AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ 3 ಆರೋಪಿಗಳಿಗೆ ಜಾಮೀನು; ಯಾರಿಗೆಲ್ಲ ಸಿಕ್ತು ರಿಲೀಫ್​?

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಯ ಕೇಸ್​ನಲ್ಲಿ ಅನೇಕರನ್ನು ಅರೆಸ್ಟ್​ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈಗ ತನಿಖೆ ಅಂತ್ಯವಾಗಿದ್ದು, ಕೆಲವರಿಗೆ ಜಾಮೀನು ಸಿಕ್ಕಿದೆ. ಈ ಕೇಸ್​ನಲ್ಲಿ ಆರೋಪಿಗಳಾದ ಮೂವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಆದರೆ ಇನ್ನುಳಿದ ಆರೋಪಿಗಳು ಜಾಮೀನು ಪಡೆಯಲು ಕಾಯುತ್ತಿದ್ದಾರೆ.

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ 3 ಆರೋಪಿಗಳಿಗೆ ಜಾಮೀನು; ಯಾರಿಗೆಲ್ಲ ಸಿಕ್ತು ರಿಲೀಫ್​?
ರೇಣುಕಾಸ್ವಾಮಿ, ದರ್ಶನ್​, ಪವಿತ್ರಾ ಗೌಡ
ರಮೇಶ್​ ಎಮ್​.
| Edited By: |

Updated on: Sep 23, 2024 | 5:34 PM

Share

ರೇಣುಕಾಸ್ವಾಮಿ ಕೊಲೆ ಕೇಸ್​ನ ತನಿಖೆ ಮುಕ್ತಾಯ ಆಗಿದೆ. ದರ್ಶನ್​, ಪವಿತ್ರಾ ಗೌಡ, ಪ್ರದೋಶ್, ಪವನ್ ಸೇರಿದಂತೆ ಹಲವರ ಮೇಲೆ ಗಂಭೀರ ಆರೋಪಗಳು ಎದುರಾಗಿವೆ. ಅದಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ತೀವ್ರ ತನಿಖೆ ಮಾಡಿದ್ದಾರೆ. ತನಿಖೆ ಅಂತ್ಯವಾಗಿದ್ದು, ಇತ್ತೀಚೆಗೆ ಚಾರ್ಜ್​ಶೀಟ್​ ಸಲ್ಲಿಸಲಾಗಿದೆ. ಆ ಬಳಿಕ ಜಾಮೀನು ಪಡೆಯುಲು ಆರೋಪಿಗಳು ಅರ್ಜಿ ಸಲ್ಲಿಸಿದರು. ಇಂದು (ಸೆಪ್ಟೆಂಬರ್ 23) ಮೂವರಿಗೆ ಜಾಮೀನು ನೀಡಲಾಗಿದೆ. ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್​ ಹಾಗೂ ನಿಖಿಲ್​ಗೆ ಈ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಲಾಗಿದೆ.

ದರ್ಶನ್ ಮತ್ತು ಗ್ಯಾಂಗ್​ನಿಂದ ರೇಣುಕಾಸ್ವಾಮಿ ಹತ್ಯೆ ನಡೆಯಿತು ಎಂಬ ಆರೋಪ ಇದೆ. ಘಟನೆ ನಡೆದ ಬಳಿಕ ಕೆಲವರು ಸೆರೆಂಡರ್​ ಆಗಿದ್ದರು. ಆ ಪೈಕಿ ಕಾರ್ತಿಕ್​, ನಿಖಿಲ್​ ನಾಯಕ್ ಮತ್ತು ಕೇಶವಮೂರ್ತಿ ಪ್ರಮುಖರು. ಈ ಕೇಸ್​ನಲ್ಲಿ ಕಾರ್ತಿಕ್​ ಎ15, ಕೇಶವಮೂರ್ತಿ ಎ16 ಹಾಗೂ ನಿಖಿಲ್ ನಾಯಕ್​ ಎ17 ಆಗಿದ್ದಾರೆ. ಈ ಮೂವರಿಗೂ ಜಾಮೀನು ನೀಡಲಾಗಿದ್ದು, ಸದ್ಯಕ್ಕೆ ರಿಲೀಫ್ ಸಿಕ್ಕಂತಾಗಿದೆ.

57ನೇ ಸಿಸಿಹೆಚ್ ಕೋರ್ಟ್‌ನಿಂದ ಎ15 ಕಾರ್ತಿಕ್​ ಹಾಗೂ ಎ17 ನಿಖಿಲ್ ನಾಯಕ್​ಗೆ ಜಾಮೀನು ಮಂಜೂರಾಗಿದೆ. ಎ16 ಆಗಿರುವ ಕೇಶವಮೂರ್ತಿಗೆ ಹೈಕೋರ್ಟ್​ ಜಾಮೀನು ನೀಡಿದೆ. ಸಾಕ್ಷ್ಯ ನಾಶ ಮಾಡಿದ ಆರೋಪ ಆ ಮೂವರ ಮೇಲಿದೆ. ಪಟ್ಟಣಗೆರೆ ಶೆಡ್​ನಲ್ಲಿ ಕಾರ್ತಿಕ್​ ಕೆಲಸ ಮಾಡಿಕೊಂಡಿದ್ದ. ಶವ ಸಾಗಿಸಿದವರ ಗ್ಯಾಂಗ್​ನಲ್ಲಿ ನಿಖಿಲ್, ಕಾರ್ತಿಕ್ ಇದ್ದರು. ಬಳಿಕ ಅವರ ಜೊತೆ ಕೇಶವಮೂರ್ತಿ ಕೂಡ ಶರಣಾಗಿದ್ದ.

ಇದನ್ನೂ ಓದಿ: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆ.27ಕ್ಕೆ ಮುಂದೂಡಿಕೆ; ಪವಿತ್ರಾ ಗೌಡಗೂ ಸಿಕ್ಕಿಲ್ಲ ಬೇಲ್

ಎ1 ಆಗಿರುವ ಪವಿತ್ರಾ ಗೌಡ ಮತ್ತು ಎ2 ದರ್ಶನ್​ ಕೂಡ ಜಾಮೀನಿಗಾಗಿ ಕಾಯುತ್ತಿದ್ದಾರೆ. ಅವರು ಕೂಡ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇಂದು (ಸೆ.23) ಇಬ್ಬರ ಜಾಮೀನು ಅರ್ಜಿಯ ವಿಚಾರಣೆ ಕೂಡ ಮುಂದೂಡಿಕೆ ಆಗಿದೆ. ಸೆಪ್ಟೆಂಬರ್​ 25ರಂದು ಪವಿತ್ರಾ ಗೌಡ ಜಾಮೀನು ಅರ್ಜಿ ಹಾಗೂ ಸೆಪ್ಟೆಂಬರ್​ 27ಕ್ಕೆ ದರ್ಶನ್​ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಸದ್ಯಕ್ಕೆ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇದ್ದಾರೆ. ಜಾರ್ಜ್​ಶೀಟ್​ ಸಲ್ಲಿಕೆ ಬಳಿಕ ಅವರು ಜಾಮೀನು ಪಡೆಯುವ ಬಗ್ಗೆ ಕುಟುಂಬದವರು ಹಾಗೂ ವಕೀಲರ ಜೊತೆ ಚರ್ಚೆ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ