AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಸಂಕಷ್ಟದಲ್ಲಿ ಸಹಾಯಕ್ಕೆ ನಿಂತ ಚಂದನವನದ ತಾರೆಯರು; ರಿಯಲ್​ ಲೈಫ್​ನಲ್ಲೂ ಇತರರಿಗೆ ಮಾದರಿ

ಸ್ಯಾಂಡಲ್​ವುಡ್​ನ ಸ್ಟಾರ್​ಗಳು ನೊಂದವರ ನೆರವಿಗೆ ನಿಂತಿದ್ದಾರೆ. ಅದರಲ್ಲೂ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್​, ಆಸರೆ ಎನ್ನುವ ತಂಡದ ಜತೆ ತಮ್ಮ ಹುಡುಗರನ್ನ ಬಿಟ್ಟು ಊಟ ಹಂಚುತ್ತಿದ್ದಾರೆ. ಸದ್ಯ ನಾಗವಾರ, ಮಾನ್ಯತಾಟೆಕ್ ಪಾರ್ಕ್ ಬಳಿ ಶಿವಣ್ಣನ ತಂಡದವರು ಆಹಾರದ ಪೊಟ್ಟಣ ಹಂಚುತ್ತಿದ್ದಾರೆ.

ಕೊವಿಡ್ ಸಂಕಷ್ಟದಲ್ಲಿ ಸಹಾಯಕ್ಕೆ ನಿಂತ ಚಂದನವನದ ತಾರೆಯರು; ರಿಯಲ್​ ಲೈಫ್​ನಲ್ಲೂ ಇತರರಿಗೆ ಮಾದರಿ
ಕಾರ್ಮಿಕರಿಗೆ ರೇಶನ್ ಕಿಟ್ ವಿತರಿಸಿದ ನಟ ಉಪೇಂದ್ರ
preethi shettigar
|

Updated on: May 19, 2021 | 10:09 AM

Share

ಕೊರೊನಾ ಎರಡನೇ ಅಲೆಯಿಂದಾಗಿ ಕರುನಾಡೇ ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಜೀವವನ್ನೇ ತೆಗೆದು ಹಾಕುತ್ತಿರುವ ಸೊಂಕು ಒಂದು ಕಡೆಯಾದರೆ ಬದುಕನ್ನೇ ಸ್ತಬ್ಧ ಮಾಡಿರುವ ಲಾಕ್​ಡೌನ್ ಮತ್ತೊಂದು ಕಡೆ. ಹೀಗಾಗಿ ಜನರು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಇದೀಗ, ನೊಂದವರ ನೆರವಿಗಾಗಿ ಕಲಾವಿದರು ಕೈ ಜೋಡಿಸಿದ್ದು, ಸಿನಿಮಾಗಳಲ್ಲಿ ಮಾತ್ರ ಹೀರೋಗಳಲ್ಲ. ನಿಜ ಜೀವನದಲ್ಲೂ ಇತರರಿಗೆ ಮಾದರಿ ಎನ್ನುವಂತೆ ನಡೆದುಕೊಂಡಿದ್ದಾರೆ. ಸದ್ಯ ಚಂದನವನದ ತಾರೆಯರ ನೆರವಿನ ಕೈಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸ್ಯಾಂಡಲ್​ವುಡ್​ನ ಸ್ಟಾರ್​ಗಳು ನೊಂದವರ ನೆರವಿಗೆ ನಿಂತಿದ್ದಾರೆ. ಅದರಲ್ಲೂ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್​, ಆಸರೆ ಎನ್ನುವ ತಂಡದ ಜತೆ ತಮ್ಮ ಹುಡುಗರನ್ನ ಬಿಟ್ಟು ಊಟ ಹಂಚುತ್ತಿದ್ದಾರೆ. ಸದ್ಯ ನಾಗವಾರ, ಮಾನ್ಯತಾಟೆಕ್ ಪಾರ್ಕ್ ಬಳಿ ಶಿವಣ್ಣನ ತಂಡದವರು ಆಹಾರದ ಪೊಟ್ಟಣ ಹಂಚುತ್ತಿದ್ದಾರೆ.

ಇನ್ನು ಕಿಚ್ಚ ಸುದೀಪ್ ಮೊದಲು ಮಾನವನಾಗು ಎನ್ನುವ ಮಾತಿನಂತೆ ಕೈ ತುತ್ತು ನೀಡುತ್ತಿದ್ದಾರೆ. ಬೆಂಗಳೂರಿನ ಹಲವು ಏರಿಯಾಗಳಲ್ಲಿ ಬೆಳಗ್ಗೆ ಕಿಚ್ಚನ ಕೈ ತುತ್ತು ಎಂಬ ವಾಹನ ಓಡಾಡುತ್ತಿರುತ್ತದೆ. ಅಗತ್ಯ ಔಷಧ, ಊಟ ಸೇರಿದಂತೆ ಹಲವು ರೀತಿಯ ವ್ಯವಸ್ಥೆಯನ್ನು ಕಿಚ್ಚನ ಈ ತಂಡ ಮಾಡುತ್ತಿದೆ.

ರಿಯಲ್​ ಸ್ಟಾರ್ ಉಪೇಂದ್ರ ಕೂಡ ಸಿನಿಮಾ ರಂಗದ ಕಾರ್ಮಿಕರಿಗೆ ರೇಶನ್ ಕಿಟ್ ವಿತರಿಸುತ್ತಿದ್ದಾರೆ. ಜತೆಗೆ,  ರೈತರ ಬೆಳೆಗಳನ್ನ ಖುದ್ದು ಖರೀದಿಸಿ, ಜನರಿಗೆ ಹಂಚುವ ಮಹತ್ವದ ಕಾರ್ಯವನ್ನು ಮಾಡುತ್ತಿದ್ದಾರೆ. ಇಷ್ಟೇ ಅಲ್ಲ, ನಟ ಭುವನ್, ನಟಿ ರಾಗಿಣಿ, ಸಂಜನಾ, ಶುಭಾ ಪೂಂಜಾ, ಹರ್ಷಿಕಾ ಜತೆ  ಹಲವು ಕಲಾವಿದರು ನೆರವಿನ ಹಸ್ತ ಚಾಚಿದ್ದಾರೆ.

ragini help

ನಟಿ ರಾಗಿಣಿ ಫುಡ್ ಕಿಟ್ ವಿತರಿಸುತ್ತಿರುವುದು

ಒಟ್ಟಿನಲ್ಲಿ ರೀಲ್​ನಲ್ಲಿ ಮಾತ್ರವಲ್ಲ ರಿಯಲ್​ ಲೈಫ್​​ನಲ್ಲಿ ಹಲವು ಸ್ಟಾರ್​​ಗಳು ನೊಂದವರಿಗೆ ನೆರವಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿ ದೇವರುಗಳ ಜತೆಗೆ ನಿಂತಿದ್ದಾರೆ. ನಿಜಕ್ಕೂ ಸಿನಿಮಾ ಸ್ಟಾರ್​ಗಳ ಈ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಲೇ ಬೇಕು.

ಇದನ್ನೂ ಓದಿ:

‘ಕಿರಿಕ್​ ಪಾರ್ಟಿ ಹಿಂದಿ ರಿಮೇಕ್​ನಲ್ಲಿ ನಾನು ನಟಿಸಲ್ಲ’; ರಶ್ಮಿಕಾ ಖಡಕ್​ ನಿರ್ಧಾರಕ್ಕಿದೆ ಬಲವಾದ ಕಾರಣ

ಬಿಗ್​ ಬಾಸ್​ನಿಂದ ಹೊರಬಂದು ನುಡಿದಂತೆ ನಡೆದ ಶುಭಾ ಪೂಂಜಾ; ಬಡವರಿಗೆ ಫುಡ್​ ಕಿಟ್​ ನೀಡಿದ ನಟಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ