ಕನ್ನಡ ಸೆಲೆಬ್ರಿಟಿ ಜೋಡಿಗಳ ಕ್ಯೂಟ್ ಲವ್ ಸ್ಟೋರಿ
ತೆರೆಯ ಮೇಲೆ ನಟನೆಯಿಂದ ಪ್ರೀತಿಗೆ ತಿರುಗಿದ ಅದೆಷ್ಟೋ ಸ್ಯಾಂಡಲ್ವುಡ್ ಜೋಡಿಗಳ ಕಥೆಗಳು ಈ ಲೇಖನದಲ್ಲಿವೆ. ಯಶ್-ರಾಧಿಕಾ, ದಿಗಂತ್-ಐಂದ್ರಿತಾ, ಅಂಬರೀಶ್-ಸುಮಲತಾ, ಕೃಷ್ಣ-ಮಿಲನಾ ಸೇರಿದಂತೆ ಹಲವು ಕನ್ನಡ ನಟ-ನಟಿಯರು ತಮ್ಮ ವೃತ್ತಿಜೀವನದಲ್ಲಿ, ಚಿತ್ರೀಕರಣದ ಸೆಟ್ಗಳಲ್ಲಿ ಹೇಗೆ ಪ್ರೀತಿಯನ್ನು ಕಂಡುಕೊಂಡು ಮದುವೆಯಾದರು ಎಂಬುದನ್ನು ಇಲ್ಲಿ ವಿವರಿಸಲಾಗಿದೆ.

ತೆರೆಯ ಮೇಲೆ ನಟನೆ ಮಾಡುತ್ತಾ ನಂತರ ಸಂಬಂಧ ನಿಜವಾದ ಪ್ರೀತಿಗೆ ತಿರುಗಿದ ಅದೆಷ್ಟೋ ಉದಾಹರಣೆಗಳನ್ನು ನೀವು ನೋಡಬಹುದು. ನಟಿಸುತ್ತಲೇ ಪ್ರೀತಿಗೆ ಬಿದ್ದವರು ಅನೇಕರಿದ್ದಾರೆ. ಸೆಟ್ನಲ್ಲಿ ಉಂಟಾಗುವ ಗೆಳೆತನ ನಂತರ ಮದುವೆವರೆಗೆ ಹೋದ ಉದಾಹರಣೆ ಇದೆ. ಸ್ಯಾಂಡಲ್ವುಡ್ನಲ್ಲೂ (Sandalwood) ಅನೇಕರು ಹೀಗೆ ವಿವಾಹವಾಗಿದ್ದಾರೆ. ಪ್ರೇಮದ ಪಾತ್ರ ಮಾಡುತ್ತ ವಿವಾಹ ಆದ ಸ್ಯಾಂಡಲ್ವುಡ್ ಜೋಡಿಗಳ ಪಟ್ಟಿ ಇಲ್ಲಿದೆ.
ಯಶ್ ಹಾಗೂ ರಾಧಿಕಾ ಪಂಡಿತ್ ಸ್ಯಾಂಡಲ್ವುಡ್ನ ಸಾಕಷ್ಟು ಜನಪ್ರಿಯ ಜೋಡಿ ಎಂದರೂ ತಪ್ಪಾಗಲಿಕ್ಕಿಲ್ಲ. ‘ನಂದಗೋಕುಲ’ ಧಾರಾವಾಹಿಯಲ್ಲಿ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದರು. ‘ಮೊಗ್ಗಿನ ಮನಸು’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದರು ಮತ್ತು ನಂತರ ಇವರ ಮಧ್ಯೆ ಪ್ರೀತಿ ಬೆಳೆಯಿತು. ಆದರೆ, ಅದನ್ನು ಸಾರ್ವಜನಿಕವಾಗಿ ಹೇಳಿಕೊಂಡಿರಲಿಲ್ಲ. ನಂತರ ಇವರು ಮದುವೆ ಆದರು.
ಐಂದ್ರಿತಾ ರೇ ಹಾಗೂ ದಿಗಂತ್ ಇಬ್ಬರೂ ವಿವಾಹ ಆದರು.ಇವರದ್ದು ಪ್ರೇಮ ವಿವಾಹ ಅನ್ನೋದು ಗೊತ್ತೇ ಇದೆ. ಐಂದ್ರಿತಾ ಸಂದರ್ಶನ ನೋಡಿದ್ದ ದಿಗಂತ್, ಈ ಹುಡುಗಿ ತುಂಬಾನೇ ಕ್ಯೂಟ್ ಆಗಿದ್ದಾರೆ ಎಂದು ಅಂದುಕೊಂಡರು. ‘ಮನಸಾರೆ’ ಸಿನಿಮಾದಲ್ಲಿ ಐಂದ್ರಿತಾ ಜೊತೆ ನಟಿಸೋ ಅವಕಾಶ ಸಿಕ್ಕಿತು. ಈ ಚಿತ್ರದ ಶೂಟ್ ವೇಳೆ ದಿಗಂತ್ ಅವರಿಗೆ ಅನಾರೋಗ್ಯ ಆಯಿತು ಮತ್ತು ಐಂದ್ರಿತಾ ಆಗ ಇವರನ್ನು ನೋಡಿಕೊಂಡರು.
90ರ ದಶಕದಲ್ಲಿ ಅಂಬರೀಶ್-ಸುಮಲತಾ ಪ್ರೇಮಕತೆ ಆರಂಭ ಆಯಿತು. ಇಬ್ಬರೂ ಅಂದಿನ ಕಾಲದಲ್ಲಿ ಸಿನಿಮಾ ಇಂಡಸ್ಟ್ರಿಯಲ್ಲಿ ಟಾಪ್ ಜೋಡಿ ಎನಿಸಿಕೊಂಡರು. 1984ರಲ್ಲಿ ಕಾರ್ಯಕ್ರಮವೊಂದರಲ್ಲಿ ಮೊಟ್ಟ ಮೊದಲ ಬಾರಿಗೆ ಸುಮಲತಾ, ಅಂಬರೀಶ್ ಅವರನ್ನು ನೋಡಿದರು. ‘ಆಹುತಿ’ ಸಿನಿಮಾದ ಸೆಟ್ನಲ್ಲಿ ಇಬ್ಬರೂ ಒಬ್ಬರನ್ನೊಬ್ಬರು ಮೊದಲ ಬಾರಿಗೆ ಭೇಟಿ ಮಾಡಿದರು ನಂತರ ಪ್ರೇಮ ಆಯಿತು.
ಪ್ರಜ್ವಲ್ ದೇವರಾಜ್-ರಾಗಿಣಿ ಅವರದ್ದು ಕ್ಯೂಟ್ ಜೋಡಿ. ರಾಗಿಣಿ ಚಂದ್ರನ್ ಅವರನ್ನು ಪ್ರಜ್ವಲ್ ಮೊದಲು ನೋಡಿದ್ದು 9ನೇ ಕ್ಲಾಸ್ ಅಲ್ಲಿ. ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸಲು ಆರಂಭಿಸಿದ್ದರು. ಇವರ ಪ್ರೀತಿಗೆ ಮನೆಯಲ್ಲೂ ಒಪ್ಪಿಗೆ ಸಿಕ್ಕಿತ್ತು.ಈಗ ವಿವಾಹ ಆಗಿ ಹಾಯಾಗಿದ್ದಾರೆ.
ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ‘ಲವ್ ಮಾಕ್ಟೇಲ್ 2’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. 2015ರಲ್ಲಿ ತೆರೆಕಂಡ ‘ಚಾರ್ಲಿ’ ಚಿತ್ರದಲ್ಲಿ ಇವರಿಬ್ಬರೂ ಒಟ್ಟಿಗೆ ನಟಿಸಿದ್ದರು. ‘ಚಾರ್ಲಿ’ ಚಿತ್ರದ ಶೂಟಿಂಗ್ ಮುಗಿಯುತ್ತಾ ಬಂದಿತ್ತು. ಈ ವೇಳೆ ಒಂದು ದಿನ ಮಿಲನಾ ಅವರನ್ನು ಕಾರಿನಲ್ಲಿ ಲಾಂಗ್ ಡ್ರೈವ್ ಕರೆದುಕೊಂಡು ಹೋಗಿದ್ದ ಕೃಷ್ಣ ಮದುವೆಗೆ ನೇರವಾಗಿ ಪ್ರಪೋಸ್ ಮಾಡಿದರು.
ಇದನ್ನೂ ಓದಿ: ಸ್ಯಾಂಡಲ್ವುಡ್ ನಟಿ, ಉದ್ಯಮಿ ನಂಟಿನ ಕೇಸ್ಗೆ ಬಿಗ್ ಟ್ವಿಸ್ಟ್: ಮಹತ್ವದ ಸಾಕ್ಷ್ಯ ಲಭ್ಯ
ಮೇಘನಾ ರಾಜ್- ಚಿರು ಸರ್ಜಾ: ‘ಪೈರಸಿ ಮುಕ್ತ ಕನ್ನಡ ಚಲನಚಿತ್ರ’ ಹೆಸರಿನ ಕಾರ್ಯಕ್ರಮದಲ್ಲಿ ಮೇಘನಾ ರಾಜ್-ಚಿರಂಜೀವಿ ಸರ್ಜಾ ಭೇಟಿ ಆದರು. ನಂತರ ಮೇಘನಾಗೆ ಮೆಸೇಜ್ ಮಾಡಿ ಚಿರು ಮಾತು ಆರಂಭಿಸಿದ್ದರು. ಅಲ್ಲಿಂದ ಇವರ ಪ್ರೇಮ ಕಥೆ ಶುರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



