AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂಪತ್ತಿಗೆ ಸವಾಲ್’ಗೆ 50 ವರ್ಷ; ಈ ಕಥೆಯನ್ನು ರಾಜ್​ಕುಮಾರ್ ಆಯ್ಕೆ ಮಾಡಿದ್ದು ಹೇಗೆ?

ಶಾರದಾ ಸಂಗೀತ ನಾಟಕ ಮಂಡಳಿ ಕನಕಪುರದಲ್ಲಿ ‘ಸಂಪತ್ತಿಗೆ ಸವಾಲು’ ನಾಟಕವನ್ನು ಪ್ರದರ್ಶನ ಮಾಡುತ್ತಿತ್ತು. ಆ ನಾಟಕದ ಬಗ್ಗೆ ರಾಜ್​ಕುಮಾರ್ ಕೇಳಿದ್ದರು. ಅವರು ಹೋಗಿ ನಾಟಕ ನೋಡಿದರು. ಅವರಿಗೆ ಈ ನಾಟಕ ಸಾಕಷ್ಟು ಇಷ್ಟವಾಯ್ತು. ಅದನ್ನು ಸಿನಿಮಾ ಮಾಡೋ ನಿರ್ಧಾರಕ್ಕೆ ಬಂದರು.

‘ಸಂಪತ್ತಿಗೆ ಸವಾಲ್’ಗೆ 50 ವರ್ಷ; ಈ ಕಥೆಯನ್ನು ರಾಜ್​ಕುಮಾರ್ ಆಯ್ಕೆ ಮಾಡಿದ್ದು ಹೇಗೆ?
ಸಂಪತ್ತಿಗೆ ಸವಾಲ್
ರಾಜೇಶ್ ದುಗ್ಗುಮನೆ
|

Updated on: Jun 01, 2024 | 1:09 PM

Share

ಡಾ. ರಾಜ್​ಕುಮಾರ್ ನಟನೆಯ ‘ಸಂಪತ್ತಿಗೆ ಸವಾಲ್’ ಸಿನಿಮಾ (Sampathige Savaal Movie) ಬಿಡುಗಡೆ ಆಗಿದ್ದು 1974ರಲ್ಲಿ. ಈ ಸಿನಿಮಾ ಅಂದಿನ ಕಾಲಕ್ಕೆ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತ್ತು. ಎವಿ ಶೇಷಗಿರಿ ರಾವ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದರು. ರಾಜ್​ಕುಮಾರ್, ಮಂಜುಳಾ, ವಜ್ರಮುನಿ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರದ ಹಾಡುಗಳ ಧ್ವನಿ ಸುರುಳಿಗಿಂತ ಸಂಭಾಷಣೆಗಳ ಧ್ವನಿ ಸುರುಳಿಯೇ ಪ್ರಸಿದ್ಧಿಯನ್ನು ಪಡೆಯಿತು. ಈ ಚಿತ್ರ ಆರಂಭ ಆಗಿದ್ದು ಹೇಗೆ ಎನ್ನುವ ಬಗ್ಗೆ ಇಲ್ಲಿದೆ ವಿವರ.

ಶಾರದಾ ಸಂಗೀತ ನಾಟಕ ಮಂಡಳಿ ಕನಕಪುರದಲ್ಲಿ ‘ಸಂಪತ್ತಿಗೆ ಸವಾಲು’ ನಾಟಕವನ್ನು ಪ್ರದರ್ಶನ ಮಾಡುತ್ತಿತ್ತು. ಆ ನಾಟಕದ ಬಗ್ಗೆ ರಾಜ್​ಕುಮಾರ್ ಕೇಳಿದ್ದರು. ಅವರು ಹೋಗಿ ನಾಟಕ ನೋಡಿದರು. ಅವರಿಗೆ ಈ ನಾಟಕ ಸಾಕಷ್ಟು ಇಷ್ಟವಾಯ್ತು. ಅದನ್ನು ಸಿನಿಮಾ ಮಾಡೋ ನಿರ್ಧಾರಕ್ಕೆ ಬಂದರು. ಈ ಬಗ್ಗೆ ಅವರು ಶಾರದಾ ಸಂಗೀತ ನಾಟಕ ಮಂಡಳಿಯ ಮಾಲೀಕ ಬಸವರಾಜಪ್ಪ ಅವರಿಗೆ ಮತ್ತು ನಾಟಕ ರಚನಾಕಾರ ಪಿ.ಬಿ. ಧುತ್ತರಗಿ ಅವರ ಬಳಿ ಈ ಬಗ್ಗೆ ಚರ್ಚಿಸಿ ಅವರನ್ನು ಒಪ್ಪಿಸಿದರು. ಇದೇ ಹೆಸರಲ್ಲಿ ಸಿನಿಮಾ ಕೂಡ ಮಾಡಲಾಯಿತು. ಈ ಸಿನಿಮಾ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಿಗೂ ರಿಮೇಕ್ ಆಗಿದೆ.

‘ಯಾವ ನಾಯಿಗೆ ಬೇಕೋ, ಯಾವ ನಾಯಿಗೆ ಬೇಕೋ ನಿನ್ನ ಋಣ’, ‘ಬೇವರ್ಸಿ, ಹಳೆ ಬೇವರ್ಸಿ, ಬಿಕನಾಸಿ, ದರ್ವೇಸಿ’ ರೀತಿಯ ಡೈಲಾಗ್​ಗಳು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದವು. ಪಕ್ಕಾ ಹಳ್ಳಿ ಸೊಗಡಿನ ಕಥೆಗೆ, ಹಳ್ಳಿ ಸೊಗಡಿನ ಸಂಭಾಷಣೆಯನ್ನು ಬರೆದಿದ್ದರು ಚಿ. ಉದಯ್​ ಶಂಕರ್.

ಇದನ್ನೂ ಓದಿ: ರಾಜ್​ಕುಮಾರ್​ಗೆ ಅತಿಯಾದ ಪ್ರೀತಿ ಇದ್ದಿದ್ದು ಯಾರ ಮೇಲೆ?

‘ಸಂಪತ್ತಿಗೆ ಸವಾಲ್’ ಚಿತ್ರದ ‘ಯಾರೇ ಕೂಗಾಡಲಿ, ಊರೇ ಹೋರಾಡಲಿ’ ಹಾಡಿಗೆ ಈಗಲೂ ಬೇಡಿಕೆ ಇದೆ. ಈ ಹಾಡು ಬಂದು 50 ವರ್ಷ ಆದರೂ ಈಗಲೂ ಅನೇಕ ಕೇಳುಗರ ಫೇವರಿಟ್ ಎನಿಸಿಕೊಂಡಿದೆ. ಈ ಹಾಡಿನ ಮೂಲಕ ಡಾ. ರಾಜ್​ಕುಮಾರ್ ಅವರು ಪೂರ್ಣ ಪ್ರಮಾಣದ ಹಿನ್ನೆಲೆ ಗಾಯಕರಾಗಿ ರೂಪುಗೊಂಡರು. ಆ ಬಳಿಕ ಹಲವು ಹಾಡುಗಳನ್ನು ಹಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!