AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘45’ ಸಿನಿಮಾ ಹೇಗಿದೆ? ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್

45 Movie Twitter Review: ‘ಶಿವಣ್ಣನ ಶಿವತಾಂಡವ’ ಎಂದು ಕೆಲವರು ಹೇಳಿದ್ದಾರೆ. ‘45’ ಚಿತ್ರದ ಕ್ಲೈಮ್ಯಾಕ್ಸ್ ಇಷ್ಟ ಆಯಿತು ಎಂದು ಅನೇಕರು ಕಮೆಂಟ್ ಮಾಡುತ್ತಿದ್ದಾರೆ. ಶಿವರಾಜ್​​ಕುಮಾರ್, ಉಪೇಂದ್ರ ಹಾಗೂ ರಾಜ್ ಅವರಿಗೆ ಸರಿಯಾದ ರೀತಿಯಲ್ಲಿ ಸ್ಕ್ರೀನ್​ಸ್ಪೇಸ್​ ಸಿಕ್ಕಿದೆ ಎಂದು ಅನೇಕರು ಹೇಳಿದ್ದಾರೆ.

‘45’ ಸಿನಿಮಾ ಹೇಗಿದೆ? ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್
45 ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Dec 25, 2025 | 12:50 PM

Share

‘45’ ಸಿನಿಮಾ (45 Movie) ಇಂದು (ಡಿಸೆಂಬರ್ 25) ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಉಪೇಂದ್ರ, ರಾಜ್ ಬಿ ಶೆಟ್ಟಿ, ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಸಿನಿಮಾ ನೋಡಿದ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಅನೇಕರು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಟ್ವಿಟರ್​​ನಲ್ಲಿ ಈ ವಿಷಯವನ್ನು ಹಂಚಿಕೊಳ್ಳುತ್ತಿದ್ದಾರೆ. ಸಿನಿಮಾದಲ್ಲಿ ಯಾವ ವಿಷಯ ಹೆಚ್ಚು ಇಷ್ಟ ಆಗುತ್ತಿದೆ ಎಂಬುದನ್ನು ಹೇಳಿದ್ದಾರೆ.

ಅರ್ಜುನ್ ಜನ್ಯ ಅವರು ಮ್ಯೂಸಿಕ್ ಡೈರೆಕ್ಟರ್ ಆಗಿ ಫೇಮಸ್ ಆದವರು. ಇದೇ ಮೊದಲ ಬಾರಿಗೆ ಅವರು ‘45’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಸಾವು ಹಾಗೂ ಬದುಕಿನ ನಡುವಿನ ಕಥೆಯನ್ನು ಹೇಳಲಾಗಿದೆ. ಈ ಚಿತ್ರ ನೋಡಿದ ಅನೇಕರು ಮೆಚ್ಚಿಗೆ ಸೂಚಿಸುತ್ತಿದ್ದಾರೆ. ಸಿನಿಮಾದ ಗ್ರಾಫಿಕ್ಸ್ ತುಂಬಾನೇ ಇಷ್ಟ ಆಯಿತು ಎಂದು ಕೆಲವರು ಹೇಳಿದರೆ ಇನ್ನೂ ಕೆಲವರು ಚಿತ್ರದ ಥೀಮ್​​ನ ಇಷ್ಟಪಟ್ಟಿದ್ದಾರೆ.

‘ಶಿವಣ್ಣನ ಶಿವತಾಂಡವ’ ಎಂದು ಕೆಲವರು ಹೇಳಿದ್ದಾರೆ. ‘45’ ಚಿತ್ರದ ಕ್ಲೈಮ್ಯಾಕ್ಸ್ ಇಷ್ಟ ಆಯಿತು ಎಂದು ಅನೇಕರು ಕಮೆಂಟ್ ಮಾಡುತ್ತಿದ್ದಾರೆ. ಶಿವರಾಜ್​​ಕುಮಾರ್, ಉಪೇಂದ್ರ ಹಾಗೂ ರಾಜ್ ಅವರಿಗೆ ಸರಿಯಾದ ರೀತಿಯಲ್ಲಿ ಸ್ಕ್ರೀನ್​ಸ್ಪೇಸ್​ ಸಿಕ್ಕಿದೆ ಎಂದು ಅನೇಕರು ಹೇಳಿದ್ದಾರೆ.

ಇದನ್ನೂ ಓದಿ: ಎಲ್ಲೆಲ್ಲೂ ‘45’, ‘ಮಾರ್ಕ್’ ಸಿನಿಮಾ ಸಂಭ್ರಮ; ಎರಡು ದೊಡ್ಡ ಚಿತ್ರಕ್ಕೆ ಅದ್ದೂರಿ ಸ್ವಾಗತ

‘45’ ಸಿನಿಮಾದಲ್ಲಿ ಶಿವರಾಜ್​​ಕುಮಾರ್, ರಾಜ್ ಹಾಗೂ ಉಪ್ಪಿ ಜೊತೆ ಪ್ರಮೋದ್ ಶೆಟ್ಟಿ, ಕೌಸ್ತುಭಾ ಮಣಿ ಮೊದಲಾದವರು ನಟಿಸಿದ್ದಾರೆ. ಗರುಡ ಪುರಾಣದ ಕಥೆಯ ಉಲ್ಲೇಖವನ್ನು ಚಿತ್ರದಲ್ಲಿ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ