AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಸುಮಾರು 25 ಲಕ್ಷ ಜನರಿಂದ ಪುನೀತ್​ ಅಂತಿಮ ದರ್ಶನ; ಎಲ್ಲರ ಸಹಕಾರಕ್ಕೆ ಸಿಎಂ ಬೊಮ್ಮಾಯಿ ಕೃತಜ್ಞತೆ

CM Basavaraj Bommai: ಸುಮಾರು 25 ಲಕ್ಷ ಅಭಿಮಾನಿಗಳು ಆಗಮಿಸಿ ಪುನೀತ್​ಗೆ ನಮನ ಸಲ್ಲಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಮರ್ಪಿಸಿದ್ದಾರೆ.

Puneeth Rajkumar: ಸುಮಾರು 25 ಲಕ್ಷ ಜನರಿಂದ ಪುನೀತ್​ ಅಂತಿಮ ದರ್ಶನ; ಎಲ್ಲರ ಸಹಕಾರಕ್ಕೆ ಸಿಎಂ ಬೊಮ್ಮಾಯಿ ಕೃತಜ್ಞತೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Updated By: shivaprasad.hs|

Updated on:Oct 31, 2021 | 2:58 PM

Share

ಪುನೀತ್ ಅಂತಿಮ ದರ್ಶನ, ಅಂತ್ಯಕ್ರಿಯೆಯನ್ನು ಸಣ್ಣ ಪ್ರಮಾದವೂ ಆಗದಂತೆ ಪೊಲೀಸರು, ಕಂದಾಯ ಇಲಾಖೆಯ ಅಧಿಕಾರಿಗಳು, ಬಿಬಿಎಂಪಿಯವರು ಶ್ರದ್ಧಾಪೂರ್ವಕವಾಗಿ ನಿರ್ವಹಿಸಿದ್ದಾರೆ. ಸಹಕಾರ ಕೊಟ್ಟಿರುವ ಎಲ್ಲರಿಗೂ ಧನ್ಯವಾದಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನುಡಿದಿದ್ದಾರೆ. ಡಾ.ರಾಜ್ ಕುಟುಂಬಸ್ಥರು ಸಂಪೂರ್ಣ ಸಹಕಾರ ಕೊಟ್ಟಿದ್ದಾರೆ. ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಹಾಗೂ ಅವರ ಕುಟುಂಬದವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಕರುನಾಡಿನ ಜನರು ಶಾಂತಿಯುತವಾಗಿ ಸಹಕರಿಸಿದ್ದಾರೆ. ಅಧಿಕಾರಿಗಳು ತಮ್ಮ ಕರ್ತವ್ಯ ಉತ್ತಮವಾಗಿ ನಿಭಾಯಿಸಿದ್ದಾರೆ. ಅದಕ್ಕೆ ಶಿವರಾಜ್‌ಕುಮಾರ್ ಧನ್ಯವಾದಗಳನ್ನು ಹೇಳಿದ್ದಾರೆ. ಇದು ಅವರ ಹಾಗೂ ದೊಡ್ಮನೆ ದೊಡ್ಡಗುಣ ತೋರಿಸುತ್ತದೆ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುಮಾರು 25 ಲಕ್ಷ ಜನರಿಂದ ಅಂತಿಮ ದರ್ಶನ; ಗೃಹ ಸಚಿವ ಆರಗ ಜ್ಞಾನೇಂದ್ರ ಸುಮಾರು 25 ಲಕ್ಷ ಜನರು ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಅವರು ಮಾತನಾಡಿದರು. ಇದೇ ವೇಳೆ ಅವರು ಅಂತ್ಯಕ್ರಿಯೆಗೆ ಸಹಕಾರ ನೀಡಿದ ಅಧಿಕಾರಿಗಳು, ಅಭಿಮಾನಿಗಳು ಹಾಗೂ ಭದ್ರತಾ ಪಡೆಯ ಎಲ್ಲರಿಗೂ ಧನ್ಯವಾದ ಸಮರ್ಪಿಸಿದ್ದಾರೆ. ‘‘ಶಾಂತಿ ಸುವ್ಯವಸ್ಥೆ ಕಾಪಾಡಿದವರಿಗೆ ಅಭಿನಂದನೆ ಸಲ್ಲಿಸುವೆ. ಪೊಲೀಸರ ಶ್ರಮ ಬಹಳ ಇದೆ. ಬೆಂಗಳೂರಿನಲ್ಲಿ ಭದ್ರತೆಗೆ 20 ಸಾವಿರ ಪೊಲೀಸರು, ಜಿಲ್ಲೆಗಳಿಂದ ಒಂದೂವರೆ ಸಾವಿರ ಪೊಲೀಸರು, ಕೇಂದ್ರ ಪಡೆ, 50 ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿತ್ತು. ಹಗಲು ರಾತ್ರಿ ಎನ್ನದೆ ಎಲ್ಲರೂ ನಿದ್ದೆಯನ್ನು ಬಿಟ್ಟು ಶ್ರಮಿಸಿದ್ದಾರೆ. ಸಿಎಂ ಬೊಮ್ಮಾಯಿ, ಸಚಿವರು ಜತೆಯಲ್ಲಿದ್ದು ಸಹಕರಿಸಿದ್ದಾರೆ. ಅಭಿಮಾನಿಗಳು ಶಾಂತಿಯಿಂದ, ಶಿಸ್ತಿನಿಂದ ಸಹಕರಿಸಿದ್ದಾರೆ. ಡಾ.ರಾಜ್ ಕುಟುಂಬವೂ ಸರ್ಕಾರಕ್ಕೆ ಸಹಕಾರ ನೀಡಿದೆ. ಮಾಧ್ಯಮಗಳು ಕೂಡ ಉತ್ತಮ ಕೆಲಸವನ್ನು ಮಾಡಿವೆ’’ ಎಂದು ಆರಗ ನುಡಿದಿದ್ಧಾರೆ.

ಭದ್ರತಾ ಸಿಬ್ಬಂದಿಯ ಕೈಕುಲುಕಿ ಪ್ರಶಂಸಿಸಿದ ಕಮಲ್ ಪಂತ್ ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ವೇಳೆ ಭದ್ರತೆ ಒದಗಿಸಿ, ಸುಸೂತ್ರವಾಗಿ ನಡೆಯುವಂತೆ ಮಾಡಿದ ಪೊಲೀಸ್ ಸಿಬ್ಬಂದಿಗೆ ಕೈಕುಲುಕಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಹಗಲು-ರಾತ್ರಿ ಎನ್ನದೆ ಕರ್ತವ್ಯ ನಿರ್ವಹಿಸಿದ ಪೊಲೀಸರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:

ವಿದೇಶಿ ನ್ಯೂಸ್​ ಚಾನೆಲ್​ಗಳಲ್ಲಿ ಪುನೀತ್​ ನಿಧನದ ಸುದ್ದಿ; ಸೌತ್​ ಕೊರಿಯಾದಲ್ಲೂ ಅಭಿಮಾನದ ಹೊಳೆ

ಇಬ್ಬರಿಗೆ ಪುನೀತ್ ರಾಜ್​ಕುಮಾರ್ ಕಣ್ಣುಗಳು ಅಳವಡಿಕೆ; ನಾರಾಯಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

Published On - 2:31 pm, Sun, 31 October 21

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ