AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ 3 ಆರೋಪಿಗಳಿಗೆ ಜಾಮೀನು; ಯಾರಿಗೆಲ್ಲ ಸಿಕ್ತು ರಿಲೀಫ್​?

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಯ ಕೇಸ್​ನಲ್ಲಿ ಅನೇಕರನ್ನು ಅರೆಸ್ಟ್​ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈಗ ತನಿಖೆ ಅಂತ್ಯವಾಗಿದ್ದು, ಕೆಲವರಿಗೆ ಜಾಮೀನು ಸಿಕ್ಕಿದೆ. ಈ ಕೇಸ್​ನಲ್ಲಿ ಆರೋಪಿಗಳಾದ ಮೂವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಆದರೆ ಇನ್ನುಳಿದ ಆರೋಪಿಗಳು ಜಾಮೀನು ಪಡೆಯಲು ಕಾಯುತ್ತಿದ್ದಾರೆ.

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ 3 ಆರೋಪಿಗಳಿಗೆ ಜಾಮೀನು; ಯಾರಿಗೆಲ್ಲ ಸಿಕ್ತು ರಿಲೀಫ್​?
ರೇಣುಕಾಸ್ವಾಮಿ, ದರ್ಶನ್​, ಪವಿತ್ರಾ ಗೌಡ
Ramesha M
| Updated By: ಮದನ್​ ಕುಮಾರ್​|

Updated on: Sep 23, 2024 | 5:34 PM

Share

ರೇಣುಕಾಸ್ವಾಮಿ ಕೊಲೆ ಕೇಸ್​ನ ತನಿಖೆ ಮುಕ್ತಾಯ ಆಗಿದೆ. ದರ್ಶನ್​, ಪವಿತ್ರಾ ಗೌಡ, ಪ್ರದೋಶ್, ಪವನ್ ಸೇರಿದಂತೆ ಹಲವರ ಮೇಲೆ ಗಂಭೀರ ಆರೋಪಗಳು ಎದುರಾಗಿವೆ. ಅದಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ತೀವ್ರ ತನಿಖೆ ಮಾಡಿದ್ದಾರೆ. ತನಿಖೆ ಅಂತ್ಯವಾಗಿದ್ದು, ಇತ್ತೀಚೆಗೆ ಚಾರ್ಜ್​ಶೀಟ್​ ಸಲ್ಲಿಸಲಾಗಿದೆ. ಆ ಬಳಿಕ ಜಾಮೀನು ಪಡೆಯುಲು ಆರೋಪಿಗಳು ಅರ್ಜಿ ಸಲ್ಲಿಸಿದರು. ಇಂದು (ಸೆಪ್ಟೆಂಬರ್ 23) ಮೂವರಿಗೆ ಜಾಮೀನು ನೀಡಲಾಗಿದೆ. ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್​ ಹಾಗೂ ನಿಖಿಲ್​ಗೆ ಈ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಲಾಗಿದೆ.

ದರ್ಶನ್ ಮತ್ತು ಗ್ಯಾಂಗ್​ನಿಂದ ರೇಣುಕಾಸ್ವಾಮಿ ಹತ್ಯೆ ನಡೆಯಿತು ಎಂಬ ಆರೋಪ ಇದೆ. ಘಟನೆ ನಡೆದ ಬಳಿಕ ಕೆಲವರು ಸೆರೆಂಡರ್​ ಆಗಿದ್ದರು. ಆ ಪೈಕಿ ಕಾರ್ತಿಕ್​, ನಿಖಿಲ್​ ನಾಯಕ್ ಮತ್ತು ಕೇಶವಮೂರ್ತಿ ಪ್ರಮುಖರು. ಈ ಕೇಸ್​ನಲ್ಲಿ ಕಾರ್ತಿಕ್​ ಎ15, ಕೇಶವಮೂರ್ತಿ ಎ16 ಹಾಗೂ ನಿಖಿಲ್ ನಾಯಕ್​ ಎ17 ಆಗಿದ್ದಾರೆ. ಈ ಮೂವರಿಗೂ ಜಾಮೀನು ನೀಡಲಾಗಿದ್ದು, ಸದ್ಯಕ್ಕೆ ರಿಲೀಫ್ ಸಿಕ್ಕಂತಾಗಿದೆ.

57ನೇ ಸಿಸಿಹೆಚ್ ಕೋರ್ಟ್‌ನಿಂದ ಎ15 ಕಾರ್ತಿಕ್​ ಹಾಗೂ ಎ17 ನಿಖಿಲ್ ನಾಯಕ್​ಗೆ ಜಾಮೀನು ಮಂಜೂರಾಗಿದೆ. ಎ16 ಆಗಿರುವ ಕೇಶವಮೂರ್ತಿಗೆ ಹೈಕೋರ್ಟ್​ ಜಾಮೀನು ನೀಡಿದೆ. ಸಾಕ್ಷ್ಯ ನಾಶ ಮಾಡಿದ ಆರೋಪ ಆ ಮೂವರ ಮೇಲಿದೆ. ಪಟ್ಟಣಗೆರೆ ಶೆಡ್​ನಲ್ಲಿ ಕಾರ್ತಿಕ್​ ಕೆಲಸ ಮಾಡಿಕೊಂಡಿದ್ದ. ಶವ ಸಾಗಿಸಿದವರ ಗ್ಯಾಂಗ್​ನಲ್ಲಿ ನಿಖಿಲ್, ಕಾರ್ತಿಕ್ ಇದ್ದರು. ಬಳಿಕ ಅವರ ಜೊತೆ ಕೇಶವಮೂರ್ತಿ ಕೂಡ ಶರಣಾಗಿದ್ದ.

ಇದನ್ನೂ ಓದಿ: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆ.27ಕ್ಕೆ ಮುಂದೂಡಿಕೆ; ಪವಿತ್ರಾ ಗೌಡಗೂ ಸಿಕ್ಕಿಲ್ಲ ಬೇಲ್

ಎ1 ಆಗಿರುವ ಪವಿತ್ರಾ ಗೌಡ ಮತ್ತು ಎ2 ದರ್ಶನ್​ ಕೂಡ ಜಾಮೀನಿಗಾಗಿ ಕಾಯುತ್ತಿದ್ದಾರೆ. ಅವರು ಕೂಡ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇಂದು (ಸೆ.23) ಇಬ್ಬರ ಜಾಮೀನು ಅರ್ಜಿಯ ವಿಚಾರಣೆ ಕೂಡ ಮುಂದೂಡಿಕೆ ಆಗಿದೆ. ಸೆಪ್ಟೆಂಬರ್​ 25ರಂದು ಪವಿತ್ರಾ ಗೌಡ ಜಾಮೀನು ಅರ್ಜಿ ಹಾಗೂ ಸೆಪ್ಟೆಂಬರ್​ 27ಕ್ಕೆ ದರ್ಶನ್​ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಸದ್ಯಕ್ಕೆ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇದ್ದಾರೆ. ಜಾರ್ಜ್​ಶೀಟ್​ ಸಲ್ಲಿಕೆ ಬಳಿಕ ಅವರು ಜಾಮೀನು ಪಡೆಯುವ ಬಗ್ಗೆ ಕುಟುಂಬದವರು ಹಾಗೂ ವಕೀಲರ ಜೊತೆ ಚರ್ಚೆ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ