AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಟ್ವರ್​ಲಾಲ್‌’ ಚಿತ್ರದಿಂದ 2ನೇ ಹಾಡು ಬಿಡುಗಡೆ; ‘ವರಾಹ ರೂಪಂ..’ ಗಾಯಕನ ರೊಮ್ಯಾಂಟಿಕ್​ ಗೀತೆ ಇದು

‘ಅಚ್ಚಚ್ಚೋ ಅಚ್ಚು ಮೆಚ್ಚಿವಳು..’ ಹಾಡನ್ನು ಭರ್ಜರಿ ಚೇತನ್ ಕುಮಾರ್ ಬರೆದಿದ್ದಾರೆ. ಧರ್ಮ ವಿಶ್​ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ‘ವರಾಹ ರೂಪಂ..’ ಹಾಡಿನ ಮೂಲಕ ಕನ್ನಡದಲ್ಲಿ ಜನಪ್ರಿಯತೆ ಪಡೆದ ಗಾಯಕ ಸಾಯಿ ವಿಘ್ನೇಶ್ ಅವರು ಇದೇ ಮೊದಲ ಬಾರಿಗೆ ಚಂದನವನದಲ್ಲಿ ರೊಮ್ಯಾಂಟಿಕ್ ಹಾಡಿಗೆ ಧ್ವನಿ ನೀಡಿದ್ದಾರೆ.

‘ನಟ್ವರ್​ಲಾಲ್‌’ ಚಿತ್ರದಿಂದ 2ನೇ ಹಾಡು ಬಿಡುಗಡೆ; ‘ವರಾಹ ರೂಪಂ..’ ಗಾಯಕನ ರೊಮ್ಯಾಂಟಿಕ್​ ಗೀತೆ ಇದು
ತನುಷ್ ಶಿವಣ್ಣ, ಸೋನಲ್ ಮಾಂಥೆರೋ
ಮದನ್​ ಕುಮಾರ್​
| Edited By: |

Updated on:Nov 07, 2023 | 6:35 AM

Share

‘ಕಾಂತಾರ’ ಸಿನಿಮಾದ ಯಶಸ್ಸಿನಲ್ಲಿ ಆ ಚಿತ್ರದ ಹಾಡುಗಳ ಕೊಡುಗೆ ಕೂಡ ಸಾಕಷ್ಟಿದೆ. ಅದರಲ್ಲೂ ‘ವರಾಹ ರೂಪಂ..’ ಹಾಡು ಸೂಪರ್​ ಹಿಟ್​ ಆಯಿತು. ಈ ಗೀತೆಗೆ ಧ್ವನಿ ನೀಡಿದ್ದು ಸಾಯಿ ವಿಘ್ನೇಶ್ (Sai Vignesh)​. ಅವರ ಕಂಠದಿಂದ ಕನ್ನಡದಲ್ಲಿ ಇನ್ನೊಂದು ಹೊಸ ಗೀತೆ ಮೂಡಿಬಂದಿದೆ. ಅದು ‘ಮಿಸ್ಟರ್​ ನಟ್ವರ್​ಲಾಲ್​’ ಸಿನಿಮಾದಿಂದ. ಈ ಮೊದಲು ‘ಮಡಮಕ್ಕಿ’, ‘ನಂಜುಂಡಿ ಕಲ್ಯಾಣ’ ಸಿನಿಮಾಗಳಲ್ಲಿ ಹೀರೋ ಆಗಿ ಮಿಂಚಿದ್ದ ನಟ ತನುಷ್ ಶಿವಣ್ಣ (Thanush Shivanna) ಅವರು ಈಗ ‘ಮಿಸ್ಟರ್​ ನಟ್ವರ್​ಲಾಲ್​’ (Mr Natwarlal) ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಲವ ಅವರು ‘ಮಿಸ್ಟರ್ ನಟ್ವರ್​ಲಾಲ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಟೀಸರ್ ಮತ್ತು ಮೊದಲ ಹಾಡಿಗೆ ಮೆಚ್ಚುಗೆ ಸಿಕ್ಕಿದೆ. ಈಗ ಎರಡನೇ ಹಾಡು ಕೂಡ ಗಮನ ಸೆಳೆಯುತ್ತಿದೆ. ಸದ್ಯಕ್ಕೆ ಪ್ರಚಾರ ಕಾರ್ಯದಲ್ಲಿ ಈ ಚಿತ್ರತಂಡ ನಿರತವಾಗಿದೆ.

ಒಂದು ಹೊಸ ಕಥೆಯೊಂದಿಗೆ ನಟ ತನುಷ್​ ಶಿವಣ್ಣ ಅವರು ‘ಮಿಸ್ಟರ್​ ನಟ್ವರ್​ಲಾಲ್’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಖ್ಯಾತ ನಟಿ ಸೋನಲ್ ಮಾಂಥೆರೋ ಅವರ ನಾಯಕಿಯಾಗಿ ಅಭಿನಯಿಸಿದ್ದಾರೆ. ಈ ಸಿನಿಮಾದಿಂದ ‘ಅಚ್ಚಚ್ಚೋ ಅಚ್ಚು ಮೆಚ್ಚಿವಳು..’ ಎಂಬ 2ನೇ ಹಾಡು ಬಿಡುಗಡೆ ಆಗಿದೆ. ಪ್ರೇಕ್ಷಕರಿಂದ ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ.

ಇದನ್ನೂ ಓದಿ: ಜಿಗರ್‌; ಸಿನಿಮಾದ ಹಾಡು ಬಿಡುಗಡೆ: ಸಂಚಿತ್ ಹೆಗ್ಡೆ ದನಿಯಲ್ಲಿ ಹೊಸ ಹಾಡು

‘ಅಚ್ಚಚ್ಚೋ ಅಚ್ಚು ಮೆಚ್ಚಿವಳು..’ ಹಾಡನ್ನು ಭರ್ಜರಿ ಚೇತನ್ ಕುಮಾರ್ ಬರೆದಿದ್ದಾರೆ. ಸಂಗೀತ ನಿರ್ದೇಶಕ ಧರ್ಮ ವಿಶ್​ ಅವರು ಈ ಗೀತೆಗೆ ಸಂಗೀತ ಸಂಯೋಜಿಸಿದ್ದಾರೆ. ಕನ್ನಡದಲ್ಲಿ ‘ಕಾಂತಾರ’ ಸಿನಿಮಾದ ‘ವರಾಹ ರೂಪಂ..’ ಹಾಡಿನ ಮೂಲಕ ಗಾಯಕ ಸಾಯಿ ವಿಘ್ನೇಶ್ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಂಡರು. ಈಗ ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಅವರು ರೊಮ್ಯಾಂಟಿಕ್ ಹಾಡಿಗೆ ಧ್ವನಿ ನೀಡಿದ್ದಾರೆ. ಈ ಹಾಡಿನಿಂದಾಗಿ ‘ಮಿಸ್ಟರ್​ ನಟ್ವರ್​ಲಾಲ್​’ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ: Mellage Song: ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಿಂದ ಬಂತು ‘ಮೆಲ್ಲಗೆ..’ ಮೆಲೋಡಿ ಸಾಂಗ್​

‘ಮಿಸ್ಟರ್​ ನಟ್ವರ್​ಲಾಲ್’ ಸಿನಿಮಾದಲ್ಲಿ ದೊಡ್ಡ ತಾರಾಬಳಗ ಇದೆ. ತನುಷ್ ಶಿವಣ್ಣ ಮತ್ತು ಸೋನಾಲ್ ಮಾಂಥೆರೋ ಜೊತೆಗೆ ನಾಗಭೂಷಣ್, ಕಾಕ್ರೋಚ್ ಸುಧಿ, ಯಶ್ ಶೆಟ್ಟಿ, ರಾಜೇಶ್ ನಟರಂಗ, ರಘು ರಾಮನಕೊಪ್ಪ, ರಾಜೇಂದ್ರ ಕಾರಂತ್ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ.

ಈ ಸಿನಿಮಾವನ್ನ ತನುಷ್ ಶಿವಣ್ಣ ಅವರೇ ನಿರ್ಮಾಣ ಮಾಡಿದ್ದಾರೆ. ಶೀಘ್ರವೇ ಸಿನಿಮಾವನ್ನು ರಿಲೀಸ್​ ಮಾಡಲು ತಯಾರಿ ನಡೆದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:26 pm, Mon, 6 November 23

Follow Us
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್