AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಟ್ವರ್​ಲಾಲ್‌’ ಚಿತ್ರದಿಂದ 2ನೇ ಹಾಡು ಬಿಡುಗಡೆ; ‘ವರಾಹ ರೂಪಂ..’ ಗಾಯಕನ ರೊಮ್ಯಾಂಟಿಕ್​ ಗೀತೆ ಇದು

‘ಅಚ್ಚಚ್ಚೋ ಅಚ್ಚು ಮೆಚ್ಚಿವಳು..’ ಹಾಡನ್ನು ಭರ್ಜರಿ ಚೇತನ್ ಕುಮಾರ್ ಬರೆದಿದ್ದಾರೆ. ಧರ್ಮ ವಿಶ್​ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ‘ವರಾಹ ರೂಪಂ..’ ಹಾಡಿನ ಮೂಲಕ ಕನ್ನಡದಲ್ಲಿ ಜನಪ್ರಿಯತೆ ಪಡೆದ ಗಾಯಕ ಸಾಯಿ ವಿಘ್ನೇಶ್ ಅವರು ಇದೇ ಮೊದಲ ಬಾರಿಗೆ ಚಂದನವನದಲ್ಲಿ ರೊಮ್ಯಾಂಟಿಕ್ ಹಾಡಿಗೆ ಧ್ವನಿ ನೀಡಿದ್ದಾರೆ.

‘ನಟ್ವರ್​ಲಾಲ್‌’ ಚಿತ್ರದಿಂದ 2ನೇ ಹಾಡು ಬಿಡುಗಡೆ; ‘ವರಾಹ ರೂಪಂ..’ ಗಾಯಕನ ರೊಮ್ಯಾಂಟಿಕ್​ ಗೀತೆ ಇದು
ತನುಷ್ ಶಿವಣ್ಣ, ಸೋನಲ್ ಮಾಂಥೆರೋ
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on:Nov 07, 2023 | 6:35 AM

‘ಕಾಂತಾರ’ ಸಿನಿಮಾದ ಯಶಸ್ಸಿನಲ್ಲಿ ಆ ಚಿತ್ರದ ಹಾಡುಗಳ ಕೊಡುಗೆ ಕೂಡ ಸಾಕಷ್ಟಿದೆ. ಅದರಲ್ಲೂ ‘ವರಾಹ ರೂಪಂ..’ ಹಾಡು ಸೂಪರ್​ ಹಿಟ್​ ಆಯಿತು. ಈ ಗೀತೆಗೆ ಧ್ವನಿ ನೀಡಿದ್ದು ಸಾಯಿ ವಿಘ್ನೇಶ್ (Sai Vignesh)​. ಅವರ ಕಂಠದಿಂದ ಕನ್ನಡದಲ್ಲಿ ಇನ್ನೊಂದು ಹೊಸ ಗೀತೆ ಮೂಡಿಬಂದಿದೆ. ಅದು ‘ಮಿಸ್ಟರ್​ ನಟ್ವರ್​ಲಾಲ್​’ ಸಿನಿಮಾದಿಂದ. ಈ ಮೊದಲು ‘ಮಡಮಕ್ಕಿ’, ‘ನಂಜುಂಡಿ ಕಲ್ಯಾಣ’ ಸಿನಿಮಾಗಳಲ್ಲಿ ಹೀರೋ ಆಗಿ ಮಿಂಚಿದ್ದ ನಟ ತನುಷ್ ಶಿವಣ್ಣ (Thanush Shivanna) ಅವರು ಈಗ ‘ಮಿಸ್ಟರ್​ ನಟ್ವರ್​ಲಾಲ್​’ (Mr Natwarlal) ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಲವ ಅವರು ‘ಮಿಸ್ಟರ್ ನಟ್ವರ್​ಲಾಲ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಟೀಸರ್ ಮತ್ತು ಮೊದಲ ಹಾಡಿಗೆ ಮೆಚ್ಚುಗೆ ಸಿಕ್ಕಿದೆ. ಈಗ ಎರಡನೇ ಹಾಡು ಕೂಡ ಗಮನ ಸೆಳೆಯುತ್ತಿದೆ. ಸದ್ಯಕ್ಕೆ ಪ್ರಚಾರ ಕಾರ್ಯದಲ್ಲಿ ಈ ಚಿತ್ರತಂಡ ನಿರತವಾಗಿದೆ.

ಒಂದು ಹೊಸ ಕಥೆಯೊಂದಿಗೆ ನಟ ತನುಷ್​ ಶಿವಣ್ಣ ಅವರು ‘ಮಿಸ್ಟರ್​ ನಟ್ವರ್​ಲಾಲ್’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಖ್ಯಾತ ನಟಿ ಸೋನಲ್ ಮಾಂಥೆರೋ ಅವರ ನಾಯಕಿಯಾಗಿ ಅಭಿನಯಿಸಿದ್ದಾರೆ. ಈ ಸಿನಿಮಾದಿಂದ ‘ಅಚ್ಚಚ್ಚೋ ಅಚ್ಚು ಮೆಚ್ಚಿವಳು..’ ಎಂಬ 2ನೇ ಹಾಡು ಬಿಡುಗಡೆ ಆಗಿದೆ. ಪ್ರೇಕ್ಷಕರಿಂದ ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ.

ಇದನ್ನೂ ಓದಿ: ಜಿಗರ್‌; ಸಿನಿಮಾದ ಹಾಡು ಬಿಡುಗಡೆ: ಸಂಚಿತ್ ಹೆಗ್ಡೆ ದನಿಯಲ್ಲಿ ಹೊಸ ಹಾಡು

‘ಅಚ್ಚಚ್ಚೋ ಅಚ್ಚು ಮೆಚ್ಚಿವಳು..’ ಹಾಡನ್ನು ಭರ್ಜರಿ ಚೇತನ್ ಕುಮಾರ್ ಬರೆದಿದ್ದಾರೆ. ಸಂಗೀತ ನಿರ್ದೇಶಕ ಧರ್ಮ ವಿಶ್​ ಅವರು ಈ ಗೀತೆಗೆ ಸಂಗೀತ ಸಂಯೋಜಿಸಿದ್ದಾರೆ. ಕನ್ನಡದಲ್ಲಿ ‘ಕಾಂತಾರ’ ಸಿನಿಮಾದ ‘ವರಾಹ ರೂಪಂ..’ ಹಾಡಿನ ಮೂಲಕ ಗಾಯಕ ಸಾಯಿ ವಿಘ್ನೇಶ್ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಂಡರು. ಈಗ ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಅವರು ರೊಮ್ಯಾಂಟಿಕ್ ಹಾಡಿಗೆ ಧ್ವನಿ ನೀಡಿದ್ದಾರೆ. ಈ ಹಾಡಿನಿಂದಾಗಿ ‘ಮಿಸ್ಟರ್​ ನಟ್ವರ್​ಲಾಲ್​’ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ: Mellage Song: ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಿಂದ ಬಂತು ‘ಮೆಲ್ಲಗೆ..’ ಮೆಲೋಡಿ ಸಾಂಗ್​

‘ಮಿಸ್ಟರ್​ ನಟ್ವರ್​ಲಾಲ್’ ಸಿನಿಮಾದಲ್ಲಿ ದೊಡ್ಡ ತಾರಾಬಳಗ ಇದೆ. ತನುಷ್ ಶಿವಣ್ಣ ಮತ್ತು ಸೋನಾಲ್ ಮಾಂಥೆರೋ ಜೊತೆಗೆ ನಾಗಭೂಷಣ್, ಕಾಕ್ರೋಚ್ ಸುಧಿ, ಯಶ್ ಶೆಟ್ಟಿ, ರಾಜೇಶ್ ನಟರಂಗ, ರಘು ರಾಮನಕೊಪ್ಪ, ರಾಜೇಂದ್ರ ಕಾರಂತ್ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ.

ಈ ಸಿನಿಮಾವನ್ನ ತನುಷ್ ಶಿವಣ್ಣ ಅವರೇ ನಿರ್ಮಾಣ ಮಾಡಿದ್ದಾರೆ. ಶೀಘ್ರವೇ ಸಿನಿಮಾವನ್ನು ರಿಲೀಸ್​ ಮಾಡಲು ತಯಾರಿ ನಡೆದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:26 pm, Mon, 6 November 23

ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ