ದರ್ಶನ್ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ; ಬೆಳ್ಳಿ ಪರ್ವಕ್ಕೆ ನಡೆದಿದೆ ಭರದ ಸಿದ್ಧತೆ

ದರ್ಶನ್ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು 25 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಆಚರಿಸಲಾಗುತ್ತಿದೆ. ಶನಿವಾರ (ಫೆಬ್ರವರಿ 17) ಸಂಜೆ 5ಕ್ಕೆ ಕಾರ್ಯಕ್ರಮ ಆರಂಭ ಆಗಲಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ರಂಗನಾಥ ಸ್ವಾಮಿ ದೇವಸ್ಥಾನದ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ದರ್ಶನ್ ಅವರನ್ನು ಅಭಿನಂದಿಸಲು ಫ್ಯಾನ್ಸ್ ರೆಡಿ ಆಗುತ್ತಿದ್ದಾರೆ.

ದರ್ಶನ್ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ; ಬೆಳ್ಳಿ ಪರ್ವಕ್ಕೆ ನಡೆದಿದೆ ಭರದ ಸಿದ್ಧತೆ
ದರ್ಶನ್

Updated on: Feb 12, 2024 | 10:40 AM

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan Thoogudeepa) ಅವರು ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷಗಳು ಕಳೆದಿವೆ. ಬಾಕ್ಸ್ ಆಫೀಸ್ ಸುಲ್ತಾನ, ಚಾಲೆಂಜಿಂಗ್ ಸ್ಟಾರ್ ಸೇರಿ ಹಲವು ಬಿರುದುಗಳು ಅವರಿಗೆ ಇದೆ. ಅವರು 25 ವರ್ಷಗಳಲ್ಲಿ ಅಪಾರ ಅಭಿಮಾನಿ ಬಳಗ ಸಂಪಾದಿಸಿದ್ದಾರೆ. ಅವರನ್ನು ಆರಾಧಿಸುವ ಅಭಿಮಾನಿ ವರ್ಗ ದೊಡ್ಡದಿದೆ. ಈಗ ದರ್ಶನ್ ಅವರ ಫ್ಯಾನ್ಸ್ ‘ಬೆಳ್ಳಿ ಪರ್ವ’ ಆಚರಣೆಗೆ ಮುಂದಾಗಿದ್ದಾರೆ. ಅದ್ದೂರಿಯಾಗಿ ಈ ಕಾರ್ಯಕ್ರಮ ನಡೆಯಲಿದೆ.

1997ರಲ್ಲಿ ‘ಮಹಾಭಾರತ’ ಚಿತ್ರದಲ್ಲಿ ದರ್ಶನ್ ನಟಿಸಿದರು. 2000ನೇ ಇಸವಿಯಲ್ಲಿ ನಟ ದರ್ಶನ್ ಅವರು ಶಿವರಾಜ್​ಕುಮಾರ್, ಅಂಬರೀಷ್ ನಟನೆಯ ‘ದೇವರ ಮಗ’ ಸಿನಿಮಾದಲ್ಲಿ ನಟಿಸಿದರು. ದರ್ಶನ್ ಹೆಸರಿನ ಪಾತ್ರದಲ್ಲಿಯೇ ಕಾಣಿಸಿಕೊಂಡರು ಚಾಲೆಂಜಿಂಗ್ ಸ್ಟಾರ್. ನಂತರ ‘ವಲ್ಲರಸು’ ಚಿತ್ರದಲ್ಲಿ ಅವರು ನಟಿಸಿದರು. ಇದು ತಮಿಳು ಸಿನಿಮಾ. ನಂತರ ಕೆಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದರು. ‘ಮೆಜೆಸ್ಟಿಕ್’ ಚಿತ್ರದಲ್ಲಿ ದರ್ಶನ್ ಹೀರೋ ಆಗಿ ಮಿಂಚಿದರು. ಅಲ್ಲಿಂದ ಅವರು ಹಿಂದಿರುಗಿ ನೋಡಿದ್ದೇ ಇಲ್ಲ. ಹಲವು ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ.

ದರ್ಶನ್ ಕುರಿತ ಟ್ವೀಟ್..

ದರ್ಶನ್ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಆಚರಿಸಲಾಗುತ್ತಿದೆ. ಬರುವ ಶನಿವಾರ (ಫೆಬ್ರವರಿ 17) ಸಂಜೆ 5ಕ್ಕೆ ಈ ಕಾರ್ಯಕ್ರಮ ಆರಂಭ ಆಗಲಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ರಂಗನಾಥ ಸ್ವಾಮಿ ದೇವಸ್ಥಾನದ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ದರ್ಶನ್ ಅವರನ್ನು ಅಭಿನಂದಿಸಲು ಫ್ಯಾನ್ಸ್ ರೆಡಿ ಆಗುತ್ತಿದ್ದಾರೆ.

ಇದನ್ನೂ ಓದಿ: ಪತ್ನಿ, ಮಗನೊಡನೆ ತಿರುಪತಿ, ಕಾಳಹಸ್ತಿ ದೇವಾಲಯಗಳಿಗೆ ದರ್ಶನ್ ಭೇಟಿ

25ನೇ ವರ್ಷಕ್ಕೆ ದರ್ಶನ್ ಅವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅವರ ನಟನೆಯ ‘ಕಾಟೇರ’ ಚಿತ್ರ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 200 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇತ್ತೀಚೆಗೆ ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಈ ಚಿತ್ರದ ಮೂಲಕ ದರ್ಶನ್ ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರಕ್ಕೆ ತರುಣ್ ಸುಧೀರ್ ನಿರ್ದೇಶನ ಇದೆ. ಕಳೆದ ಡಿಸೆಂಬರ್ 29ರಂದು ಚಿತ್ರ ರಿಲೀಸ್ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Published On - 10:39 am, Mon, 12 February 24

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us