AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾತ್ರಿ ಹಬ್ಬದಂದು ಸಿಂಪಲ್​ ಸುನಿ, ರಕ್ಷಿತ್​ ಶೆಟ್ಟಿಗೆ ಎರಡನೇ ಹುಟ್ಟು ದಿನ

ನಿರ್ದೇಶಕ ಸಿಂಪಲ್​ ಸುನಿ ಮತ್ತು ನಟ ರಕ್ಷಿತ್​ ಶೆಟ್ಟಿ ಅವರಿಗೆ ಶಿವರಾತ್ರಿ ಹಬ್ಬದ ದಿನ ‘ಸಿಂಪಲ್ಲಾಗ್​ ಒಂದ್​ ಲವ್​ ಸ್ಟೋರಿ’ ಸಿನಿಮಾ ನೆನಪಾಗಿದೆ. ಈ ಸಿನಿಮಾ ತೆರೆಕಂಡು ಇಂದಿಗೆ (ಮಾರ್ಚ್​ 8) 11 ವರ್ಷಗಳು ತುಂಬಿವೆ. ಈ ಖುಷಿಯಲ್ಲಿ ಆ ದಿನಗಳ ನೆನಪನ್ನು ಸುನಿ ಮತ್ತು ರಕ್ಷಿತ್​ ಶೆಟ್ಟಿ ಅವರು ಮೆಲುಕು ಹಾಕಿದ್ದಾರೆ. ಅಭಿಮಾನಿಗಳು ಕೂಡ ‘ಸಿಂಪಲ್ಲಾಗ್​ ಒಂದ್​ ಲವ್​ ಸ್ಟೋರಿ’ ಸಿನಿಮಾದ ನೆನಪುಗಳನ್ನು ಹಂಚಿಕೊಂಡಿದ್ದಾರೆ.

ಶಿವರಾತ್ರಿ ಹಬ್ಬದಂದು ಸಿಂಪಲ್​ ಸುನಿ, ರಕ್ಷಿತ್​ ಶೆಟ್ಟಿಗೆ ಎರಡನೇ ಹುಟ್ಟು ದಿನ
ಸಿಂಪಲ್​ ಸುನಿ, ರಕ್ಷಿತ್​ ಶೆಟ್ಟಿ
ಮದನ್​ ಕುಮಾರ್​
|

Updated on: Mar 08, 2024 | 3:07 PM

Share

ಶಿವರಾತ್ರಿ ಹಬ್ಬವನ್ನು (Shivaratri) ಇಂದು (ಮಾರ್ಚ್​ 8) ಸಡಗರದಿಂದ ಆಚರಿಸಲಾಗುತ್ತಿದೆ. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಹಬ್ಬದ ಸಂಭ್ರಮದಲ್ಲಿ ಭಾಗಿ ಆಗಿದ್ದಾರೆ. ನಟ ರಕ್ಷಿತ್​ ಶೆಟ್ಟಿ (Rakshit Shetty) ಹಾಗೂ ನಿರ್ದೇಶಕ ಸಿಂಪಲ್​ ಸುನಿ ಅವರಿಗೆ ಈ ಬಾರಿಯ ಶಿವರಾತ್ರಿ ಹಬ್ಬ ತುಂಬ ಸ್ಪೆಷಲ್​ ಆಗಿದೆ. ಮಾರ್ಚ್​ 8ರಂದು ಶಿವರಾತ್ರಿ ಹಬ್ಬ ಬಂದಿರುವುದೇ ಅದಕ್ಕೆ ಕಾರಣ. ರಕ್ಷಿತ್​ ಶೆಟ್ಟಿ ಮತ್ತು ಸಿಂಪಲ್​ ಸುನಿ (Simple Suni) ಪಾಲಿಗೆ ಈ ದಿನಾಂಕ ಬಹಳ ಮಹತ್ವದ್ದು. ಯಾಕೆಂದರೆ ‘ಸಿಂಪಲ್ಲಾಗ್​ ಒಂದ್​ ಲವ್​ ಸ್ಟೋರಿ’ ಸಿನಿಮಾ ತೆರೆಕಂಡಿದ್ದು ಮಾರ್ಚ್​ 8ರಂದು. ಹಾಗಾಗಿ ಈ ದಿನವನ್ನು ತಮ್ಮ ಎರಡನೇ ಹುಟ್ಟು ದಿನ ಎಂದು ರಕ್ಷಿತ್​ ಶೆಟ್ಟಿ ಹಾಗೂ ಸಿಂಪಲ್​ ಸುನಿ ಹೇಳಿದ್ದಾರೆ.

‘ಮಾರ್ಚ್ 8 ನನ್ನ ಎರಡನೇ ಹುಟ್ಟು ದಿನ. ಸುನಿಲ್ ಕುಮಾರ್ ಇಂದ ಸಿಂಪಲ್ ಸುನಿ ಆಗಿ ಬದಲಾದ ದಿನಾಂಕ. 2013ರ ಮಾರ್ಚ್ 8. ಸಿಂಪಲ್ಲಾಗೊಂದ್ ಲವ್​ ಸ್ಟೋರಿ ಸಿನಿಮಾ ಬಿಡುಗಡೆಯಾಗಿ ನೀವೆಲ್ಲಾ ಆಶೀರ್ವದಿಸಿದ ದಿನ. ನಿಮಗೂ ಹಾಗೂ ನನ್ನ ಈ ತಂಡಕ್ಕೂ ಚಿರಋಣಿ’ ಎಂದು ಸಿಂಪಲ್​ ಸುನಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ. ಸಿನಿಮಾದ ಕೆಲವು ಪೋಸ್ಟರ್​ಗಳನ್ನು ಅವರು ಹಂಚಿಕೊಂಡಿದ್ದಾರೆ.

ಎಕ್ಸ್​ನಲ್ಲಿ ಸಿಂಪಲ್ ಸುನಿ ಮಾಡಿದ ಪೋಸ್ಟ್​ಗೆ ರಕ್ಷಿತ್​ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ‘ನನ್ನ ಎರಡನೇ ಹುಟ್ಟು ದಿನ ಕೂಡ ಎಂದರೆ ತಪ್ಪಾಗಲಾರದು. ಹನ್ನೊಂದು ವರುಷದ ಸಂಭ್ರಮ ಇವತ್ತು ಶಿವರಾತ್ರಿಯಂದು ಬಂದಿರೋದು ಇನ್ನೂ ಸಂತೋಷದ ವಿಷಯ’ ಎಂದು ರಕ್ಷಿತ್​ ಶೆಟ್ಟಿ ಅವರು ಬರೆದುಕೊಂಡಿದ್ದಾರೆ. ಅಭಿಮಾನಿಗಳು ಕಮೆಂಟ್​ ಮಾಡುವ ಮೂಲಕ ಆ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಸುನಿ ನಿರ್ದೇಶಿಸಿದ ಮೊದಲ ಸಿನಿಮಾ ‘ಸಿಂಪಲ್ಲಾಗ್​ ಒಂದ್​ ಲವ್​ಸ್ಟೋರಿ’. ಆ ಸಿನಿಮಾದಿಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು. ರಕ್ಷಿತ್ ಕೂಡ ಮೊದಲ ಬಾರಿಗೆ ಸಕಸ್ಸ್​ ನೋಡಿದ ಸಿನಿಮಾ ಅದು. ಈ ಸಿನಿಮಾದಲ್ಲಿ ರಕ್ಷಿತ್​ ಶೆಟ್ಟಿ ಅವರಿಗೆ ಜೋಡಿಯಾಗಿ ಶ್ವೇತಾ ಶ್ರೀವಾಸ್ತವ್​ ನಟಿಸಿದ್ದರು. ಭರತ್​ ಬಿ.ಜೆ. ಸಂಗೀತ ನೀಡಿದ ಹಾಡುಗಳು ಸೂಪರ್​ ಹಿಟ್​ ಆದವು. ಸಿನಿಮಾದ ಗೆಲುವಿನಲ್ಲಿ ‘ಬಾನಲಿ ಬದಲಾಗೋ..’ ಹಾಡಿನ ಪಾತ್ರ ಕೂಡ ಇದೆ.

ಇದನ್ನೂ ಓದಿ: ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದಲ್ಲಿನ ರಕ್ಷಿತ್​ ಶೆಟ್ಟಿ ನಟನೆಗೆ ಫ್ಯಾನ್ಸ್​ ಫಿದಾ

ಸಿಂಪಲ್​ ಸುನಿ ಮತ್ತು ರಕ್ಷಿತ್​ ಶೆಟ್ಟಿ ಮಾಡಿರುವ ಪೋಸ್ಟ್​ಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ. ‘ನೀವಿಬ್ಬರೂ ಸೇರಿಕೊಂಡು ಅದ್ದೂರಿಯಾಗ್​ ಒಂದ್​ ಲವ್​ ಸ್ಟೋರಿ ಅಂತ ಸಿನಿಮಾ ಮಾಡಿ’ ಎಂದು ಅಭಿಮಾನಿಯೊಬ್ಬರು ಬೇಡಿಕೆ ಇಟ್ಟಿದ್ದಾರೆ. ಮತ್ತೆ ನಿಮ್ಮಿಬ್ಬರ ಕಾಂಬಿನೇಷನ್​ನಲ್ಲಿ ಸಿನಿಮಾ ನಿರೀಕ್ಷಿಸಬಹುದೇ ಎಂದು ಫ್ಯಾನ್ಸ್​ ಕೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!