AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿ ಇರುವಾಗಲೇ ನಟ ದರ್ಶನ್​ ಮೇಲೆ ಮೂರು ಹೊಸ ಎಫ್​ಐಆರ್​ ದಾಖಲು

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ ದರ್ಶನ್​ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಗರೇಟ್​, ಮೊಬೈಲ್ ಮುಂತಾದ್ದನ್ನು ನೀಡಲಾಗಿದೆ. ಇದರಿಂದ ಜೈಲಿನ ನಿಯಮಗಳು ಉಲ್ಲಂಘನೆ ಆಗಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಎಫ್​ಐಆರ್​ ದಾಖಲಾಗಿದ್ದ, ಎಲ್ಲದರಲ್ಲಿಯೂ ದರ್ಶನ್​ ಆರೋಪಿ ಆಗಿದ್ದಾರೆ.

ಜೈಲಿನಲ್ಲಿ ಇರುವಾಗಲೇ ನಟ ದರ್ಶನ್​ ಮೇಲೆ ಮೂರು ಹೊಸ ಎಫ್​ಐಆರ್​ ದಾಖಲು
ಜೈಲಿನಲ್ಲಿ ಸಹಚರರ ಜೊತೆ ದರ್ಶನ್​
Jagadisha B
| Edited By: |

Updated on: Aug 26, 2024 | 2:54 PM

Share

ಸ್ಯಾಂಡಲ್​ವುಡ್​ ನಟ ದರ್ಶನ್​ ವಿಚಾರದಲ್ಲಿ ಪರಪ್ಪನ ಅಗ್ರಹಾರ ಜೈಲಿನ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಕೊಲೆ ಪ್ರಕರಣದಂತಹ ಗಂಭೀರ ಆರೋಪ ಹೊತ್ತು ಜೈಲು ಸೇರಿರುವ ನಟನಿಗೆ ಬಗೆಬಗೆಯ ಸೌಲಭ್ಯಗಳನ್ನು ನೀಡಲಾಗಿದೆ. ಆ ಮೂಲಕ ಕಾನೂನಿನ ಉಲ್ಲಂಘನೆ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ 3 ಪ್ರತ್ಯೇಕ ಎಫ್​​ಐಆರ್ ದಾಖಲಾಗಿದೆ. ಈ ಮೂರೂ ಎಫ್​ಐಆರ್​ಗಳಲ್ಲಿ ದರ್ಶನ್​ ಹೆಸರು ಪ್ರಸ್ತಾಪ ಆಗಿದೆ. ಇದರಿಂದ ನಟನಿಗೆ ಸಂಕಷ್ಟ ಹೆಚ್ಚಾಗಿದೆ.

ಜೈಲಿನಲ್ಲಿ ದುಡ್ಡು ಇರುವ ವ್ಯಕ್ತಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬುದನ್ನು ಸಾಕ್ಷಿ ಎಂಬಂತೆ ದರ್ಶನ್​ ಅವರ ಫೋಟೋ ಮತ್ತು ವಿಡಿಯೋಗಳು ವೈರಲ್​ ಆಗಿವೆ. ಇದಕ್ಕೆ ಸಂಬಂಧಿಸಿದಂತೆ ಜೈಲು ಅಧೀಕ್ಷಕರ ದೂರು ಆಧರಿಸಿ ಮೂರು ಎಫ್​ಐಆರ್ ದಾಖಲು ಮಾಡಲಾಗಿದೆ. ಕೊಲೆ ಆರೋಪಿಗಳಾದ ದರ್ಶನ್, ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ದರ್ಶನ್ ಆಪ್ತ ನಾಗರಾಜ್ ವಿರುದ್ಧ ಒಂದು ಎಫ್​​ಐಆರ್​ ಆಗಿದೆ.

ಇದನ್ನೂ ಓದಿ: ಜೈಲಿಂದ ದರ್ಶನ್ ವಿಡಿಯೋ ಕಾಲ್ ಮಾಡಿದ್ದು ಕೂಡ ರೌಡಿಗಳಿಗೆ; ಸ್ವಲ್ಪವೂ ಬದಲಾಗಿಲ್ಲ ದಾಸ

ಆರೋಪಿ ದರ್ಶನ್​ಗೆ ಸಿಗರೇಟ್ ಕೊಟ್ಟಿದ್ದಕ್ಕೆ ಮತ್ತೊಂದು ಎಫ್​​ಐಆರ್ ದಾಖಲಾಗಿದೆ. ವಿಡಿಯೋ ಮಾಡಿ ವೈರಲ್ ಮಾಡಿದ್ದಕ್ಕೆ 3ನೇ ಎಫ್​​ಐಆರ್ ದಾಖಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಟ್ಟು 3 ಪ್ರತ್ಯೇಕ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೂರು ಎಫ್​​ಐಆರ್​ಗಳಲ್ಲೂ ಕೂಡ ದರ್ಶನ್ ಆರೋಪಿ ಆಗಿದ್ದಾರೆ. ಇದರಿಂದ ಅವರಿಗೆ ಜಾಮೀನು ಪಡೆಯುವಲ್ಲಿ ಸಂಕಷ್ಟ ಎದುರಾಗಲಿದೆ.

ಇದನ್ನೂ ಓದಿ: ದರ್ಶನ್​ ಫೋಟೋ ವೈರಲ್ ಬೆನ್ನಲ್ಲೇ ಪರಪ್ಪನ ಅಗ್ರಹಾರದ ಏಳು ಅಧಿಕಾರಿಗಳು ಸಸ್ಪೆಂಡ್

ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಎಂಬಾತನಿಂದ ಅಶ್ಲೀಲ ಸಂದೇಶ ಬಂದಿತ್ತು. ಆ ಕಾರಣಕ್ಕಾಗಿ ಆತನಿಗೆ ಬೆಂಗಳೂರಿನಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿಸಿದ ಆರೋಪ ದರ್ಶನ್​ ಹಾಗೂ ಸಹಚರರ ಮೇಲಿದೆ. ಇದೇ ಕೇಸ್​ನಲ್ಲಿ ದರ್ಶನ್​ ಜೈಲು ಸೇರಿದ್ದಾರೆ. ಈಗ ಜೈಲಿನಲ್ಲಿ ಅವರು ಪ್ರಭಾವ ಬಳಸಿ ನಿಯಮಗಳನ್ನು ಮುರಿದಿದ್ದಾರೆ. ಇದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿದೆ. ಜೈಲಿನ ವ್ಯವಸ್ಥೆ ಬಗ್ಗೆ ಎಲ್ಲರಿಗೂ ಅನುಮಾನ ಮೂಡುವ ರೀತಿಯಲ್ಲಿ ನಟನ ಫೋಟೋ ಮತ್ತು ವಿಡಿಯೋ ವೈರಲ್​ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ