AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿ ಇರುವಾಗಲೇ ನಟ ದರ್ಶನ್​ ಮೇಲೆ ಮೂರು ಹೊಸ ಎಫ್​ಐಆರ್​ ದಾಖಲು

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ ದರ್ಶನ್​ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಗರೇಟ್​, ಮೊಬೈಲ್ ಮುಂತಾದ್ದನ್ನು ನೀಡಲಾಗಿದೆ. ಇದರಿಂದ ಜೈಲಿನ ನಿಯಮಗಳು ಉಲ್ಲಂಘನೆ ಆಗಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಎಫ್​ಐಆರ್​ ದಾಖಲಾಗಿದ್ದ, ಎಲ್ಲದರಲ್ಲಿಯೂ ದರ್ಶನ್​ ಆರೋಪಿ ಆಗಿದ್ದಾರೆ.

ಜೈಲಿನಲ್ಲಿ ಇರುವಾಗಲೇ ನಟ ದರ್ಶನ್​ ಮೇಲೆ ಮೂರು ಹೊಸ ಎಫ್​ಐಆರ್​ ದಾಖಲು
ಜೈಲಿನಲ್ಲಿ ಸಹಚರರ ಜೊತೆ ದರ್ಶನ್​
Follow us
Jagadisha B
| Updated By: ಮದನ್​ ಕುಮಾರ್​

Updated on: Aug 26, 2024 | 2:54 PM

ಸ್ಯಾಂಡಲ್​ವುಡ್​ ನಟ ದರ್ಶನ್​ ವಿಚಾರದಲ್ಲಿ ಪರಪ್ಪನ ಅಗ್ರಹಾರ ಜೈಲಿನ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಕೊಲೆ ಪ್ರಕರಣದಂತಹ ಗಂಭೀರ ಆರೋಪ ಹೊತ್ತು ಜೈಲು ಸೇರಿರುವ ನಟನಿಗೆ ಬಗೆಬಗೆಯ ಸೌಲಭ್ಯಗಳನ್ನು ನೀಡಲಾಗಿದೆ. ಆ ಮೂಲಕ ಕಾನೂನಿನ ಉಲ್ಲಂಘನೆ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ 3 ಪ್ರತ್ಯೇಕ ಎಫ್​​ಐಆರ್ ದಾಖಲಾಗಿದೆ. ಈ ಮೂರೂ ಎಫ್​ಐಆರ್​ಗಳಲ್ಲಿ ದರ್ಶನ್​ ಹೆಸರು ಪ್ರಸ್ತಾಪ ಆಗಿದೆ. ಇದರಿಂದ ನಟನಿಗೆ ಸಂಕಷ್ಟ ಹೆಚ್ಚಾಗಿದೆ.

ಜೈಲಿನಲ್ಲಿ ದುಡ್ಡು ಇರುವ ವ್ಯಕ್ತಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬುದನ್ನು ಸಾಕ್ಷಿ ಎಂಬಂತೆ ದರ್ಶನ್​ ಅವರ ಫೋಟೋ ಮತ್ತು ವಿಡಿಯೋಗಳು ವೈರಲ್​ ಆಗಿವೆ. ಇದಕ್ಕೆ ಸಂಬಂಧಿಸಿದಂತೆ ಜೈಲು ಅಧೀಕ್ಷಕರ ದೂರು ಆಧರಿಸಿ ಮೂರು ಎಫ್​ಐಆರ್ ದಾಖಲು ಮಾಡಲಾಗಿದೆ. ಕೊಲೆ ಆರೋಪಿಗಳಾದ ದರ್ಶನ್, ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ದರ್ಶನ್ ಆಪ್ತ ನಾಗರಾಜ್ ವಿರುದ್ಧ ಒಂದು ಎಫ್​​ಐಆರ್​ ಆಗಿದೆ.

ಇದನ್ನೂ ಓದಿ: ಜೈಲಿಂದ ದರ್ಶನ್ ವಿಡಿಯೋ ಕಾಲ್ ಮಾಡಿದ್ದು ಕೂಡ ರೌಡಿಗಳಿಗೆ; ಸ್ವಲ್ಪವೂ ಬದಲಾಗಿಲ್ಲ ದಾಸ

ಆರೋಪಿ ದರ್ಶನ್​ಗೆ ಸಿಗರೇಟ್ ಕೊಟ್ಟಿದ್ದಕ್ಕೆ ಮತ್ತೊಂದು ಎಫ್​​ಐಆರ್ ದಾಖಲಾಗಿದೆ. ವಿಡಿಯೋ ಮಾಡಿ ವೈರಲ್ ಮಾಡಿದ್ದಕ್ಕೆ 3ನೇ ಎಫ್​​ಐಆರ್ ದಾಖಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಟ್ಟು 3 ಪ್ರತ್ಯೇಕ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೂರು ಎಫ್​​ಐಆರ್​ಗಳಲ್ಲೂ ಕೂಡ ದರ್ಶನ್ ಆರೋಪಿ ಆಗಿದ್ದಾರೆ. ಇದರಿಂದ ಅವರಿಗೆ ಜಾಮೀನು ಪಡೆಯುವಲ್ಲಿ ಸಂಕಷ್ಟ ಎದುರಾಗಲಿದೆ.

ಇದನ್ನೂ ಓದಿ: ದರ್ಶನ್​ ಫೋಟೋ ವೈರಲ್ ಬೆನ್ನಲ್ಲೇ ಪರಪ್ಪನ ಅಗ್ರಹಾರದ ಏಳು ಅಧಿಕಾರಿಗಳು ಸಸ್ಪೆಂಡ್

ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಎಂಬಾತನಿಂದ ಅಶ್ಲೀಲ ಸಂದೇಶ ಬಂದಿತ್ತು. ಆ ಕಾರಣಕ್ಕಾಗಿ ಆತನಿಗೆ ಬೆಂಗಳೂರಿನಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿಸಿದ ಆರೋಪ ದರ್ಶನ್​ ಹಾಗೂ ಸಹಚರರ ಮೇಲಿದೆ. ಇದೇ ಕೇಸ್​ನಲ್ಲಿ ದರ್ಶನ್​ ಜೈಲು ಸೇರಿದ್ದಾರೆ. ಈಗ ಜೈಲಿನಲ್ಲಿ ಅವರು ಪ್ರಭಾವ ಬಳಸಿ ನಿಯಮಗಳನ್ನು ಮುರಿದಿದ್ದಾರೆ. ಇದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿದೆ. ಜೈಲಿನ ವ್ಯವಸ್ಥೆ ಬಗ್ಗೆ ಎಲ್ಲರಿಗೂ ಅನುಮಾನ ಮೂಡುವ ರೀತಿಯಲ್ಲಿ ನಟನ ಫೋಟೋ ಮತ್ತು ವಿಡಿಯೋ ವೈರಲ್​ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!