AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘45’ ಸಿನಿಮಾ ಹೇಗಿದೆ? ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್

45 Movie Twitter Review: ‘ಶಿವಣ್ಣನ ಶಿವತಾಂಡವ’ ಎಂದು ಕೆಲವರು ಹೇಳಿದ್ದಾರೆ. ‘45’ ಚಿತ್ರದ ಕ್ಲೈಮ್ಯಾಕ್ಸ್ ಇಷ್ಟ ಆಯಿತು ಎಂದು ಅನೇಕರು ಕಮೆಂಟ್ ಮಾಡುತ್ತಿದ್ದಾರೆ. ಶಿವರಾಜ್​​ಕುಮಾರ್, ಉಪೇಂದ್ರ ಹಾಗೂ ರಾಜ್ ಅವರಿಗೆ ಸರಿಯಾದ ರೀತಿಯಲ್ಲಿ ಸ್ಕ್ರೀನ್​ಸ್ಪೇಸ್​ ಸಿಕ್ಕಿದೆ ಎಂದು ಅನೇಕರು ಹೇಳಿದ್ದಾರೆ.

‘45’ ಸಿನಿಮಾ ಹೇಗಿದೆ? ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್
45 ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Dec 25, 2025 | 12:50 PM

Share

‘45’ ಸಿನಿಮಾ (45 Movie) ಇಂದು (ಡಿಸೆಂಬರ್ 25) ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಉಪೇಂದ್ರ, ರಾಜ್ ಬಿ ಶೆಟ್ಟಿ, ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಸಿನಿಮಾ ನೋಡಿದ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಅನೇಕರು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಟ್ವಿಟರ್​​ನಲ್ಲಿ ಈ ವಿಷಯವನ್ನು ಹಂಚಿಕೊಳ್ಳುತ್ತಿದ್ದಾರೆ. ಸಿನಿಮಾದಲ್ಲಿ ಯಾವ ವಿಷಯ ಹೆಚ್ಚು ಇಷ್ಟ ಆಗುತ್ತಿದೆ ಎಂಬುದನ್ನು ಹೇಳಿದ್ದಾರೆ.

ಅರ್ಜುನ್ ಜನ್ಯ ಅವರು ಮ್ಯೂಸಿಕ್ ಡೈರೆಕ್ಟರ್ ಆಗಿ ಫೇಮಸ್ ಆದವರು. ಇದೇ ಮೊದಲ ಬಾರಿಗೆ ಅವರು ‘45’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಸಾವು ಹಾಗೂ ಬದುಕಿನ ನಡುವಿನ ಕಥೆಯನ್ನು ಹೇಳಲಾಗಿದೆ. ಈ ಚಿತ್ರ ನೋಡಿದ ಅನೇಕರು ಮೆಚ್ಚಿಗೆ ಸೂಚಿಸುತ್ತಿದ್ದಾರೆ. ಸಿನಿಮಾದ ಗ್ರಾಫಿಕ್ಸ್ ತುಂಬಾನೇ ಇಷ್ಟ ಆಯಿತು ಎಂದು ಕೆಲವರು ಹೇಳಿದರೆ ಇನ್ನೂ ಕೆಲವರು ಚಿತ್ರದ ಥೀಮ್​​ನ ಇಷ್ಟಪಟ್ಟಿದ್ದಾರೆ.

‘ಶಿವಣ್ಣನ ಶಿವತಾಂಡವ’ ಎಂದು ಕೆಲವರು ಹೇಳಿದ್ದಾರೆ. ‘45’ ಚಿತ್ರದ ಕ್ಲೈಮ್ಯಾಕ್ಸ್ ಇಷ್ಟ ಆಯಿತು ಎಂದು ಅನೇಕರು ಕಮೆಂಟ್ ಮಾಡುತ್ತಿದ್ದಾರೆ. ಶಿವರಾಜ್​​ಕುಮಾರ್, ಉಪೇಂದ್ರ ಹಾಗೂ ರಾಜ್ ಅವರಿಗೆ ಸರಿಯಾದ ರೀತಿಯಲ್ಲಿ ಸ್ಕ್ರೀನ್​ಸ್ಪೇಸ್​ ಸಿಕ್ಕಿದೆ ಎಂದು ಅನೇಕರು ಹೇಳಿದ್ದಾರೆ.

ಇದನ್ನೂ ಓದಿ: ಎಲ್ಲೆಲ್ಲೂ ‘45’, ‘ಮಾರ್ಕ್’ ಸಿನಿಮಾ ಸಂಭ್ರಮ; ಎರಡು ದೊಡ್ಡ ಚಿತ್ರಕ್ಕೆ ಅದ್ದೂರಿ ಸ್ವಾಗತ

‘45’ ಸಿನಿಮಾದಲ್ಲಿ ಶಿವರಾಜ್​​ಕುಮಾರ್, ರಾಜ್ ಹಾಗೂ ಉಪ್ಪಿ ಜೊತೆ ಪ್ರಮೋದ್ ಶೆಟ್ಟಿ, ಕೌಸ್ತುಭಾ ಮಣಿ ಮೊದಲಾದವರು ನಟಿಸಿದ್ದಾರೆ. ಗರುಡ ಪುರಾಣದ ಕಥೆಯ ಉಲ್ಲೇಖವನ್ನು ಚಿತ್ರದಲ್ಲಿ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ
4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್
4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್
ಗರ್ಭಿಣಿ ಮಹಿಳಾ ಕಾನ್ಸ್ಟೇಬಲ್ ಮೇಲೆ ರಾಡ್ ನಿಂದ ಹಲ್ಲೆ: ಆರೋಪಿ ಬಂಧನ
ಗರ್ಭಿಣಿ ಮಹಿಳಾ ಕಾನ್ಸ್ಟೇಬಲ್ ಮೇಲೆ ರಾಡ್ ನಿಂದ ಹಲ್ಲೆ: ಆರೋಪಿ ಬಂಧನ
ನೋಂದಣಿ ಶುಲ್ಕ ಕಟ್ಟಲು ಸಿದ್ಧ ಎಂದ ಸಚಿವ ಖರ್ಗೆ
ನೋಂದಣಿ ಶುಲ್ಕ ಕಟ್ಟಲು ಸಿದ್ಧ ಎಂದ ಸಚಿವ ಖರ್ಗೆ