AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನ್ ಅಬ್ರಹಾಂನ ಭೇಟಿ ಮಾಡಿದ ‘777 ಚಾರ್ಲಿ’ ನಿರ್ದೇಶಕ; ಸಿಗಲಿದೆ ಹೊಸ ಅಪ್​ಡೇಟ್?

2022ರ ಜೂನ್ 10ರಂದು ‘777 ಚಾರ್ಲಿ’ ಸಿನಿಮಾ ರಿಲೀಸ್ ಆಯಿತು. ಈಗ ಎರಡು ವರ್ಷ ಪೂರ್ಣಗೊಳ್ಳುತ್ತಾ ಬಂದರೂ ಕಿರಣ್ ರಾಜ್ ಅವರು ಹೊಸ ಚಿತ್ರ ಅನೌನ್ಸ್ ಮಾಡಿಲ್ಲ. ಈಗ ಜಾನ್ ಅಬ್ರಹಾಂ ಭೇಟಿ ಬಳಿಕ ಅವರು ಬಾಲಿವುಡ್​ನಲ್ಲಿ ಸಿನಿಮಾ ಮಾಡುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಜಾನ್ ಅಬ್ರಹಾಂನ ಭೇಟಿ ಮಾಡಿದ ‘777 ಚಾರ್ಲಿ’ ನಿರ್ದೇಶಕ; ಸಿಗಲಿದೆ ಹೊಸ ಅಪ್​ಡೇಟ್?
ಜಾನ್​-ಕಿರಣ್
ರಾಜೇಶ್ ದುಗ್ಗುಮನೆ
|

Updated on: Apr 26, 2024 | 7:00 AM

Share

‘777 ಚಾರ್ಲಿ’ ಸಿನಿಮಾ (777 Charlie) ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಪಡೆದವರು ನಿರ್ದೇಶಕ ಕಿರಣ್ ರಾಜ್. ಅವರು ಸದ್ಯ ಬ್ರೇಕ್​ನಲ್ಲಿದ್ದಾರೆ. ಅವರ ಮುಂದಿನ ಸಿನಿಮಾಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ಹೀಗಿರುವಾಗಲೇ ಅವರು ಬಾಲಿವುಡ್​ನ ಖ್ಯಾತ ನಟ ಜಾನ್ ಅಬ್ರಾಹಂ ಅವರನ್ನು ಭೇಟಿ ಮಾಡಿದ್ದಾರೆ. ಈ ಫೋಟೋನ ಸ್ವತಃ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದ್ದು, ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಜಾನ್ ಅಬ್ರಹಾಂ ಜೊತೆ ನಿಂತಿರೋ ಫೋಟೋ ಹಂಚಿಕೊಂಡಿರುವ ಅವರು, ‘ಎಂತಹ ಅದ್ಭುತ ದಿನ’ ಎಂದು ಬರೆದಿಕೊಂಡಿದ್ದಾರೆ. ಹೃದಯದಿಂದ ಹಾಗೂ ಒಳ್ಳೆಯ ಉದ್ದೇಶದಿಂದ ಮಾಡಿದ ಎಲ್ಲಾ ಕೆಲಸಗಳನ್ನು ಯಾವಾಗಲೂ ಪ್ರೀತಿಯಿಂದ ಸ್ವೀಕರಿಸಲಾಗುತ್ತದೆ. 777 ಚಾರ್ಲಿ ರಿಲೀಸ್ ಸಂದರ್ಭದಲ್ಲಿ ನಾವು ಫೋನ್ ಮೂಲಕ ಮಾತನಾಡಿದ್ದೆವು. ಈಗ ಸುಮಾರು ಒಂದೂವರೆ ವರ್ಷಗಳ ನಂತರ ಅವರನ್ನು ವೈಯಕ್ತಿಕವಾಗಿ ಭೇಟಿಯಾಗುವ ಅವಕಾಶ ಸಿಕ್ಕಿತು. ಅವರು ತೋರಿದ ನಮ್ರತೆ ನಿಜವಾಗಿಯೂ ಹೃದಯಸ್ಪರ್ಶಿ. ಈ ದಿನಕ್ಕೆ ಕೃತಜ್ಞ’ ಎಂದು ಕಿರಣ್ ರಾಜ್ ಬರೆದುಕೊಂಡಿದ್ದಾರೆ.

2022ರ ಜೂನ್ 10ರಂದು ‘777 ಚಾರ್ಲಿ’ ಸಿನಿಮಾ ರಿಲೀಸ್ ಆಯಿತು. ಈಗ ಎರಡು ವರ್ಷ ಪೂರ್ಣಗೊಳ್ಳುತ್ತಾ ಬಂದರೂ ಕಿರಣ್ ರಾಜ್ ಅವರು ಹೊಸ ಸಿನಿಮಾ ಅನೌನ್ಸ್ ಮಾಡಿಲ್ಲ. ಈಗ ಜಾನ್ ಅಬ್ರಹಾಂ ಭೇಟಿ ಬಳಿಕ ಅವರು ಬಾಲಿವುಡ್​ನಲ್ಲಿ ಸಿನಿಮಾ ಮಾಡುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಕುತೂಹಲ ಹೆಚ್ಚಿದೆ.

ಇದನ್ನೂ ಓದಿ: ‘ಅಯ್ಯಪ್ಪನುಂ ಕೋಶಿಯುಂ’ ಹಿಂದಿ ರಿಮೇಕ್​ನಲ್ಲಿ ಜಾನ್ ಅಬ್ರಹಾಂ- ಅರ್ಜುನ್ ಕಪೂರ್; ನಿರ್ದೇಶನ ಮಾಡಲಿದ್ದಾರೆ ಈ ಹಿಟ್ ನಿರ್ದೇಶಕ

ಜಾನ್ ಅಬ್ರಹಾಂ ಅವರು ಇತ್ತೀಚೆಗೆ ಹೀರೋ ಪಾತ್ರಗಳ ಜೊತೆ ವಿಲನ್ ಪಾತ್ರಗಳನ್ನು ಮಾಡಿ ಗಮನ ಸೆಳೆಯುತ್ತಿದ್ದಾರೆ. ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾದಲ್ಲಿ ಅವರು ಖಡಕ್ ವಿಲನ್ ಆಗಿ ಗಮನ ಸೆಳೆದಿದ್ದರು. ಈ ಮೂಲಕ ಅವರ ಜನಪ್ರಿಯತೆ ಹೆಚ್ಚಿದೆ. ಇದರ ಜೊತೆಗೆ ಕೆಲವು ಸಿನಿಮಾಗಳಲ್ಲಿ ಅವರು ಹೀರೋ ಆಗಿಯೂ ಗಮನ ಸೆಳೆಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ