AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾದವರ ಕಥೆ ಹೇಳುವ ‘ಫಸ್ಟ್ ಡೇ ಫಸ್ಟ್ ಶೋ’ ಚಿತ್ರ; ಗಮನ ಸೆಳೆದ ಟ್ರೇಲರ್

‘ಫಸ್ಟ್ ಡೇ ಫಸ್ಟ್ ಶೋ’ ಸಿನಿಮಾದ ಟ್ರೇಲರ್​ನಲ್ಲಿ ಪ್ರಕಾಶ್ ರಾಜ್ ಅವರ ಧ್ವನಿ ಹೈಲೈಟ್ ಆಗಿದೆ. ಶೀರ್ಷಿಕೆಯೇ ಸೂಚಿಸುವಂತೆ ಇದು ಸಿನಿಮಾ ಜಗತ್ತಿನ ಬಗ್ಗೆ ಇರುವಂತಹ ಸಿನಿಮಾ. ಆ ಕಾರಣದಿಂದ ಟ್ರೇಲರ್ ಗಮನ ಸೆಳೆದಿದೆ. ಗಿರೀಶ್ ನಿರ್ದೇಶನದ ಈ ಸಿನಿಮಾವನ್ನು ಊರ್ಮಿಳಾ ಕಿರಣ್ ನಿರ್ಮಾಣ ಮಾಡಿದ್ದಾರೆ.

ಸಿನಿಮಾದವರ ಕಥೆ ಹೇಳುವ ‘ಫಸ್ಟ್ ಡೇ ಫಸ್ಟ್ ಶೋ’ ಚಿತ್ರ; ಗಮನ ಸೆಳೆದ ಟ್ರೇಲರ್
1st Day 1st Show Movie Poster
ಮದನ್​ ಕುಮಾರ್​
|

Updated on: Jun 22, 2025 | 10:20 PM

Share

ಸಿನಿಮಾ ಮಂದಿಯ ಬಗ್ಗೆಯೇ ಕಥೆ ಇರುವ ಸಿನಿಮಾಗಳ ಸಾಕಷ್ಟು ಬಂದಿವೆ. ಅವುಗಳ ಸಾಲಿಗೆ ಸೇರ್ಪಡೆ ಆಗುತ್ತಿರುವ ಇನ್ನೊಂದು ಸಿನಿಮಾ ‘ಫಸ್ಟ್ ಡೇ ಫಸ್ಟ್ ಶೋ’. ಈ ಚಿತ್ರದ ಟ್ರೇಲರ್ (1st Day 1st Show Trailer) ಬಿಡುಗಡೆ ಆಗಿದೆ. ಇತ್ತೀಚಿನ ವರ್ಷಗಳಲ್ಲಿ ಸಿನಿಮಾ ರಂಗದ ಪರಿಸ್ಥಿತಿ ಬದಲಾಗಿದೆ. ಜನರು ಚಿತ್ರಮಂದಿರಕ್ಕೆ ಬರುತ್ತಿಲ್ಲ. ಒಟಿಟಿಯಲ್ಲೇ ಸಿನಿಮಾ ನೋಡುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಚಿತ್ರಮಂದಿರದ‌ ಸಂಸ್ಕೃತಿ ಮರೆಯಾಗುತ್ತಿದೆ ಎಂಬುದು ಹಲವರ ಅಭಿಪ್ರಾಯ. ಫಸ್ಟ್ ಡೇ ಫಸ್ಟ್ ಶೋ ಎಂಬ ಕ್ರೇಜ್ ಕೂಡ ಕಡಿಮೆ ಆಗುತ್ತಿದೆ. ಇದೆಲ್ಲದರ ನಡುವೆ ‘ಫಸ್ಟ್ ಡೇ ಫಸ್ಟ್ ಶೋ’ (1st Day 1st Show) ಶೀರ್ಷಿಕೆಯಲ್ಲೇ ಕನ್ನಡದ ಈ ಸಿನಿಮಾ (Kannada Cinema) ಸಿದ್ಧವಾಗಿದೆ.

‘ಒಂದ್ ಕಥೆ ಹೇಳ್ಲಾ’ ಖ್ಯಾತಿಯ ನಿರ್ದೇಶಕ ಗಿರೀಶ್ ಅವರು ‘ಫಸ್ಟ್ ಡೇ ಫಸ್ಟ್ ಶೋ’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಇದು ಸಿನಿಮಾದ ಕುರಿತು ಸಿನಿಮಾ ಆದ್ದರಿಂದ ಸಿನಿಮಾ ಮಂದಿಗಂತೂ ತುಂಬಾನೇ ಸ್ಪೆಷಲ್. ಸಿನಿಪ್ರಿಯರಿಗೆ ಬಹಳ ಬೇಗ ಕನೆಕ್ಟ್ ಆಗುತ್ತದೆ. ಹಾಗಾಗಿ ಡಾ. ರಾಜ್​ಕುಮಾರ್ , ಶಂಕರ್ ನಾಗ್, ವಿಷ್ಣುವರ್ಧನ್, ಅಂಬರೀಶ್ ಅವರ ಅಭಿಮಾನಿಗಳಿಂದ ಟ್ರೇಲರ್ ಬಿಡುಗಡೆ ಮಾಡಿಸಲಾಯಿತು.

1st Day 1st Show Movie Team

1st Day 1st Show Movie Team

ಸಾರಾ ಗೋವಿಂದು, ವೀರಕಪುತ್ರ ಶ್ರೀನಿವಾಸ್, ಮಾಲ್ಗುಡಿ ಡೇಸ್ ಖ್ಯಾತಿಯ ಮಂಜುನಾಥ್ ಮುಂತಾದವರು ‘ಫಸ್ಟ್ ಡೇ ಫಸ್ಟ್ ಶೋ’ ಸಿನಿಮಾ ತಂಡಕ್ಕೆ ಶುಭ ಕೋರಿದ್ದಾರೆ. ಟ್ರೇಲರ್​ನಲ್ಲಿ ನಟ ಪ್ರಕಾಶ್ ರಾಜ್ ಅವರ ನಿರೂಪಣೆ ಇದೆ. ಗಿರೀಶ್ ಜಿ, ಜೀವಿತಾ ವಸಿಷ್ಟ, ಅನಿರುದ್ಧ ಶಾಸ್ತ್ರಿ, ರೋಹಿತ್ ಶ್ರೀನಾಥ್, ಬಿಎಂ ವೆಂಕಟೇಶ್, ಗಿಲ್ಲಿ ನಟ, ರೇಷ್ಮಾ ಲಿಂಗರಾಜಪ್ಪ, ಚಂದ್ರು, ಹರೀಶ್ ಅರಸು, ಶ್ಯಾಮ್, ಶೋಭಿತಾ ಶಿವಣ್ಣ, ಗಣೇಶ್, ಪ್ರಶಾಂತ್ ವೈಎನ್ ಮುಂತಾದವರು ನಟಿಸಿದ್ದಾರೆ.

ಇದನ್ನೂ ಓದಿ
Image
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
Image
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
Image
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
Image
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ನಿರ್ದೇಶಕ ಗಿರೀಶ್ ಅವರ ಕನಸಿಗೆ ಬಂಡವಾಳ ಹೂಡಿದ್ದಾರೆ ಊರ್ಮಿಳಾ ಕಿರಣ್. ಮಧು ಕುಮಾರ್, ಯೋಗೇಶ್ ಶ್ರೀನಿವಾಸ್, ಸುನಿಲ್ ಸಿಬಿ, ವರುಣ್ ಜೆ, ಭಾಸ್ಕರ್ ಸಿಎಸ್ ಅವರು ಸಹ-ನಿರ್ಮಾಪಕರಾಗಿದ್ದಾರೆ. ಉಜ್ವಲ್ ಚಂದ್ರ ಅವರು ಸಂಕಲನ ಮಾಡಿದ್ದಾರೆ. ರಾಕೇಶ್ ಸಿ. ತಿಲಕ್ ಮತ್ತು ಅರುಣ್ ಕುಮಾರ್ ಅವರ ಛಾಯಾಗ್ರಹಣ ಈ ಸಿನಿಮಾಗಿದೆ. ಸ್ವಾಮಿನಾಥನ್ ಅವರು ಹಿನ್ನೆಲೆ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ: ಯಶ್ ಸಿನಿಮಾ ಮೇಲೆ ಬಂಡವಾಳ ಹೂಡಿದ ಆಸ್ಕರ್ ವಿಜೇತ ಹಾಲಿವುಡ್ ನಿರ್ಮಾಪಕ

‘ಫಸ್ಟ್ ಡೇ ಫಸ್ಟ್ ಶೋ’ ಸಿನಿಮಾದ ಟ್ರೇಲರ್ ಬಿಡುಗಡೆ ನಂತರ ನಿರ್ದೇಶಕ ಗಿರೀಶ್ ಮಾತನಾಡಿದರು. ‘ಒಂದ್ ಕಥೆ ಹೇಳ್ಲಾ, ವಾವ್, ಶಾಲಿವಾಹನ ಶಕೆ‌ ಬಳಿಕ ಫಸ್ಟ್ ಡೇ‌ ಫಸ್ಟ್ ಶೋ ನನ್ನ ನಾಲ್ಕನೇ ಸಿನಿಮಾ. ಪ್ರತಿ ಸಿನಿಮಾ ಕೂಡ ಬೇರೆ ರೀತಿ ಅಭಿರುಚಿ ಹೊಂದಿವೆ. ಫಸ್ಟ್ ಡೇ ಫಸ್ಟ್ ಶೋ ಒಂದು ಕಥೆ ಎನ್ನುವುದಕ್ಕಿಂತ ಇಡೀ ಚಿತ್ರರಂಗವನ್ನು ಪ್ರತಿನಿಧಿಸುವ ಸೆಲೆಬ್ರೆಷನ್. ಕನ್ನಡ ಚಿತ್ರರಂಗದ ಬಗ್ಗೆ ಪಾಸಿಟಿವ್ ಭಾವನೆ ಮೂಡಲಿ ಎಂದು ಮಾಡಿರುವ ಸಿನಿಮಾ ಇದು’ ಎಂದು ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!