ ಇದೀಗ ರೀಲ್ಸ್​ ಮೂಲಕ ಭಾವನೆಗಳೊಂದಿಗೆ ಹಾವಭಾವ ತೋರಿಸಿ ಗಮನ ಸೆಳೆದಿದ್ದಾರೆ. ಈ ಇನ್​ಸ್ಟಾ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಅಭಿಮಾನಿಗಳು ರಮ್ಯಾ ಎಕ್ಸ್​ಪ್ರೆಷನ್​ಗೆ ಭಾರೀ ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ.

2016 ರಲ್ಲಿ ಕೊನೆಯ ಬಾರಿ ಕನ್ನಡ ಚಿತ್ರದಲ್ಲಿ ಕಾಣಿಸಿಕೊಂಡ ರಮ್ಯಾ ಆ ಬಳಿಕ ಬಣ್ಣದಲೋಕದಿಂದ ದೂರವೇ ಉಳಿದಿದ್ದರು. ಇದರ ನಡುವೆ ಒಂದಷ್ಟು ರಾಜಕೀಯ ಮತ್ತು ಮತ್ತೊಂದಷ್ಟು ವೈಯುಕ್ತಿಕ ವಿಚಾರಗಳಿಂದ ಸುದ್ದಿಯಾಗಿದ್ದರು. ಈ ವೇಳೆ ಕೇಳಿ ಬಂದ ಪ್ರಮುಖ ಹೆಸರೆಂದರೆ ರಾಫೆಲ್. ಪೋರ್ಚುಗಲ್ ಉದ್ಯಮಿ ರಾಫೆಲ್ ಜೊತೆ ಸ್ಯಾಂಡಲ್​ವುಡ್ ಮೋಹಕ ತಾರೆ ಹಸೆಮಣೆ ಏರಲಿದ್ದಾರೆ ಎಂಬಿತ್ಯಾದಿ ಸುದ್ದಿಗಳು ಕೂಡ ಹರಿದಾಡಿತ್ತು. ಆದರೆ ಆಮೇಲೆ ಏನಾಯ್ತೊ..ಇದಕ್ಕಿದ್ದಂತೆ ರಮ್ಯಾ ಒಂಟಿಯಾಗಿ ಕಾಣಿಸಿಕೊಂಡರು.

ಇದೀಗ ಇಂಗ್ಲಿಷ್​ನ ಸೂಪರ್ ಹಿಟ್ ಗೀತೆ Maybe My Soulmate Died ಬ್ರೇಕ್ ಅಪ್ ಹಾಡಿನಲ್ಲಿ ರಮ್ಯಾ ಕಾಣಿಸಿಕೊಂಡಿದ್ದಾರೆ. ಸಾಮಾನ್ಯವಾಗಿ ಭಗ್ನಪ್ರೇಮಿಗಳು ಮತ್ತು ಮದುವೆ ವಿಚಾರದಲ್ಲಿ ನಿರಾಸಕ್ತಿ ಹೊಂದಿರುವವರು ಕಾಣಿಸಿಕೊಳ್ಳುವ ಈ ಗೀತೆಯನ್ನೇ  ರಮ್ಯಾ ರೀಲ್ಸ್ ಮಾಡಿ, ವಿವಾಹ ಯಾವಾಗ ಎಂದು ಪ್ರಶ್ನಿಸುವವರಿಗೆ ಮದುವೆಯಾಗಲ್ಲ ಎಂಬ ಸಂದೇಶ ರವಾನಿಸಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ರಮ್ಯಾ ರಿಎಂಟ್ರಿ..?

ಸ್ಯಾಂಡಲ್​ವುಡ್​ನಲ್ಲಿ ಕ್ವೀನ್​ ಆಗಿ ಮೆರೆದಿದ್ದ ನಟಿ ರಮ್ಯಾ ಮತ್ತೆ ಕಂಬ್ಯಾಕ್ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇದನ್ನು ಪುಷ್ಠೀಕರಿಸುವಂತೆ ಇತ್ತೀಚಿನ ದಿನಗಳಲ್ಲಿ ಅವರು ಚಿತ್ರರಂಗದ ಪ್ರಮುಖರೊಂದಿಗೆ ಕಾಣಿಸಿಕೊಂಡಿದ್ದರು. ಅದರಲ್ಲೂ ತಿಂಗಳ ಹಿಂದೆಯಷ್ಟೇ ಅವರು ಡಾಲಿ ಧನಂಜಯ್ ನಟನೆಯ ಹೊಯ್ಸಲ ಚಿತ್ರ ಸೆಟ್​ಗೆ ಭೇಟಿ ನೀಡಿದ್ದರು. ಹೀಗಾಗಿಯೇ ಹೊಯ್ಸಳ ಚಿತ್ರದ ವಿಶೇಷ ಪಾತ್ರವೊಂದರ ಮೂಲಕ ಸ್ಯಾಂಡಲ್​ವುಡ್ ಕ್ವೀನ್ ಮತ್ತೆ ಬಣ್ಣ ಹಚ್ಚಿದ್ದಾರೆ ಎಂಬ ಸುದ್ದಿಯೊಂದು ಹರಿದಾಡಿತ್ತು. ಇದಾಗ್ಯೂ ಹೊಯ್ಸಳ ಚಿತ್ರತಂಡವಾಗಲಿ, ರಮ್ಯಾ ಆಗಲಿ ಈ ಬಗ್ಗೆ ಯಾವುದೇ ಗುಟ್ಟು ಬಿಟ್ಟು ಕೊಟ್ಟಿಲ್ಲ. ಅದಾಗ್ಯೂ ರಮ್ಯಾ ಅವರ ರಿಎಂಟ್ರಿಯನ್ನು ಸ್ವಾಗತಿಸಲು ಅಭಿಮಾನಿಗಳಂತು ತುದಿಗಾಲಲ್ಲಿ ನಿಂತಿದ್ದಾರೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್