AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಟ್ವರ್​ಲಾಲ್‌’ ಚಿತ್ರದಿಂದ 2ನೇ ಹಾಡು ಬಿಡುಗಡೆ; ‘ವರಾಹ ರೂಪಂ..’ ಗಾಯಕನ ರೊಮ್ಯಾಂಟಿಕ್​ ಗೀತೆ ಇದು

‘ಅಚ್ಚಚ್ಚೋ ಅಚ್ಚು ಮೆಚ್ಚಿವಳು..’ ಹಾಡನ್ನು ಭರ್ಜರಿ ಚೇತನ್ ಕುಮಾರ್ ಬರೆದಿದ್ದಾರೆ. ಧರ್ಮ ವಿಶ್​ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ‘ವರಾಹ ರೂಪಂ..’ ಹಾಡಿನ ಮೂಲಕ ಕನ್ನಡದಲ್ಲಿ ಜನಪ್ರಿಯತೆ ಪಡೆದ ಗಾಯಕ ಸಾಯಿ ವಿಘ್ನೇಶ್ ಅವರು ಇದೇ ಮೊದಲ ಬಾರಿಗೆ ಚಂದನವನದಲ್ಲಿ ರೊಮ್ಯಾಂಟಿಕ್ ಹಾಡಿಗೆ ಧ್ವನಿ ನೀಡಿದ್ದಾರೆ.

‘ನಟ್ವರ್​ಲಾಲ್‌’ ಚಿತ್ರದಿಂದ 2ನೇ ಹಾಡು ಬಿಡುಗಡೆ; ‘ವರಾಹ ರೂಪಂ..’ ಗಾಯಕನ ರೊಮ್ಯಾಂಟಿಕ್​ ಗೀತೆ ಇದು
ತನುಷ್ ಶಿವಣ್ಣ, ಸೋನಲ್ ಮಾಂಥೆರೋ
ಮದನ್​ ಕುಮಾರ್​
| Edited By: |

Updated on:Nov 07, 2023 | 6:35 AM

Share

‘ಕಾಂತಾರ’ ಸಿನಿಮಾದ ಯಶಸ್ಸಿನಲ್ಲಿ ಆ ಚಿತ್ರದ ಹಾಡುಗಳ ಕೊಡುಗೆ ಕೂಡ ಸಾಕಷ್ಟಿದೆ. ಅದರಲ್ಲೂ ‘ವರಾಹ ರೂಪಂ..’ ಹಾಡು ಸೂಪರ್​ ಹಿಟ್​ ಆಯಿತು. ಈ ಗೀತೆಗೆ ಧ್ವನಿ ನೀಡಿದ್ದು ಸಾಯಿ ವಿಘ್ನೇಶ್ (Sai Vignesh)​. ಅವರ ಕಂಠದಿಂದ ಕನ್ನಡದಲ್ಲಿ ಇನ್ನೊಂದು ಹೊಸ ಗೀತೆ ಮೂಡಿಬಂದಿದೆ. ಅದು ‘ಮಿಸ್ಟರ್​ ನಟ್ವರ್​ಲಾಲ್​’ ಸಿನಿಮಾದಿಂದ. ಈ ಮೊದಲು ‘ಮಡಮಕ್ಕಿ’, ‘ನಂಜುಂಡಿ ಕಲ್ಯಾಣ’ ಸಿನಿಮಾಗಳಲ್ಲಿ ಹೀರೋ ಆಗಿ ಮಿಂಚಿದ್ದ ನಟ ತನುಷ್ ಶಿವಣ್ಣ (Thanush Shivanna) ಅವರು ಈಗ ‘ಮಿಸ್ಟರ್​ ನಟ್ವರ್​ಲಾಲ್​’ (Mr Natwarlal) ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಲವ ಅವರು ‘ಮಿಸ್ಟರ್ ನಟ್ವರ್​ಲಾಲ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಟೀಸರ್ ಮತ್ತು ಮೊದಲ ಹಾಡಿಗೆ ಮೆಚ್ಚುಗೆ ಸಿಕ್ಕಿದೆ. ಈಗ ಎರಡನೇ ಹಾಡು ಕೂಡ ಗಮನ ಸೆಳೆಯುತ್ತಿದೆ. ಸದ್ಯಕ್ಕೆ ಪ್ರಚಾರ ಕಾರ್ಯದಲ್ಲಿ ಈ ಚಿತ್ರತಂಡ ನಿರತವಾಗಿದೆ.

ಒಂದು ಹೊಸ ಕಥೆಯೊಂದಿಗೆ ನಟ ತನುಷ್​ ಶಿವಣ್ಣ ಅವರು ‘ಮಿಸ್ಟರ್​ ನಟ್ವರ್​ಲಾಲ್’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಖ್ಯಾತ ನಟಿ ಸೋನಲ್ ಮಾಂಥೆರೋ ಅವರ ನಾಯಕಿಯಾಗಿ ಅಭಿನಯಿಸಿದ್ದಾರೆ. ಈ ಸಿನಿಮಾದಿಂದ ‘ಅಚ್ಚಚ್ಚೋ ಅಚ್ಚು ಮೆಚ್ಚಿವಳು..’ ಎಂಬ 2ನೇ ಹಾಡು ಬಿಡುಗಡೆ ಆಗಿದೆ. ಪ್ರೇಕ್ಷಕರಿಂದ ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ.

ಇದನ್ನೂ ಓದಿ: ಜಿಗರ್‌; ಸಿನಿಮಾದ ಹಾಡು ಬಿಡುಗಡೆ: ಸಂಚಿತ್ ಹೆಗ್ಡೆ ದನಿಯಲ್ಲಿ ಹೊಸ ಹಾಡು

‘ಅಚ್ಚಚ್ಚೋ ಅಚ್ಚು ಮೆಚ್ಚಿವಳು..’ ಹಾಡನ್ನು ಭರ್ಜರಿ ಚೇತನ್ ಕುಮಾರ್ ಬರೆದಿದ್ದಾರೆ. ಸಂಗೀತ ನಿರ್ದೇಶಕ ಧರ್ಮ ವಿಶ್​ ಅವರು ಈ ಗೀತೆಗೆ ಸಂಗೀತ ಸಂಯೋಜಿಸಿದ್ದಾರೆ. ಕನ್ನಡದಲ್ಲಿ ‘ಕಾಂತಾರ’ ಸಿನಿಮಾದ ‘ವರಾಹ ರೂಪಂ..’ ಹಾಡಿನ ಮೂಲಕ ಗಾಯಕ ಸಾಯಿ ವಿಘ್ನೇಶ್ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಂಡರು. ಈಗ ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಅವರು ರೊಮ್ಯಾಂಟಿಕ್ ಹಾಡಿಗೆ ಧ್ವನಿ ನೀಡಿದ್ದಾರೆ. ಈ ಹಾಡಿನಿಂದಾಗಿ ‘ಮಿಸ್ಟರ್​ ನಟ್ವರ್​ಲಾಲ್​’ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ: Mellage Song: ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಿಂದ ಬಂತು ‘ಮೆಲ್ಲಗೆ..’ ಮೆಲೋಡಿ ಸಾಂಗ್​

‘ಮಿಸ್ಟರ್​ ನಟ್ವರ್​ಲಾಲ್’ ಸಿನಿಮಾದಲ್ಲಿ ದೊಡ್ಡ ತಾರಾಬಳಗ ಇದೆ. ತನುಷ್ ಶಿವಣ್ಣ ಮತ್ತು ಸೋನಾಲ್ ಮಾಂಥೆರೋ ಜೊತೆಗೆ ನಾಗಭೂಷಣ್, ಕಾಕ್ರೋಚ್ ಸುಧಿ, ಯಶ್ ಶೆಟ್ಟಿ, ರಾಜೇಶ್ ನಟರಂಗ, ರಘು ರಾಮನಕೊಪ್ಪ, ರಾಜೇಂದ್ರ ಕಾರಂತ್ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ.

ಈ ಸಿನಿಮಾವನ್ನ ತನುಷ್ ಶಿವಣ್ಣ ಅವರೇ ನಿರ್ಮಾಣ ಮಾಡಿದ್ದಾರೆ. ಶೀಘ್ರವೇ ಸಿನಿಮಾವನ್ನು ರಿಲೀಸ್​ ಮಾಡಲು ತಯಾರಿ ನಡೆದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:26 pm, Mon, 6 November 23

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ