AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿ ಇರುವಾಗಲೇ ನಟ ದರ್ಶನ್​ ಮೇಲೆ ಮೂರು ಹೊಸ ಎಫ್​ಐಆರ್​ ದಾಖಲು

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ ದರ್ಶನ್​ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಗರೇಟ್​, ಮೊಬೈಲ್ ಮುಂತಾದ್ದನ್ನು ನೀಡಲಾಗಿದೆ. ಇದರಿಂದ ಜೈಲಿನ ನಿಯಮಗಳು ಉಲ್ಲಂಘನೆ ಆಗಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಎಫ್​ಐಆರ್​ ದಾಖಲಾಗಿದ್ದ, ಎಲ್ಲದರಲ್ಲಿಯೂ ದರ್ಶನ್​ ಆರೋಪಿ ಆಗಿದ್ದಾರೆ.

ಜೈಲಿನಲ್ಲಿ ಇರುವಾಗಲೇ ನಟ ದರ್ಶನ್​ ಮೇಲೆ ಮೂರು ಹೊಸ ಎಫ್​ಐಆರ್​ ದಾಖಲು
ಜೈಲಿನಲ್ಲಿ ಸಹಚರರ ಜೊತೆ ದರ್ಶನ್​
Jagadisha B
| Edited By: |

Updated on: Aug 26, 2024 | 2:54 PM

Share

ಸ್ಯಾಂಡಲ್​ವುಡ್​ ನಟ ದರ್ಶನ್​ ವಿಚಾರದಲ್ಲಿ ಪರಪ್ಪನ ಅಗ್ರಹಾರ ಜೈಲಿನ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಕೊಲೆ ಪ್ರಕರಣದಂತಹ ಗಂಭೀರ ಆರೋಪ ಹೊತ್ತು ಜೈಲು ಸೇರಿರುವ ನಟನಿಗೆ ಬಗೆಬಗೆಯ ಸೌಲಭ್ಯಗಳನ್ನು ನೀಡಲಾಗಿದೆ. ಆ ಮೂಲಕ ಕಾನೂನಿನ ಉಲ್ಲಂಘನೆ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ 3 ಪ್ರತ್ಯೇಕ ಎಫ್​​ಐಆರ್ ದಾಖಲಾಗಿದೆ. ಈ ಮೂರೂ ಎಫ್​ಐಆರ್​ಗಳಲ್ಲಿ ದರ್ಶನ್​ ಹೆಸರು ಪ್ರಸ್ತಾಪ ಆಗಿದೆ. ಇದರಿಂದ ನಟನಿಗೆ ಸಂಕಷ್ಟ ಹೆಚ್ಚಾಗಿದೆ.

ಜೈಲಿನಲ್ಲಿ ದುಡ್ಡು ಇರುವ ವ್ಯಕ್ತಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬುದನ್ನು ಸಾಕ್ಷಿ ಎಂಬಂತೆ ದರ್ಶನ್​ ಅವರ ಫೋಟೋ ಮತ್ತು ವಿಡಿಯೋಗಳು ವೈರಲ್​ ಆಗಿವೆ. ಇದಕ್ಕೆ ಸಂಬಂಧಿಸಿದಂತೆ ಜೈಲು ಅಧೀಕ್ಷಕರ ದೂರು ಆಧರಿಸಿ ಮೂರು ಎಫ್​ಐಆರ್ ದಾಖಲು ಮಾಡಲಾಗಿದೆ. ಕೊಲೆ ಆರೋಪಿಗಳಾದ ದರ್ಶನ್, ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ದರ್ಶನ್ ಆಪ್ತ ನಾಗರಾಜ್ ವಿರುದ್ಧ ಒಂದು ಎಫ್​​ಐಆರ್​ ಆಗಿದೆ.

ಇದನ್ನೂ ಓದಿ: ಜೈಲಿಂದ ದರ್ಶನ್ ವಿಡಿಯೋ ಕಾಲ್ ಮಾಡಿದ್ದು ಕೂಡ ರೌಡಿಗಳಿಗೆ; ಸ್ವಲ್ಪವೂ ಬದಲಾಗಿಲ್ಲ ದಾಸ

ಆರೋಪಿ ದರ್ಶನ್​ಗೆ ಸಿಗರೇಟ್ ಕೊಟ್ಟಿದ್ದಕ್ಕೆ ಮತ್ತೊಂದು ಎಫ್​​ಐಆರ್ ದಾಖಲಾಗಿದೆ. ವಿಡಿಯೋ ಮಾಡಿ ವೈರಲ್ ಮಾಡಿದ್ದಕ್ಕೆ 3ನೇ ಎಫ್​​ಐಆರ್ ದಾಖಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಟ್ಟು 3 ಪ್ರತ್ಯೇಕ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೂರು ಎಫ್​​ಐಆರ್​ಗಳಲ್ಲೂ ಕೂಡ ದರ್ಶನ್ ಆರೋಪಿ ಆಗಿದ್ದಾರೆ. ಇದರಿಂದ ಅವರಿಗೆ ಜಾಮೀನು ಪಡೆಯುವಲ್ಲಿ ಸಂಕಷ್ಟ ಎದುರಾಗಲಿದೆ.

ಇದನ್ನೂ ಓದಿ: ದರ್ಶನ್​ ಫೋಟೋ ವೈರಲ್ ಬೆನ್ನಲ್ಲೇ ಪರಪ್ಪನ ಅಗ್ರಹಾರದ ಏಳು ಅಧಿಕಾರಿಗಳು ಸಸ್ಪೆಂಡ್

ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಎಂಬಾತನಿಂದ ಅಶ್ಲೀಲ ಸಂದೇಶ ಬಂದಿತ್ತು. ಆ ಕಾರಣಕ್ಕಾಗಿ ಆತನಿಗೆ ಬೆಂಗಳೂರಿನಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿಸಿದ ಆರೋಪ ದರ್ಶನ್​ ಹಾಗೂ ಸಹಚರರ ಮೇಲಿದೆ. ಇದೇ ಕೇಸ್​ನಲ್ಲಿ ದರ್ಶನ್​ ಜೈಲು ಸೇರಿದ್ದಾರೆ. ಈಗ ಜೈಲಿನಲ್ಲಿ ಅವರು ಪ್ರಭಾವ ಬಳಸಿ ನಿಯಮಗಳನ್ನು ಮುರಿದಿದ್ದಾರೆ. ಇದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿದೆ. ಜೈಲಿನ ವ್ಯವಸ್ಥೆ ಬಗ್ಗೆ ಎಲ್ಲರಿಗೂ ಅನುಮಾನ ಮೂಡುವ ರೀತಿಯಲ್ಲಿ ನಟನ ಫೋಟೋ ಮತ್ತು ವಿಡಿಯೋ ವೈರಲ್​ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್