AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘45’ ಚಿತ್ರದ ಬಗ್ಗೆ ಅಪಪ್ರಚಾರ ಮಾಡುವವರಿಗೆ ಕಾನೂನು ಕ್ರಮದ ಎಚ್ಚರಿಕೆ

ಶಿವರಾಜ್​​ಕುಮಾರ್, ರಾಜ್​ ಬಿ. ಶೆಟ್ಟಿ ಅಭಿನಯದ '45' ಸಿನಿಮಾ ವಿರುದ್ಧದ ನೆಗೆಟಿವ್ ಪ್ರಚಾರಕ್ಕೆ ಚಿತ್ರತಂಡ ಗಂಭೀರ ಎಚ್ಚರಿಕೆ ನೀಡಿದೆ. ಬೆಂಗಳೂರಿನ ನ್ಯಾಯಾಲಯವು ಮಧ್ಯಂತರ ಆದೇಶ ಹೊರಡಿಸಿದ್ದು, ಚಿತ್ರಕ್ಕೆ ಹಾನಿಯುಂಟು ಮಾಡುವ ಅವಹೇಳನಕಾರಿ ವಿಷಯಗಳನ್ನು ಹರಡುವುದನ್ನು ನಿರ್ಬಂಧಿಸಿದೆ. ನ್ಯಾಯಾಲಯದ ಆದೇಶ ಉಲ್ಲಂಘಿಸುವವರ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧನ ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು '45' ತಂಡ ಸ್ಪಷ್ಟಪಡಿಸಿದೆ.

‘45’ ಚಿತ್ರದ ಬಗ್ಗೆ ಅಪಪ್ರಚಾರ ಮಾಡುವವರಿಗೆ ಕಾನೂನು ಕ್ರಮದ ಎಚ್ಚರಿಕೆ
45 ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Dec 27, 2025 | 3:48 PM

Share

ಶಿವರಾಜ್​​ಕುಮಾರ್, ರಾಜ್​ ಬಿ. ಶೆಟ್ಟಿ ಹಾಗೂ ಉಪೇಂದ್ರ ನಟನೆಯ ‘45’ ಸಿನಿಮಾಗೆ (45 Movie) ಅರ್ಜುನ್ ಜನ್ಯ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಒಳ್ಳೆಯ ವಿಮರ್ಶೆ ಸಿಕ್ಕಿದ್ದು, ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಕಲೆಕ್ಷನ್ ಕೂಡ ಮಾಡುತ್ತಿದೆ. ಉದ್ದೇಶಪೂರ್ವಕವಾಗಿ ಸಿನಿಮಾ ಬಗ್ಗೆ ನೆಗೆಟಿವ್ ಹಬ್ಬಿಸೋವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ‘45’ ತಂಡ ನೀಡಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಲಾಗಿದೆ.

‘45 ಚಿತ್ರತಂಡ ಬೆಂಗಳೂರು 9ನೇ ಅಪರ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಮಧ್ಯಂತರ ಆದೇಶವನ್ನು ಪಡೆದಿದೆ. ನ್ಯಾಯಾಲಯದ ಮಧ್ಯಂತರ ಆದೇಶದಂತೆ, 45 ಚಿತ್ರದ ಕುರಿತು ಯಾವುದೇ ವ್ಯಕ್ತಿ, ಸಂಸ್ಥೆ, ಚಾನೆಲ್, ಸಾಮಾಜಿಕ ಜಾಲತಾಣದ ಖಾತೆದಾರರು ಅಥವಾ ಸಂಬಂಧಿತ ಪ್ಲಾಟ್‌ಫಾರ್ಮ್‌ಗಳು, ಅವಹೇಳನಕಾರಿ, ಮಾನಹಾನಿಕರ, ಅಪಪ್ರಚಾರಾತ್ಮಕ ವಿಮರ್ಶೆಗಳು ಅಥವಾ ನೆಗೆಟಿವ್ ರೇಟಿಂಗ್‌ಗಳು ಸೇರಿದಂತೆ ಚಿತ್ರಕ್ಕೆ ಹಾನಿಯುಂಟು ಮಾಡುವ ವಿಷಯಗಳನ್ನು ಪ್ರಕಟಿಸುವುದು, ಪ್ರಸಾರ ಮಾಡುವುದು ಅಥವಾ ಹರಡುವುದು ನಿರ್ಬಂಧಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ಬರೆಯಲಾಗಿದೆ.

‘ಈಗಾಗಲೇ ಪ್ರಕಟಗೊಂಡಿರುವ ಇಂತಹ ಎಲ್ಲಾ ವಿಷಯಗಳನ್ನು ತೆಗೆದುಹಾಕಿ ನಿಷ್ಕ್ರಿಯಗೊಳಿಸುವಂತೆ ನ್ಯಾಯಾಲಯ ನಿರ್ದೇಶಿಸಿದೆ. ನ್ಯಾಯಾಲಯದ ಆದೇಶವಿದ್ದರೂ ಸಹ, ಕೆಲವೊಂದು ದುರುದ್ದೇಶಪೂರಿತ ವ್ಯಕ್ತಿಗಳಿಂದ ಚಿತ್ರದ ವಿರುದ್ಧ ಅಪಪ್ರಚಾರದ ಪೋಸ್ಟ್‌ಗಳು ಪ್ರಕಟವಾಗುತ್ತಿರುವುದು ಚಿತ್ರತಂಡದ ಗಮನಕ್ಕೆ ಬಂದಿದೆ. ಇಂತಹ ಕೃತ್ಯಗಳು ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗಿದ್ದು, ನ್ಯಾಯಾಂಗ ನಿಂದನೆಗೆ ಒಳಪಡುವ ಅಪರಾಧವಾಗಿರುತ್ತದೆ’ ಎಂದು ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ‘45’ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ..

‘ಈ ರೀತಿಯ ಅಪಪ್ರಚಾರದಿಂದ ಚಿತ್ರಕ್ಕೆ ಅಥವಾ ನಿರ್ಮಾಪಕರಿಗೆ ಉಂಟಾಗುವ ಯಾವುದೇ ರೀತಿಯ ಆರ್ಥಿಕ, ವಾಣಿಜ್ಯ ಹಾಗೂ ಗೌರವ ಹಾನಿಗೆ ಸಂಬಂಧಪಟ್ಟ ವ್ಯಕ್ತಿಗಳು ವೈಯಕ್ತಿಕವಾಗಿ ಸಂಪೂರ್ಣ ಹೊಣೆಗಾರರಾಗಿದ್ದು, ಅವರ ವಿರುದ್ಧ ಸಿವಿಲ್ ಹಾಗೂ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಕಠಿಣ ಕ್ರಮ ಜರುಗಿಸಲು ಅವಕಾಶವಿದೆ. ಅಗತ್ಯವಿದ್ದಲ್ಲಿ ಸಂಬಂಧಪಟ್ಟವರ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧನ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲು ತಜ್ಞರ ಅಭಿಪ್ರಾಯ ಪಡೆಯಲಾಗಿದೆ’ ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ. ಪೈರಸಿ ಮಾಡದಂತೆಯೂ ಎಚ್ಚರಿಕೆ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ