AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂಪತ್ತಿಗೆ ಸವಾಲ್’ಗೆ 50 ವರ್ಷ; ಈ ಕಥೆಯನ್ನು ರಾಜ್​ಕುಮಾರ್ ಆಯ್ಕೆ ಮಾಡಿದ್ದು ಹೇಗೆ?

ಶಾರದಾ ಸಂಗೀತ ನಾಟಕ ಮಂಡಳಿ ಕನಕಪುರದಲ್ಲಿ ‘ಸಂಪತ್ತಿಗೆ ಸವಾಲು’ ನಾಟಕವನ್ನು ಪ್ರದರ್ಶನ ಮಾಡುತ್ತಿತ್ತು. ಆ ನಾಟಕದ ಬಗ್ಗೆ ರಾಜ್​ಕುಮಾರ್ ಕೇಳಿದ್ದರು. ಅವರು ಹೋಗಿ ನಾಟಕ ನೋಡಿದರು. ಅವರಿಗೆ ಈ ನಾಟಕ ಸಾಕಷ್ಟು ಇಷ್ಟವಾಯ್ತು. ಅದನ್ನು ಸಿನಿಮಾ ಮಾಡೋ ನಿರ್ಧಾರಕ್ಕೆ ಬಂದರು.

‘ಸಂಪತ್ತಿಗೆ ಸವಾಲ್’ಗೆ 50 ವರ್ಷ; ಈ ಕಥೆಯನ್ನು ರಾಜ್​ಕುಮಾರ್ ಆಯ್ಕೆ ಮಾಡಿದ್ದು ಹೇಗೆ?
ಸಂಪತ್ತಿಗೆ ಸವಾಲ್
ರಾಜೇಶ್ ದುಗ್ಗುಮನೆ
|

Updated on: Jun 01, 2024 | 1:09 PM

Share

ಡಾ. ರಾಜ್​ಕುಮಾರ್ ನಟನೆಯ ‘ಸಂಪತ್ತಿಗೆ ಸವಾಲ್’ ಸಿನಿಮಾ (Sampathige Savaal Movie) ಬಿಡುಗಡೆ ಆಗಿದ್ದು 1974ರಲ್ಲಿ. ಈ ಸಿನಿಮಾ ಅಂದಿನ ಕಾಲಕ್ಕೆ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತ್ತು. ಎವಿ ಶೇಷಗಿರಿ ರಾವ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದರು. ರಾಜ್​ಕುಮಾರ್, ಮಂಜುಳಾ, ವಜ್ರಮುನಿ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರದ ಹಾಡುಗಳ ಧ್ವನಿ ಸುರುಳಿಗಿಂತ ಸಂಭಾಷಣೆಗಳ ಧ್ವನಿ ಸುರುಳಿಯೇ ಪ್ರಸಿದ್ಧಿಯನ್ನು ಪಡೆಯಿತು. ಈ ಚಿತ್ರ ಆರಂಭ ಆಗಿದ್ದು ಹೇಗೆ ಎನ್ನುವ ಬಗ್ಗೆ ಇಲ್ಲಿದೆ ವಿವರ.

ಶಾರದಾ ಸಂಗೀತ ನಾಟಕ ಮಂಡಳಿ ಕನಕಪುರದಲ್ಲಿ ‘ಸಂಪತ್ತಿಗೆ ಸವಾಲು’ ನಾಟಕವನ್ನು ಪ್ರದರ್ಶನ ಮಾಡುತ್ತಿತ್ತು. ಆ ನಾಟಕದ ಬಗ್ಗೆ ರಾಜ್​ಕುಮಾರ್ ಕೇಳಿದ್ದರು. ಅವರು ಹೋಗಿ ನಾಟಕ ನೋಡಿದರು. ಅವರಿಗೆ ಈ ನಾಟಕ ಸಾಕಷ್ಟು ಇಷ್ಟವಾಯ್ತು. ಅದನ್ನು ಸಿನಿಮಾ ಮಾಡೋ ನಿರ್ಧಾರಕ್ಕೆ ಬಂದರು. ಈ ಬಗ್ಗೆ ಅವರು ಶಾರದಾ ಸಂಗೀತ ನಾಟಕ ಮಂಡಳಿಯ ಮಾಲೀಕ ಬಸವರಾಜಪ್ಪ ಅವರಿಗೆ ಮತ್ತು ನಾಟಕ ರಚನಾಕಾರ ಪಿ.ಬಿ. ಧುತ್ತರಗಿ ಅವರ ಬಳಿ ಈ ಬಗ್ಗೆ ಚರ್ಚಿಸಿ ಅವರನ್ನು ಒಪ್ಪಿಸಿದರು. ಇದೇ ಹೆಸರಲ್ಲಿ ಸಿನಿಮಾ ಕೂಡ ಮಾಡಲಾಯಿತು. ಈ ಸಿನಿಮಾ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಿಗೂ ರಿಮೇಕ್ ಆಗಿದೆ.

‘ಯಾವ ನಾಯಿಗೆ ಬೇಕೋ, ಯಾವ ನಾಯಿಗೆ ಬೇಕೋ ನಿನ್ನ ಋಣ’, ‘ಬೇವರ್ಸಿ, ಹಳೆ ಬೇವರ್ಸಿ, ಬಿಕನಾಸಿ, ದರ್ವೇಸಿ’ ರೀತಿಯ ಡೈಲಾಗ್​ಗಳು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದವು. ಪಕ್ಕಾ ಹಳ್ಳಿ ಸೊಗಡಿನ ಕಥೆಗೆ, ಹಳ್ಳಿ ಸೊಗಡಿನ ಸಂಭಾಷಣೆಯನ್ನು ಬರೆದಿದ್ದರು ಚಿ. ಉದಯ್​ ಶಂಕರ್.

ಇದನ್ನೂ ಓದಿ: ರಾಜ್​ಕುಮಾರ್​ಗೆ ಅತಿಯಾದ ಪ್ರೀತಿ ಇದ್ದಿದ್ದು ಯಾರ ಮೇಲೆ?

‘ಸಂಪತ್ತಿಗೆ ಸವಾಲ್’ ಚಿತ್ರದ ‘ಯಾರೇ ಕೂಗಾಡಲಿ, ಊರೇ ಹೋರಾಡಲಿ’ ಹಾಡಿಗೆ ಈಗಲೂ ಬೇಡಿಕೆ ಇದೆ. ಈ ಹಾಡು ಬಂದು 50 ವರ್ಷ ಆದರೂ ಈಗಲೂ ಅನೇಕ ಕೇಳುಗರ ಫೇವರಿಟ್ ಎನಿಸಿಕೊಂಡಿದೆ. ಈ ಹಾಡಿನ ಮೂಲಕ ಡಾ. ರಾಜ್​ಕುಮಾರ್ ಅವರು ಪೂರ್ಣ ಪ್ರಮಾಣದ ಹಿನ್ನೆಲೆ ಗಾಯಕರಾಗಿ ರೂಪುಗೊಂಡರು. ಆ ಬಳಿಕ ಹಲವು ಹಾಡುಗಳನ್ನು ಹಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ