AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನ್ ಅಬ್ರಹಾಂನ ಭೇಟಿ ಮಾಡಿದ ‘777 ಚಾರ್ಲಿ’ ನಿರ್ದೇಶಕ; ಸಿಗಲಿದೆ ಹೊಸ ಅಪ್​ಡೇಟ್?

2022ರ ಜೂನ್ 10ರಂದು ‘777 ಚಾರ್ಲಿ’ ಸಿನಿಮಾ ರಿಲೀಸ್ ಆಯಿತು. ಈಗ ಎರಡು ವರ್ಷ ಪೂರ್ಣಗೊಳ್ಳುತ್ತಾ ಬಂದರೂ ಕಿರಣ್ ರಾಜ್ ಅವರು ಹೊಸ ಚಿತ್ರ ಅನೌನ್ಸ್ ಮಾಡಿಲ್ಲ. ಈಗ ಜಾನ್ ಅಬ್ರಹಾಂ ಭೇಟಿ ಬಳಿಕ ಅವರು ಬಾಲಿವುಡ್​ನಲ್ಲಿ ಸಿನಿಮಾ ಮಾಡುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಜಾನ್ ಅಬ್ರಹಾಂನ ಭೇಟಿ ಮಾಡಿದ ‘777 ಚಾರ್ಲಿ’ ನಿರ್ದೇಶಕ; ಸಿಗಲಿದೆ ಹೊಸ ಅಪ್​ಡೇಟ್?
ಜಾನ್​-ಕಿರಣ್
ರಾಜೇಶ್ ದುಗ್ಗುಮನೆ
|

Updated on: Apr 26, 2024 | 7:00 AM

Share

‘777 ಚಾರ್ಲಿ’ ಸಿನಿಮಾ (777 Charlie) ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಪಡೆದವರು ನಿರ್ದೇಶಕ ಕಿರಣ್ ರಾಜ್. ಅವರು ಸದ್ಯ ಬ್ರೇಕ್​ನಲ್ಲಿದ್ದಾರೆ. ಅವರ ಮುಂದಿನ ಸಿನಿಮಾಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ಹೀಗಿರುವಾಗಲೇ ಅವರು ಬಾಲಿವುಡ್​ನ ಖ್ಯಾತ ನಟ ಜಾನ್ ಅಬ್ರಾಹಂ ಅವರನ್ನು ಭೇಟಿ ಮಾಡಿದ್ದಾರೆ. ಈ ಫೋಟೋನ ಸ್ವತಃ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದ್ದು, ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಜಾನ್ ಅಬ್ರಹಾಂ ಜೊತೆ ನಿಂತಿರೋ ಫೋಟೋ ಹಂಚಿಕೊಂಡಿರುವ ಅವರು, ‘ಎಂತಹ ಅದ್ಭುತ ದಿನ’ ಎಂದು ಬರೆದಿಕೊಂಡಿದ್ದಾರೆ. ಹೃದಯದಿಂದ ಹಾಗೂ ಒಳ್ಳೆಯ ಉದ್ದೇಶದಿಂದ ಮಾಡಿದ ಎಲ್ಲಾ ಕೆಲಸಗಳನ್ನು ಯಾವಾಗಲೂ ಪ್ರೀತಿಯಿಂದ ಸ್ವೀಕರಿಸಲಾಗುತ್ತದೆ. 777 ಚಾರ್ಲಿ ರಿಲೀಸ್ ಸಂದರ್ಭದಲ್ಲಿ ನಾವು ಫೋನ್ ಮೂಲಕ ಮಾತನಾಡಿದ್ದೆವು. ಈಗ ಸುಮಾರು ಒಂದೂವರೆ ವರ್ಷಗಳ ನಂತರ ಅವರನ್ನು ವೈಯಕ್ತಿಕವಾಗಿ ಭೇಟಿಯಾಗುವ ಅವಕಾಶ ಸಿಕ್ಕಿತು. ಅವರು ತೋರಿದ ನಮ್ರತೆ ನಿಜವಾಗಿಯೂ ಹೃದಯಸ್ಪರ್ಶಿ. ಈ ದಿನಕ್ಕೆ ಕೃತಜ್ಞ’ ಎಂದು ಕಿರಣ್ ರಾಜ್ ಬರೆದುಕೊಂಡಿದ್ದಾರೆ.

2022ರ ಜೂನ್ 10ರಂದು ‘777 ಚಾರ್ಲಿ’ ಸಿನಿಮಾ ರಿಲೀಸ್ ಆಯಿತು. ಈಗ ಎರಡು ವರ್ಷ ಪೂರ್ಣಗೊಳ್ಳುತ್ತಾ ಬಂದರೂ ಕಿರಣ್ ರಾಜ್ ಅವರು ಹೊಸ ಸಿನಿಮಾ ಅನೌನ್ಸ್ ಮಾಡಿಲ್ಲ. ಈಗ ಜಾನ್ ಅಬ್ರಹಾಂ ಭೇಟಿ ಬಳಿಕ ಅವರು ಬಾಲಿವುಡ್​ನಲ್ಲಿ ಸಿನಿಮಾ ಮಾಡುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಕುತೂಹಲ ಹೆಚ್ಚಿದೆ.

ಇದನ್ನೂ ಓದಿ: ‘ಅಯ್ಯಪ್ಪನುಂ ಕೋಶಿಯುಂ’ ಹಿಂದಿ ರಿಮೇಕ್​ನಲ್ಲಿ ಜಾನ್ ಅಬ್ರಹಾಂ- ಅರ್ಜುನ್ ಕಪೂರ್; ನಿರ್ದೇಶನ ಮಾಡಲಿದ್ದಾರೆ ಈ ಹಿಟ್ ನಿರ್ದೇಶಕ

ಜಾನ್ ಅಬ್ರಹಾಂ ಅವರು ಇತ್ತೀಚೆಗೆ ಹೀರೋ ಪಾತ್ರಗಳ ಜೊತೆ ವಿಲನ್ ಪಾತ್ರಗಳನ್ನು ಮಾಡಿ ಗಮನ ಸೆಳೆಯುತ್ತಿದ್ದಾರೆ. ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾದಲ್ಲಿ ಅವರು ಖಡಕ್ ವಿಲನ್ ಆಗಿ ಗಮನ ಸೆಳೆದಿದ್ದರು. ಈ ಮೂಲಕ ಅವರ ಜನಪ್ರಿಯತೆ ಹೆಚ್ಚಿದೆ. ಇದರ ಜೊತೆಗೆ ಕೆಲವು ಸಿನಿಮಾಗಳಲ್ಲಿ ಅವರು ಹೀರೋ ಆಗಿಯೂ ಗಮನ ಸೆಳೆಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ