AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

777 Charlie: ‘777 ಚಾರ್ಲಿ’ ಪ್ರಚಾರದ ವೇಳೆ ರಶ್ಮಿಕಾ ಮಂದಣ್ಣ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ರಕ್ಷಿತ್​ ಶೆಟ್ಟಿ

Rakshit Shetty on Rashmika Mandanna: ಬ್ರೇಕಪ್​ ಬಳಿಕವೂ ರಕ್ಷಿತ್​ ಶೆಟ್ಟಿ ಅವರು ರಶ್ಮಿಕಾ ಮಂದಣ್ಣ ಬಗ್ಗೆ ಒಳ್ಳೆಯ ಭಾವನೆ ಹೊಂದಿದ್ದಾರೆ. ಕೆಲವು ಸಂದರ್ಭಗಳಲ್ಲಿ ರಕ್ಷಿತ್​ ನೀಡಿದ ಹೇಳಿಕೆಗಳೇ ಅದಕ್ಕೆ ಸಾಕ್ಷಿ.

777 Charlie: ‘777 ಚಾರ್ಲಿ’ ಪ್ರಚಾರದ ವೇಳೆ ರಶ್ಮಿಕಾ ಮಂದಣ್ಣ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ರಕ್ಷಿತ್​ ಶೆಟ್ಟಿ
ರಕ್ಷಿತ್ ಶೆಟ್ಟಿ - ರಶ್ಮಿಕಾ ಮಂದಣ್ಣ
Follow us
TV9 Web
| Updated By: ಮದನ್​ ಕುಮಾರ್​

Updated on:Jun 06, 2022 | 8:34 AM

ನಟ ರಕ್ಷಿತ್​ ಶೆಟ್ಟಿ (Rakshit Shetty) ಅವರು ಹಲವು ಕಾರಣಗಳಿಂದಾಗಿ ಸುದ್ದಿ ಆಗುತ್ತಿದ್ದಾರೆ. ಇಂದು (ಜೂನ್​ 6) ಅವರ ಜನ್ಮದಿನ. ‘ಸಿಂಪಲ್​ ಸ್ಟಾರ್​’ ಹುಟ್ಟುಹಬ್ಬದ ಪ್ರಯುಕ್ತ ಅವರ ಬಗೆಗಿನ ಅನೇಕ ವಿಚಾರಗಳನ್ನು ಫ್ಯಾನ್ಸ್​ ಚರ್ಚಿಸುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ರಕ್ಷಿತ್​ ಶೆಟ್ಟಿ ಅವರು ತುಂಬ ಶ್ರಮಪಟ್ಟು ಮೇಲೆ ಬಂದವರು. ಒಂದೊಂದು ಸಿನಿಮಾದಲ್ಲಿಯೂ ಅವರ ಶ್ರಮ ಕಾಣಿಸುತ್ತದೆ. ಎಲ್ಲ ಬಗೆಯ ಸಿನಿಮಾಗಳನ್ನು ಮಾಡುತ್ತ ಅವರು ಡಿಫರೆಂಟ್​ ಆಗಿ ಗುರುತಿಸಿಕೊಂಡಿದ್ದಾರೆ. ಅನೇಕರಿಗೆ ಅವರು ಅವಕಾಶ ನೀಡಿದ್ದಾರೆ ಎಂಬುದು ಕೂಡ ಗಮನಾರ್ಹ. ಇಂದು ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಿರುವ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಮೊದಲ ಬಾರಿಗೆ ಅವಕಾಶ ನೀಡಿದ್ದೇ ರಕ್ಷಿತ್ ಶೆಟ್ಟಿ. ‘ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ನಟಿಸಿದ ರಶ್ಮಿಕಾಗೆ ದೊಡ್ಡಮಟ್ಟದ ಗೆಲುವು ಸಿಕ್ಕಿತು. ಬಳಿಕ ಅವರು ಪರಭಾಷೆಗೆ ತೆರಳಿ ಸ್ಟಾರ್​ ನಟಿಯಾಗಿ ಬೆಳೆದರು. ಇತ್ತೀಚೆಗೆ ‘777 ಚಾರ್ಲಿ’ (777 Charlie) ಸಿನಿಮಾದ ಪ್ರಮೋಷನ್​ ವೇಳೆ ರಶ್ಮಿಕಾ ಮಂದಣ್ಣ ಬಗ್ಗೆ ಕೇಳಿದ ಪ್ರಶ್ನೆಗೆ ರಕ್ಷಿತ್​ ಶೆಟ್ಟಿ ಉತ್ತರ ನೀಡಿದ್ದಾರೆ.

‘ಕಿರಿಕ್​ ಪಾರ್ಟಿ’ ಸಿನಿಮಾದಲ್ಲಿ ಜೊತೆಯಾಗಿ ಕೆಲಸ ಮಾಡಿದ ಬಳಿಕ ರಕ್ಷಿತ್​ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಅವರ ನಡುವೆ ಪ್ರೀತಿ ಚಿಗುರಿತ್ತು. ಎರಡೂ ಕುಟುಂಬದವರ ಒಪ್ಪಿಗೆ ಮೇರೆಗೆ ಎಂಗೇಜ್​ಮೆಂಟ್​ ಕೂಡ ಅದ್ದೂರಿಯಾಗಿ ನೆರವೇರಿತ್ತು. ಆದರೆ ಇಬ್ಬರ ನಡುವೆ ನಂತರದ ದಿನಗಳಲ್ಲಿ ವೈಮನಸ್ಸು ಮೂಡಿದ್ದರಿಂದ ಆ ಸಂಬಂಧ ಮುರಿದು ಬಿತ್ತು.

ಇದನ್ನೂ ಓದಿ: Rakshit Shetty Birthday: ರಕ್ಷಿತ್​ ಶೆಟ್ಟಿ ಜನ್ಮದಿನವನ್ನು ಇನ್ನಷ್ಟು ಸ್ಪೆಷಲ್​ ಆಗಿಸಿದ ಅಭಿಮಾನಿಗಳು

ಇದನ್ನೂ ಓದಿ
Image
ಸ್ಟಾರ್​ ನಟನ ರೀತಿ ತಲೆ ಎತ್ತಿದೆ ಚಾರ್ಲಿ ಶ್ವಾನದ ಕಟೌಟ್​; ರಕ್ಷಿತ್​ ಶೆಟ್ಟಿ ಸಿನಿಮಾಗೆ ಭರ್ಜರಿ ಪ್ರಚಾರ
Image
21 ನಗರಗಳಲ್ಲಿ ಪ್ರೀಮಿಯರ್​ ಆಗಲಿದೆ ‘777 ಚಾರ್ಲಿ’; ಹೊಸ ದಾಖಲೆ ಬರೆಯಲು ಸಜ್ಜಾದ ರಕ್ಷಿತ್​ ಶೆಟ್ಟಿ ಸಿನಿಮಾ
Image
‘ಬೇರೆ ಭಾಷೆಯಲ್ಲಿ ನಟಿಸೋ ಆಸೆ ಇಲ್ಲ, ಕನ್ನಡದಲ್ಲಿ ಒಳ್ಳೆಯ ಚಿತ್ರ ಮಾಡಿದ್ರೆ ದೇಶಾದ್ಯಂತ ರೀಚ್​ ಆಗತ್ತೆ’: ರಕ್ಷಿತ್​ ಶೆಟ್ಟಿ
Image
ರಶ್ಮಿಕಾ ಮಂದಣ್ಣಗೆ ಖಂಡಿತಾ ಇಷ್ಟ ಆಗಲಿದೆ ರಕ್ಷಿತ್​ ಶೆಟ್ಟಿಯ ‘777 ಚಾರ್ಲಿ’ ಸಿನಿಮಾ; ಕಾರಣ ಏನು?

ಬ್ರೇಕಪ್​ ಬಳಿಕವೂ ರಕ್ಷಿತ್​ ಶೆಟ್ಟಿ ಅವರು ರಶ್ಮಿಕಾ ಮಂದಣ್ಣ ಬಗ್ಗೆ ಒಳ್ಳೆಯ ಭಾವನೆ ಹೊಂದಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಅವರು ಕೆಲವು ಸಂದರ್ಭಗಳಲ್ಲಿ ರಶ್ಮಿಕಾ ಬಗ್ಗೆ ರಕ್ಷಿತ್​ ಮಾತನಾಡಿದ್ದುಂಟು. ಇತ್ತೀಚೆಗೆ ‘777 ಚಾರ್ಲಿ’ ಸಿನಿಮಾದ ಪ್ರಚಾರದ ಸಲುವಾಗಿ ತಮಿಳಿನ ಒಂದು ಯೂಟ್ಯೂಬ್​ ಚಾನೆಲ್​ಗೆ ಅವರು ಸಂದರ್ಶನ ನೀಡುವಾಗಲೂ ಮತ್ತೆ ರಶ್ಮಿಕಾ ಬಗ್ಗೆ ಪ್ರಶ್ನೆ ಎದುರಾಯಿತು. ಅದಕ್ಕೆ ರಕ್ಷಿತ್ ಶೆಟ್ಟಿ ತುಂಬ​ ಕೂಲ್​ ಆಗಿಯೇ ಉತ್ತರಿಸಿದ್ದಾರೆ.

ಇದನ್ನೂ ಓದಿ: ಬದಲಾಯ್ತು ರಕ್ಷಿತ್​ ಶೆಟ್ಟಿ ಗೆಟಪ್​: ‘ನಿಮ್ಮ ಮನು 10 ವರ್ಷಗಳ ನಂತರ’ ಎಂದ ಸಿಂಪಲ್​ ಸ್ಟಾರ್​

‘ನೀವೇ ಕಿರಿಕ್​​ ಪಾರ್ಟಿ ಸಿನಿಮಾದಲ್ಲಿ ಪರಿಚಯಿಸಿದ ಹುಡುಗಿ ಇಂದು ಬಹುಬೇಡಿಕೆಯ ನಟಿಯಾಗಿದ್ದಾರೆ. ಅವರ ಬೆಳವಣಿಗೆ ನೋಡಿದರೆ ಏನು ಅನಿಸುತ್ತದೆ’ ಎಂದು ರಕ್ಷಿತ್​​ಗೆ ಕೇಳಲಾಯಿತು. ‘ರಶ್ಮಿಕಾ ಗೆಲುವನ್ನು ನೋಡಿ ಖುಷಿ ಆಗುತ್ತದೆ. ತಮ್ಮ ಕನಸುಗಳನ್ನು ನನಸು ಮಾಡಿಕೊಂಡಿದ್ದಕ್ಕಾಗಿ ಅವರಿಗೆ ಮೆಚ್ಚುಗೆ ಸೂಚಿಸುತ್ತೇನೆ’ ಎಂದು ರಕ್ಷಿತ್​ ಉತ್ತರ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:34 am, Mon, 6 June 22

ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್