AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2025ರ ಮೊದಲ ಕನ್ನಡ ಚಿತ್ರವಾಗಿ ತೆರೆಕಾಣಲಿದೆ ‘ಗನ್ಸ್ ಆ್ಯಂಡ್ ರೋಸಸ್’

‘ನಂದ ಲವ್ಸ್ ನಂದಿತಾ’ ಸಿನಿಮಾದಲ್ಲಿ ಅರ್ಜುನ್ ಅವರು ಬಾಲನಟನಾಗಿ ಅಭಿನಯಿಸಿದ್ದರು. ಈಗ ಅವರು ಹೀರೋ ಆಗಿದ್ದಾರೆ. ಮೊದಲ ಬಾರಿಗೆ ಹೀರೋ ಆಗಿ ಅಭಿನಯಿಸಿರುವ ‘ಗನ್ಸ್ ಆ್ಯಂಡ್ ರೋಸಸ್’ ಸಿನಿಮಾ ಜ.3ರಂದು ರಿಲೀಸ್​ ಆಗಲಿದೆ. ಹೆಚ್.ಆರ್. ನಟರಾಜ್ ನಿರ್ಮಿಸಿದ ಈ ಚಿತ್ರಕ್ಕೆ ಶ್ರೀನಿವಾಸ್ ಕುಮಾರ್ ಅವರ ನಿರ್ದೇಶನವಿದೆ.

2025ರ ಮೊದಲ ಕನ್ನಡ ಚಿತ್ರವಾಗಿ ತೆರೆಕಾಣಲಿದೆ ‘ಗನ್ಸ್ ಆ್ಯಂಡ್ ರೋಸಸ್’
Guns And Roses
ಮದನ್​ ಕುಮಾರ್​
|

Updated on: Dec 29, 2024 | 7:01 PM

Share

ಕನ್ನಡದ ಹಲವು ಸಿನಿಮಾಗೆ ಕಥೆ ಬರೆದ ಅಜಯ್ ಕುಮಾರ್ ಅವರ ಮಗ ಅರ್ಜುನ್ ಅವರು ಈಗ ಹೀರೋ ಆಗಿ ಸಿನಿಮಾರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಅವರು ಹೀರೋ ಆಗಿ ಅಭಿನಯಿಸಿದ ಮೊದಲ ಸಿನಿಮಾ ‘ಗನ್ಸ್ ಆ್ಯಂಡ್ ರೋಸಸ್’ ಬಿಡುಗಡೆಗೆ ಸಜ್ಜಾಗಿದೆ. 2025ರ ಮೊದಲ ಶುಕ್ರವಾರ, ಅಂದರೆ ಜನವರಿ 3ರಂದು ಈ ಸಿನಿಮಾ ತೆರೆ ಕಾಣಲಿದೆ. ಆ ಮೂಲಕ ಹೊಸ ವರ್ಷದಲ್ಲಿ ಬಿಡುಗಡೆ ಆಗಲಿರುವ ಕನ್ನಡದ ಮೊದಲ ಸಿನಿಮಾವಾಗಿ ‘ಗನ್ಸ್ ಆ್ಯಂಡ್ ರೋಸಸ್’ ಬರಲಿದೆ.‘ದ್ರೋಣ ಕ್ರಿಯೇಷನ್ಸ್’ ಮೂಲಕ ಹೆಚ್.ಆರ್. ನಟರಾಜ್ ಅವರು ‘ಗನ್ಸ್ ಆ್ಯಂಡ್ ರೋಸಸ್’ ಸಿನಿಮಾವನ್ನು ನಿರ್ಮಿಸಿದ್ದಾರೆ. ಶ್ರೀನಿವಾಸ್ ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರತಂಡದಿಂದ ಸುದ್ದಿಗೋಷ್ಠಿ ನಡೆಯಿತು.

ನಿರ್ಮಾಪಕ ಹೆಚ್.ಆರ್. ನಟರಾಜ್ ಅವರು ಮಾತನಾಡಿ, ‘ನಾನು ಮೂಲತಃ ಚಿತ್ರರಂಗದವನಲ್ಲ. ರಾಜಕೀಯದಲ್ಲಿ ಸಕ್ರಿಯ ಆಗಿದ್ದೇನೆ‌. ಬಿಲ್ಡರ್ ಕೂಡ ಹೌದು. ನಾವು ನಂಬಿದ ಶ್ಯಾಮ್ ಶಂಕರ್ ಭಟ್ ಗುರುಗಳು ಈ ಸಿನಿಮಾ‌ ಮಾಡಲು ನನಗೆ ಆದೇಶಿಸಿದರು. ಅವರ ಮಾತಿನಂತೆ ಸಿನಿಮಾ‌ ಕ್ಷೇತ್ರಕ್ಕೆ ಬಂದಿದ್ದೇನೆ’ ಎಂದರು. ‘ಗೋಕುಲ್ ಫಿಲಂಸ್’ ಮೂಲಕ ಈ ಸಿನಿಮಾ ಬಿಡುಗಡೆ ಆಗಲಿದೆ.

ಕಳೆದ 25 ವರ್ಷಗಳಿಂದ ಅನೇಕ ಚಿತ್ರಗಳಿಗೆ ಸಹ-ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವ ಶ್ರೀನಿವಾಸ್ ಕುಮಾರ್​ ಅವರಿಗೆ ಇದೆ. ಈಗ ಅವರು ‘ಗನ್ಸ್ ಆ್ಯಂಡ್ ರೋಸಸ್’ ಸಿನಿಮಾ ಮೂಲಕ ಮೊದಲ ಬಾರಿಗೆ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಯಶ್ವಿಕಾ ನಿಷ್ಕಲಾ ಅವರು ನಾಯಕಿಯಾಗಿ ನಟಿಸಿದ್ದಾರೆ. ಅವಿನಾಶ್, ಕಿಶೋರ್, ಶೋಭರಾಜ್, ನೀನಾಸಂ ಅಶ್ವಥ್, ಜೀವನ್ ರಿಚಿ ಸೇರಿದಂತೆ ಹಲವು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: Year Ender 2024: ಈ ವರ್ಷ ಹಿಟ್ ಆದ ಕನ್ನಡ ಸಿನಿಮಾಗಳಿವು

‘ಗನ್ಸ್ ಆ್ಯಂಡ್ ರೋಸಸ್’ ಚಿತ್ರಕ್ಕೆ ಶಶಿಕುಮಾರ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಜನಾರ್ದನ್ ಬಾಬು ಅವರು ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸಿದ್ದಾರೆ. ಸಂಜೀವ್ ರೆಡ್ಡಿ ಅವರು ಸಂಕಲನ ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕೆ. ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಶರತ್ ಅವರು ಬರೆದಿದ್ದಾರೆ. ತಾಂತ್ರಿಕ ಬಳಗದವರು, ಕಲಾವಿದರು ಸುದ್ದಿಗೋಷ್ಠಿಯಲ್ಲಿ ಭಾಗಿ ಆಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು