‘777 ಚಾರ್ಲಿ’ ಬಗ್ಗೆ ಹೊಸ ಅಪ್​ಡೇಟ್​; ಡಿಸೆಂಬರ್​ 31ಕ್ಕೆ ಸಿನಿಮಾ ರಿಲೀಸ್​ ಆಗಲ್ಲ ಎಂದ ರಕ್ಷಿತ್ ಶೆಟ್ಟಿ

ರಕ್ಷಿತ್ ಶೆಟ್ಟಿ ವೃತ್ತಿಜೀವನಕ್ಕೆ ಬಹುದೊಡ್ಡ ಬ್ರೇಕ್ ​ನೀಡಿದ ಸಿನಿಮಾ ಕಿರಿಕ್​ ಪಾರ್ಟಿ. ಆ ಚಿತ್ರ ಕೂಡ ಡಿಸೆಂಬರ್​ ಅಂತ್ಯಕ್ಕೆ (ಡಿ.30) ತೆರೆಕಂಡು ಧೂಳೆಬ್ಬಿಸಿತ್ತು. ಈಗ ಅದೇ ಸಮಯಕ್ಕೆ ‘777 ಚಾರ್ಲಿ’ ಮೂಲಕ ರಕ್ಷಿತ್​ ಶೆಟ್ಟಿ ಅದೃಷ್ಟ ಪರೀಕ್ಷೆಗೆ ಮುಂದಾಗುವವರಿದ್ದರು.

‘777 ಚಾರ್ಲಿ’ ಬಗ್ಗೆ ಹೊಸ ಅಪ್​ಡೇಟ್​; ಡಿಸೆಂಬರ್​ 31ಕ್ಕೆ ಸಿನಿಮಾ ರಿಲೀಸ್​ ಆಗಲ್ಲ ಎಂದ ರಕ್ಷಿತ್ ಶೆಟ್ಟಿ
ರಕ್ಷಿತ್​
Follow us
| Updated By: ರಾಜೇಶ್ ದುಗ್ಗುಮನೆ

Updated on:Dec 12, 2021 | 7:08 PM

ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ದೊಡ್ಡಮಟ್ಟದ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಲ್ಲಿ ನಾಯಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈ ಮೊದಲು ಬಿಡುಗಡೆ ಆಗಿದ್ದ ಟೀಸರ್​, ಪೋಸ್ಟರ್, ಸಾಂಗ್​​​ಗಳಿಂದ ಅಭಿಮಾನಿಗಳಿಗೆ ಕೌತುಕ ಹೆಚ್ಚಿತ್ತು. ಕೊವಿಡ್​ ಕಾರಣದಿಂದ ಸಿನಿಮಾ ಕೆಲಸಗಳು ಉಳಿದುಕೊಂಡಿದ್ದವು. ಇತ್ತೀಚೆಗೆ ಅದನ್ನು ಪೂರ್ಣಗೊಳಿಸಿತ್ತು. ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗಲಿದೆ. ಇವುಗಳ ಕೆಲಸಗಳು ಈಗ ಭರದಿಂದ ಸಾಗುತ್ತಿದೆ. ಡಿಸೆಂಬರ್​ 31ರಂದು ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಚಿತ್ರ ವಿಳಂಬವಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ.

ರಕ್ಷಿತ್ ಶೆಟ್ಟಿ ವೃತ್ತಿಜೀವನಕ್ಕೆ ಬಹುದೊಡ್ಡ ಬ್ರೇಕ್ ​ನೀಡಿದ ಸಿನಿಮಾ ಕಿರಿಕ್​ ಪಾರ್ಟಿ. ಆ ಚಿತ್ರ ಕೂಡ ಡಿಸೆಂಬರ್​ ಅಂತ್ಯಕ್ಕೆ (ಡಿ.30) ತೆರೆಕಂಡು ಧೂಳೆಬ್ಬಿಸಿತ್ತು. ಈಗ ಅದೇ ಸಮಯಕ್ಕೆ ‘777 ಚಾರ್ಲಿ’ ಮೂಲಕ ರಕ್ಷಿತ್​ ಶೆಟ್ಟಿ ಅದೃಷ್ಟ ಪರೀಕ್ಷೆಗೆ ಮುಂದಾಗುವವರಿದ್ದರು. ಆದರೆ, ಚಿತ್ರದ ಕೆಲಸಗಳು ವಿಳಂಬವಾಗಿರುವುದರಿಂದ ಸಿನಿಮಾ ರಿಲೀಸ್​ ದಿನಾಂಕ ವಿಳಂಬವಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ರಕ್ಷಿತ್​ ಶೆಟ್ಟಿ ಬರೆದುಕೊಂಡಿದ್ದಾರೆ.

‘777 ಚಾರ್ಲಿಯ ಈ ಸುದೀರ್ಘ ಪಯಣದಲ್ಲಿ ನೀವು ನಮಗೆ ತೋರಿರುವ ಪ್ರೀತಿ ಹಾಗು ಬೆಂಬಲಕ್ಕೆ ನಾವು ಆಭಾರಿ. ನಾವು ಈ ಮೂಲಕ ತಿಳಿಸ ಬಯಸುವುದೇನೆಂದರೆ, ನಮ್ಮ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಮೊದಲು ನಿಗದಿಪಡಿಸಲಾಗಿದ್ದ ದಿನಾಂಕವಾದ 31 ಡಿಸೆಂಬರ್ 2021 ರಂದು ಚಿತ್ರವನ್ನು ಬಿಡುಗಡೆ ಮಾಡುತ್ತಿಲ್ಲ. ಕೆಲವು ವಿಳಂಬಗಳು ಹೊಸದೊಂದು ಅಧ್ಯಾಯಕ್ಕೆ ನಾಂದಿಯಾಗುತ್ತದೆ. ಅತೀ ಶೀಘ್ರದಲ್ಲಿ ಹೊಸ ಪ್ರಕಟಣೆಯೊಂದಿಗೆ ನಿಮ್ಮ ಮುಂದೆ ಬರಲಿದ್ದೇವೆ. ಅಲ್ಲಿಯವರೆಗೂ, ಹರಸಿ.. ಹಾರೈಸಿ’ ಎಂದು ಬರೆದುಕೊಂಡಿದ್ದಾರೆ.

ಕಿರಣ್​ ರಾಜ್​ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಕ್ಷಿತ್​ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ. ಶೆಟ್ಟಿ, ದಾನಿಶ್​ ಸೇಟ್​ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ. ಪರಮ್​ವಾ ಸ್ಟುಡಿಯೋ ಬ್ಯಾನರ್​ ಅಡಿಯಲ್ಲಿ ಚಿತ್ರ ಮೂಡಿ ಬರುತ್ತಿದೆ. ಹೊಸ ರಿಲೀಸ್ ಡೇಟ್​ಗಾಗಿ ಅಭಿಮಾನಿಗಳು ಕಾದಿದ್ದಾರೆ.

ಇದನ್ನೂ ಓದಿ: ಕಿರಿಕ್​ ಪಾರ್ಟಿ ರೀತಿ ಡಿಸೆಂಬರ್​ನಲ್ಲಿ ರಕ್ಷಿತ್​ ಶೆಟ್ಟಿ ಅದೃಷ್ಟ ಪರೀಕ್ಷೆ; ‘777 ಚಾರ್ಲಿ’ ಟಾರ್ಚರ್​ಗೆ ಧರ್ಮ ಸುಸ್ತೋ ಸುಸ್ತು​

‘777 ಚಾರ್ಲಿ’ ಸಿನಿಮಾ ಶೂಟಿಂಗ್​ ಮುಕ್ತಾಯ; ಕುಂಬಳಕಾಯಿ ಒಡೆದ ಸಂಭ್ರಮದಲ್ಲಿ ರಕ್ಷಿತ್​

Published On - 7:07 pm, Sun, 12 December 21

ತಾಜಾ ಸುದ್ದಿ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ