AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂಪತ್ತಿಗೆ ಸವಾಲ್’ಗೆ 50 ವರ್ಷ; ಈ ಕಥೆಯನ್ನು ರಾಜ್​ಕುಮಾರ್ ಆಯ್ಕೆ ಮಾಡಿದ್ದು ಹೇಗೆ?

ಶಾರದಾ ಸಂಗೀತ ನಾಟಕ ಮಂಡಳಿ ಕನಕಪುರದಲ್ಲಿ ‘ಸಂಪತ್ತಿಗೆ ಸವಾಲು’ ನಾಟಕವನ್ನು ಪ್ರದರ್ಶನ ಮಾಡುತ್ತಿತ್ತು. ಆ ನಾಟಕದ ಬಗ್ಗೆ ರಾಜ್​ಕುಮಾರ್ ಕೇಳಿದ್ದರು. ಅವರು ಹೋಗಿ ನಾಟಕ ನೋಡಿದರು. ಅವರಿಗೆ ಈ ನಾಟಕ ಸಾಕಷ್ಟು ಇಷ್ಟವಾಯ್ತು. ಅದನ್ನು ಸಿನಿಮಾ ಮಾಡೋ ನಿರ್ಧಾರಕ್ಕೆ ಬಂದರು.

‘ಸಂಪತ್ತಿಗೆ ಸವಾಲ್’ಗೆ 50 ವರ್ಷ; ಈ ಕಥೆಯನ್ನು ರಾಜ್​ಕುಮಾರ್ ಆಯ್ಕೆ ಮಾಡಿದ್ದು ಹೇಗೆ?
ಸಂಪತ್ತಿಗೆ ಸವಾಲ್
ರಾಜೇಶ್ ದುಗ್ಗುಮನೆ
|

Updated on: Jun 01, 2024 | 1:09 PM

Share

ಡಾ. ರಾಜ್​ಕುಮಾರ್ ನಟನೆಯ ‘ಸಂಪತ್ತಿಗೆ ಸವಾಲ್’ ಸಿನಿಮಾ (Sampathige Savaal Movie) ಬಿಡುಗಡೆ ಆಗಿದ್ದು 1974ರಲ್ಲಿ. ಈ ಸಿನಿಮಾ ಅಂದಿನ ಕಾಲಕ್ಕೆ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತ್ತು. ಎವಿ ಶೇಷಗಿರಿ ರಾವ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದರು. ರಾಜ್​ಕುಮಾರ್, ಮಂಜುಳಾ, ವಜ್ರಮುನಿ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರದ ಹಾಡುಗಳ ಧ್ವನಿ ಸುರುಳಿಗಿಂತ ಸಂಭಾಷಣೆಗಳ ಧ್ವನಿ ಸುರುಳಿಯೇ ಪ್ರಸಿದ್ಧಿಯನ್ನು ಪಡೆಯಿತು. ಈ ಚಿತ್ರ ಆರಂಭ ಆಗಿದ್ದು ಹೇಗೆ ಎನ್ನುವ ಬಗ್ಗೆ ಇಲ್ಲಿದೆ ವಿವರ.

ಶಾರದಾ ಸಂಗೀತ ನಾಟಕ ಮಂಡಳಿ ಕನಕಪುರದಲ್ಲಿ ‘ಸಂಪತ್ತಿಗೆ ಸವಾಲು’ ನಾಟಕವನ್ನು ಪ್ರದರ್ಶನ ಮಾಡುತ್ತಿತ್ತು. ಆ ನಾಟಕದ ಬಗ್ಗೆ ರಾಜ್​ಕುಮಾರ್ ಕೇಳಿದ್ದರು. ಅವರು ಹೋಗಿ ನಾಟಕ ನೋಡಿದರು. ಅವರಿಗೆ ಈ ನಾಟಕ ಸಾಕಷ್ಟು ಇಷ್ಟವಾಯ್ತು. ಅದನ್ನು ಸಿನಿಮಾ ಮಾಡೋ ನಿರ್ಧಾರಕ್ಕೆ ಬಂದರು. ಈ ಬಗ್ಗೆ ಅವರು ಶಾರದಾ ಸಂಗೀತ ನಾಟಕ ಮಂಡಳಿಯ ಮಾಲೀಕ ಬಸವರಾಜಪ್ಪ ಅವರಿಗೆ ಮತ್ತು ನಾಟಕ ರಚನಾಕಾರ ಪಿ.ಬಿ. ಧುತ್ತರಗಿ ಅವರ ಬಳಿ ಈ ಬಗ್ಗೆ ಚರ್ಚಿಸಿ ಅವರನ್ನು ಒಪ್ಪಿಸಿದರು. ಇದೇ ಹೆಸರಲ್ಲಿ ಸಿನಿಮಾ ಕೂಡ ಮಾಡಲಾಯಿತು. ಈ ಸಿನಿಮಾ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಿಗೂ ರಿಮೇಕ್ ಆಗಿದೆ.

‘ಯಾವ ನಾಯಿಗೆ ಬೇಕೋ, ಯಾವ ನಾಯಿಗೆ ಬೇಕೋ ನಿನ್ನ ಋಣ’, ‘ಬೇವರ್ಸಿ, ಹಳೆ ಬೇವರ್ಸಿ, ಬಿಕನಾಸಿ, ದರ್ವೇಸಿ’ ರೀತಿಯ ಡೈಲಾಗ್​ಗಳು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದವು. ಪಕ್ಕಾ ಹಳ್ಳಿ ಸೊಗಡಿನ ಕಥೆಗೆ, ಹಳ್ಳಿ ಸೊಗಡಿನ ಸಂಭಾಷಣೆಯನ್ನು ಬರೆದಿದ್ದರು ಚಿ. ಉದಯ್​ ಶಂಕರ್.

ಇದನ್ನೂ ಓದಿ: ರಾಜ್​ಕುಮಾರ್​ಗೆ ಅತಿಯಾದ ಪ್ರೀತಿ ಇದ್ದಿದ್ದು ಯಾರ ಮೇಲೆ?

‘ಸಂಪತ್ತಿಗೆ ಸವಾಲ್’ ಚಿತ್ರದ ‘ಯಾರೇ ಕೂಗಾಡಲಿ, ಊರೇ ಹೋರಾಡಲಿ’ ಹಾಡಿಗೆ ಈಗಲೂ ಬೇಡಿಕೆ ಇದೆ. ಈ ಹಾಡು ಬಂದು 50 ವರ್ಷ ಆದರೂ ಈಗಲೂ ಅನೇಕ ಕೇಳುಗರ ಫೇವರಿಟ್ ಎನಿಸಿಕೊಂಡಿದೆ. ಈ ಹಾಡಿನ ಮೂಲಕ ಡಾ. ರಾಜ್​ಕುಮಾರ್ ಅವರು ಪೂರ್ಣ ಪ್ರಮಾಣದ ಹಿನ್ನೆಲೆ ಗಾಯಕರಾಗಿ ರೂಪುಗೊಂಡರು. ಆ ಬಳಿಕ ಹಲವು ಹಾಡುಗಳನ್ನು ಹಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!