AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಮನ ಸೆಳೆದ ‘19.20.21’ ಸಿನಿಮಾ ಟೀಸರ್​; ಮತ್ತೆ ಗಂಭೀರ ವಿಷಯ ಹೇಳಲು ಬಂದ ಮಂಸೋರೆ

19.20.21 Kannada Movie: ‘19.20.21’ ಸಿನಿಮಾದ ಫಸ್ಟ್​ ಪೋಸ್ಟರ್​ ಬಿಡುಗಡೆ ಆದಾಗಲೇ ಸಿನಿಪ್ರಿಯರ ಮನದಲ್ಲಿ ನಿರೀಕ್ಷೆ ಸೃಷ್ಟಿ ಆಗಿತ್ತು. ಟೀಸರ್​ನಿಂದಾಗಿ ಆ ನಿರೀಕ್ಷೆ ಡಬಲ್​ ಆಗಿದೆ.

ಗಮನ ಸೆಳೆದ ‘19.20.21’ ಸಿನಿಮಾ ಟೀಸರ್​; ಮತ್ತೆ ಗಂಭೀರ ವಿಷಯ ಹೇಳಲು ಬಂದ ಮಂಸೋರೆ
19.20.21 ಸಿನಿಮಾದ ದೃಶ್ಯ
TV9 Web
| Edited By: |

Updated on: Jan 20, 2023 | 10:01 PM

Share

ಕನ್ನಡದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘19.20.21’ (19.20.21 Kannada Movie) ಚಿತ್ರ ಕೂಡ ಪ್ರಮುಖವಾಗಿದೆ. ಶೀರ್ಷಿಕೆಯ ಕಾರಣದಿಂದಲೂ ಈ ಸಿನಿಮಾ ಕೌತುಕ ಮೂಡಿಸಿದೆ. ಈಗ ಈ ಚಿತ್ರದ ಟೀಸರ್​ ಬಿಡುಗಡೆ ಆಗಿದ್ದು, ಪ್ರೇಕ್ಷಕರ ಮನದಲ್ಲಿ ನಿರೀಕ್ಷೆ ಹೆಚ್ಚುವಂತಾಗಿದೆ. ‘ಲಹರಿ ಮ್ಯೂಸಿಕ್​’ ಮೂಲಕ ‘19.20.21’ ಚಿತ್ರದ ಟೀಸರ್​ (19.20.21 Teaser) ಬಿಡುಗಡೆ ಆಗಿದೆ. ಟೀಸರ್​ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಚಿತ್ರಕ್ಕೆ ನಿರ್ದೇಶಕ ಮಂಸೋರೆ (Mansore) ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಪ್ರತಿ ಸಿನಿಮಾದಲ್ಲೂ ಅವರು ಒಂದು ಗಂಭೀರವಾದ ವಿಚಾರವನ್ನು ಆಯ್ದುಕೊಳ್ಳುತ್ತಾರೆ. ‘19.20.21’ ಸಿನಿಮಾದಲ್ಲೂ ಅದು ಮುಂದುವರಿದಿದೆ ಎಂಬುದು ಟೀಸರ್​ ಮೂಲಕ ಖಚಿತವಾಗಿದೆ.

‘19.20.21’ ಸಿನಿಮಾದ ಫಸ್ಟ್​ ಪೋಸ್ಟರ್​ ಬಿಡುಗಡೆ ಆದಾಗಲೇ ಸಿನಿಪ್ರಿಯರ ಮನದಲ್ಲಿ ನಿರೀಕ್ಷೆ ಸೃಷ್ಟಿ ಆಗಿತ್ತು. ಟೀಸರ್​ನಿಂದಾಗಿ ಆ ನಿರೀಕ್ಷೆ ಡಬಲ್​ ಆಗಿದೆ. ಕಾಡಿನ ಜನರ ಮೇಲೆ ನಡೆದ ದೌರ್ಜನ್ಯದ ಕಥೆ ಈ ಸಿನಿಮಾದಲ್ಲಿ ಇದೆ ಎಂಬುದಕ್ಕೆ ಟೀಸರ್​ನಲ್ಲಿ ಸುಳಿವು ಸಿಕ್ಕಿದೆ. ಇದನ್ನು ನೋಡಿದ ಎಲ್ಲರೂ ಪಾಸಿಟಿವ್​ ಆಗಿ ಕಮೆಂಟ್​ ಮಾಡುತ್ತಿದ್ದಾರೆ. ‘ಈ ಚಿತ್ರಕ್ಕೆ ಖಂಡಿತ ರಾಷ್ಟ್ರ ಪ್ರಶಸ್ತಿ ಸಿಗಲಿದೆ. ಕನ್ನಡ ಚಿತ್ರರಂಗದಲ್ಲಿ ಇದು ಅತ್ಯುತ್ತಮ ಸಿನಿಮಾ ಆಗಲಿದೆ. ಟ್ರೇಲರ್​ಗಾಗಿ ಕಾಯುತ್ತಿದ್ದೇವೆ’ ಎಂಬ ಕಮೆಂಟ್​ಗಳು ಬಂದಿವೆ.

ಇದನ್ನೂ ಓದಿ
Image
‘777 ಚಾರ್ಲಿ’ ಸಿನಿಮಾಗೆ ಮಾತ್ರ ತೆರಿಗೆ ವಿನಾಯಿತಿ ಯಾಕೆ? ಬೊಮ್ಮಾಯಿ ಸರ್ಕಾರದ ಕಿವಿ ಹಿಂಡಿದ ಮಂಸೋರೆ
Image
ಬದುಕು ಬದಲಿಸಿದ ಹೆದ್ದಾರಿಯಿಂದಲೇ ಸಾವು; ಸಂಚಾರಿ ವಿಜಯ್ ನೆನೆದು ದುಃಖ ಹೊರಹಾಕಿದ ನಿರ್ದೇಶಕ ಮಂಸೋರೆ
Image
ಡಿಫರೆಂಟ್​ ಪಾತ್ರದಲ್ಲಿ ಪುನೀತ್​; ‘ಮಿಷನ್​ ಕೊಲಂಬಸ್​’ ಚಿತ್ರಕ್ಕಾಗಿ ಮಂಸೋರೆ ಕಂಡಿದ್ದ ಕನಸು ಭಗ್ನ
Image
ಮಂಸೋರೆ ನಿರ್ದೇಶನದ ಚಿತ್ರದ ಮೂಲಕ ಕನ್ನಡಕ್ಕೆ ಎಂಟ್ರಿ ಕೊಡಲಿದ್ದಾರಾ ಸಾಯಿ ಪಲ್ಲವಿ? ಇಲ್ಲಿದೆ ಅಸಲಿಯತ್ತು

ಇದನ್ನೂ ಓದಿ: ಡಿಫರೆಂಟ್​ ಪಾತ್ರದಲ್ಲಿ ಪುನೀತ್​; ‘ಮಿಷನ್​ ಕೊಲಂಬಸ್​’ ಚಿತ್ರಕ್ಕಾಗಿ ಮಂಸೋರೆ ಕಂಡಿದ್ದ ಕನಸು ಭಗ್ನ

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ ಅವರು ‘ಹರಿವು’, ‘ನಾತಿಚರಾಮಿ’, ‘ಆಕ್ಟ್​ 1978’ ಸಿನಿಮಾಗಳ ಮೂಲಕ ತಮ್ಮ ಛಾಪು ಮೂಡಿಸಿದ್ದಾರೆ. ಈ ಮೂರೂ ಸಿನಿಮಾಗಳು ವಿಶೇಷ ರೀತಿಯಲ್ಲಿ ಗುರುತಿಸಿಕೊಂಡಿವೆ. ಈಗ ಅವರ ನಾಲ್ಕನೇ ಚಿತ್ರವಾಗಿ ‘19.20.21’ ಸಿನಿಮಾ ಮೂಡಿಬಂದಿದೆ. ‘ಡಿ ಕ್ರಿಯೇಷನ್ಸ್​’ ಬ್ಯಾನರ್​ ಮೂಲಕ ದೇವರಾಜ್​ ಆರ್​. ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

‘19.20.21’ ಚಿತ್ರದಲ್ಲಿ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಶೃಂಗ ಬಿವಿ, ಬಾಲಾಜಿ ಮನೋಹರ್​, ಎಂ.ಡಿ. ಪಲ್ಲವಿ, ರಾಜೇಶ್​ ನಟರಂಗ್​, ಅವಿನಾಶ್​, ಗಿರಿರಾಜ್​, ಕೃಷ್ಣ ಹೆಬ್ಬಾಳೆ ಮುಂತಾದವರು ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಜನವರಿ 27ರಂದು ಈ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಲಿದೆ. ಹಾಡುಗಳಿಗೆ ಬಿಂದು ಮಾಲಿನಿ ಸಂಗೀತ ನೀಡಿದ್ದಾರೆ. ಕಿರಣ್​ ಕಾವೇರಪ್ಪ ಸಾಹಿತ್ಯ ಬರೆದಿದ್ದಾರೆ. ಶಿವ ಬಿ.ಕೆ. ಛಾಯಾಗ್ರಹಣ, ಸುರೇಶ್​ ಆರ್ಮುಗಂ ಸಂಕಲನ, ಸಂತೋಷ್​ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ