Love You Racchu: ಫೈಟರ್​ ವಿವೇಕ್​ ಸಾವು; ನಿರ್ದೇಶಕ ಶಂಕರ್​, ಸಾಹಸ ನಿರ್ದೇಶಕ ವಿನೋದ್​ ಪೊಲೀಸರ ವಶಕ್ಕೆ

Fighter Vivek Death: ರಚಿತಾ ರಾಮ್​ ಮತ್ತು ಅಜಯ್​ ರಾವ್​ ಜೋಡಿಯಾಗಿ ನಟಿಸುತ್ತಿರುವ ‘ಲವ್​ ಯೂ ರಚ್ಚು’ ಸಿನಿಮಾ ಚಿತ್ರೀಕರಣದ ವೇಳೆ ಫೈಟರ್​ ವಿವೇಕ್​ ಸಾವನ್ನಪ್ಪಿದ್ದು, ಈ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಾವಿಗೆ ಸೂಕ್ತ ಕಾರಣ ಏನೆಂಬುದು ತಿಳಿಯಲು ತನಿಖೆ ಶುರುವಾಗಿದೆ.

Love You Racchu: ಫೈಟರ್​ ವಿವೇಕ್​ ಸಾವು; ನಿರ್ದೇಶಕ ಶಂಕರ್​, ಸಾಹಸ ನಿರ್ದೇಶಕ ವಿನೋದ್​ ಪೊಲೀಸರ ವಶಕ್ಕೆ
ಅಜಯ್​ ರಾವ್​, ರಚಿತಾ ರಾಮ್​, ಮೃತ ಫೈಟರ್​ ವಿವೇಕ್​
Follow us
| Updated By: ಮದನ್​ ಕುಮಾರ್​

Updated on:Aug 09, 2021 | 4:28 PM

ಸ್ಯಾಂಡಲ್​ವುಡ್​ ಪಾಲಿಗೆ ಸೋಮವಾರ (ಆ.9) ಕಹಿ ಸುದ್ದಿ ಕೇಳಿಬಂದಿದೆ. ರಚಿತಾ ರಾಮ್​ (Rachita Ram) ಮತ್ತು ಅಜಯ್​ ರಾವ್​ (Ajay Rao) ನಟನೆಯ ‘ಲವ್​ ಯೂ ರಚ್ಚು’ ಸಿನಿಮಾದ ಶೂಟಿಂಗ್​ ವೇಳೆ ಅವಘಡ ಸಂಭವಿಸಿದ್ದು ಫೈಟರ್ ವಿವೇಕ್​ ಎಂಬುವವರು ನಿಧನರಾಗಿದ್ದಾರೆ. ವಿದ್ಯುತ್​ ತಂತಿ ತಗುಲಿ ಅವರು ಮೃತರಾಗಿದ್ದಾರೆ ಎನ್ನಲಾಗಿದೆ. ಘಟನೆ ಬಳಿಕ ‘ಲವ್​ ಯೂ ರಚ್ಚು’ (Love You Racchu) ಚಿತ್ರದ ನಿರ್ದೇಶಕ ಶಂಕರ್​, ಸಾಹಸ ನಿರ್ದೇಶಕ ವಿನೋದ್​ ಮತ್ತು ಜೆಸಿಬಿ ಡ್ರೈವರ್​ ಒಬ್ಬರನ್ನು ರಾಮನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ತನಿಖೆ ನಡೆಯುತ್ತಿದೆ. ದುರ್ಘಟನೆಯಲ್ಲಿ ರಂಜಿತ್​ ಎಂಬ ವ್ಯಕ್ತಿಗೂ ಗಂಭೀರ ಗಾಯಗಳಾಗಿವೆ. ಅವರನ್ನು​ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

‘ಲವ್​ ಯೂ ರಚ್ಚು’ ಸಿನಿಮಾದಲ್ಲಿ ಅಜಯ್​ ರಾವ್​ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ರಚಿತಾ ರಾಮ್ ಈ ಚಿತ್ರದ ನಾಯಕಿ. ಶಂಕರ್​ ರಾಜ್​ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಗುರು ದೇಶಪಾಂಡೆ ಚಿತ್ರದ ನಿರ್ಮಾಪಕ. ಮಣಿಕಾಂತ್​ ಕದ್ರಿ ಅವರು ಸಿನಿಮಾಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ರಾಮನಗರ ತಾಲೂಕಿನ ಜೋಗನದೊಡ್ಡಿ ಬಳಿ ‘ಲವ್​​ ಯೂ ರಚ್ಚು’ ಚಿತ್ರದ ಶೂಟಿಂಗ್​ ನಡೆಯುತ್ತಿತ್ತು. ಈ ವೇಳೆ ರೋಪ್​ ಎಳೆಯುವಾಗ ಫೈಟರ್​ ವಿವೇಕ್​ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.​ ವಿದ್ಯುತ್​ ತಂತಿಗೆ ರೋಪ್ ಸ್ಪರ್ಶಿಸಿದ್ದು ವಿವೇಕ್​ ಸಾವಿಗೆ ಕಾರಣ ಎನ್ನಲಾಗಿದೆ.

ವಿವೇಕ್​ ನಿಧನಕ್ಕೆ ಚಿತ್ರದ ನಾಯಕ ಅಜಯ್​ ರಾವ್​ ಬೇಸರ ವ್ಯಕ್ತಪಡಿಸಿದ್ದಾರೆ. ಸೂಕ್ತ ಮುನ್ನೆಚ್ಚರಿಕೆ ವಹಿಸದೇ, ನಿರ್ಲಕ್ಷ್ಯ ತೋರಿದ್ದೇ ಈ ದುರಂತಕ್ಕೆ ಕಾರಣ ಎಂದು ಅವರು ಆರೋಪಿಸಿದ್ದಾರೆ. ‘ಮೆಟಲ್​ ರೋಪ್​ ಬಳಸಿದ್ದರಿಂದ ದುರಂತ ಸಂಭವಿಸಿದೆ. ಈ ದೃಶ್ಯದ ಚಿತ್ರೀಕರಣದ ವೇಳೆ ನಾನು ಇರಲಿಲ್ಲ. ಜಾಕೇಟ್​ ಹಾಕಿದ್ದವನಿಗೂ ಶಾಕ್​ ಹೊಡೆದಿದೆ. ಮುಂಜಾಗ್ರತ ಕ್ರಮ ತೆಗೆದುಕೊಳ್ಳದ್ದಕ್ಕೆ ದುರಂತ ನಡೆದಿದೆ. ಈ ದೃಶ್ಯದ ಚಿತ್ರೀಕರಣದಲ್ಲಿ ನಾನಿದ್ರೆ ಮಾಡುತ್ತಿರಲಿಲ್ಲ. ನಾನೇನಾದ್ರೂ ಹೇಳಲು ಹೋದ್ರೆ ಮೂಗು ತೂರಿಸ್ತಾರೆ ಅಂತಾರೆ. ನಾನು ನಿರ್ದೇಶಕರ ಬಳಿ ಮಾತನಾಡುವುದಕ್ಕೆ ಆಗಿಲ್ಲ. ಘಟನಾ ಸ್ಥಳದಿಂದ ನಾನು 200 ಮೀಟರ್ ದೂರ ಇದ್ದೆ. ಬಳಿಕ ನಮ್ಮ ಹುಡುಗರು ಬಂದು ಮಾಹಿತಿ ನೀಡಿದರು. ನನಗೂ ಕೂಡ ಸರಿಯಾದ ಮಾಹಿತಿ ಸಿಕ್ಕಿಲ್ಲ’ ಎಂದು ಅಜಯ್​ ರಾವ್​ ಹೇಳಿದ್ದಾರೆ.

‘ಇದು ತುಂಬಾ ಬೇಸರವಾದ ವಿಷಯ. ವಿವೇಕ್​ಗೆ ನ್ಯಾಯ ಸಿಗುವವರೆಗೂ ಶೂಟಿಂಗ್​ಗೆ ಬರಲ್ಲ. ಮೆಟಲ್​ ರೋಪ್​ ಬಳಸುವ ಬಗ್ಗೆ ಪ್ರಶ್ನಿಸಿ ಕೆಟ್ಟವನಾಗಿದ್ದೇನೆ. ನನಗೂ ಫೈಟರ್​ ವಿವೇಕ್​ಗೂ ಸಂಪರ್ಕ ಇರಲಿಲ್ಲ. ಪ್ಯಾಚ್​ವರ್ಕ್​ ಸೀನ್​ಗಳನ್ನ ಶೂಟ್​ ಮಾಡುತ್ತಿದ್ದೆವು. ಚಿತ್ರದ ಬಗ್ಗೆ ಜಾಸ್ತಿ ಕೇಳಿದರೆ ನಾವು ಕೆಟ್ಟವರಾಗಿಬಿಡುತ್ತೇವೆ’ ಎಂದು ಅಜಯ್​ ರಾವ್​ ಅಸಮಾಧಾನ ಹೊರ ಹಾಕಿದ್ದಾರೆ.

ಇದನ್ನೂ ಓದಿ:

Fighter Vivek Death: ರಚಿತಾ ರಾಮ್​ ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವು; ವಿದ್ಯುತ್ ತಂತಿ ಸ್ಪರ್ಶಿಸಿ ಅವಘಡ

Published On - 4:12 pm, Mon, 9 August 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ