777 Charlie: ‘777 ಚಾರ್ಲಿ’ ಪ್ರಚಾರದ ವೇಳೆ ರಶ್ಮಿಕಾ ಮಂದಣ್ಣ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ರಕ್ಷಿತ್​ ಶೆಟ್ಟಿ

Rakshit Shetty on Rashmika Mandanna: ಬ್ರೇಕಪ್​ ಬಳಿಕವೂ ರಕ್ಷಿತ್​ ಶೆಟ್ಟಿ ಅವರು ರಶ್ಮಿಕಾ ಮಂದಣ್ಣ ಬಗ್ಗೆ ಒಳ್ಳೆಯ ಭಾವನೆ ಹೊಂದಿದ್ದಾರೆ. ಕೆಲವು ಸಂದರ್ಭಗಳಲ್ಲಿ ರಕ್ಷಿತ್​ ನೀಡಿದ ಹೇಳಿಕೆಗಳೇ ಅದಕ್ಕೆ ಸಾಕ್ಷಿ.

777 Charlie: ‘777 ಚಾರ್ಲಿ’ ಪ್ರಚಾರದ ವೇಳೆ ರಶ್ಮಿಕಾ ಮಂದಣ್ಣ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ರಕ್ಷಿತ್​ ಶೆಟ್ಟಿ
ರಕ್ಷಿತ್ ಶೆಟ್ಟಿ - ರಶ್ಮಿಕಾ ಮಂದಣ್ಣ
Follow us
| Updated By: ಮದನ್​ ಕುಮಾರ್​

Updated on:Jun 06, 2022 | 8:34 AM

ನಟ ರಕ್ಷಿತ್​ ಶೆಟ್ಟಿ (Rakshit Shetty) ಅವರು ಹಲವು ಕಾರಣಗಳಿಂದಾಗಿ ಸುದ್ದಿ ಆಗುತ್ತಿದ್ದಾರೆ. ಇಂದು (ಜೂನ್​ 6) ಅವರ ಜನ್ಮದಿನ. ‘ಸಿಂಪಲ್​ ಸ್ಟಾರ್​’ ಹುಟ್ಟುಹಬ್ಬದ ಪ್ರಯುಕ್ತ ಅವರ ಬಗೆಗಿನ ಅನೇಕ ವಿಚಾರಗಳನ್ನು ಫ್ಯಾನ್ಸ್​ ಚರ್ಚಿಸುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ರಕ್ಷಿತ್​ ಶೆಟ್ಟಿ ಅವರು ತುಂಬ ಶ್ರಮಪಟ್ಟು ಮೇಲೆ ಬಂದವರು. ಒಂದೊಂದು ಸಿನಿಮಾದಲ್ಲಿಯೂ ಅವರ ಶ್ರಮ ಕಾಣಿಸುತ್ತದೆ. ಎಲ್ಲ ಬಗೆಯ ಸಿನಿಮಾಗಳನ್ನು ಮಾಡುತ್ತ ಅವರು ಡಿಫರೆಂಟ್​ ಆಗಿ ಗುರುತಿಸಿಕೊಂಡಿದ್ದಾರೆ. ಅನೇಕರಿಗೆ ಅವರು ಅವಕಾಶ ನೀಡಿದ್ದಾರೆ ಎಂಬುದು ಕೂಡ ಗಮನಾರ್ಹ. ಇಂದು ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಿರುವ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಮೊದಲ ಬಾರಿಗೆ ಅವಕಾಶ ನೀಡಿದ್ದೇ ರಕ್ಷಿತ್ ಶೆಟ್ಟಿ. ‘ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ನಟಿಸಿದ ರಶ್ಮಿಕಾಗೆ ದೊಡ್ಡಮಟ್ಟದ ಗೆಲುವು ಸಿಕ್ಕಿತು. ಬಳಿಕ ಅವರು ಪರಭಾಷೆಗೆ ತೆರಳಿ ಸ್ಟಾರ್​ ನಟಿಯಾಗಿ ಬೆಳೆದರು. ಇತ್ತೀಚೆಗೆ ‘777 ಚಾರ್ಲಿ’ (777 Charlie) ಸಿನಿಮಾದ ಪ್ರಮೋಷನ್​ ವೇಳೆ ರಶ್ಮಿಕಾ ಮಂದಣ್ಣ ಬಗ್ಗೆ ಕೇಳಿದ ಪ್ರಶ್ನೆಗೆ ರಕ್ಷಿತ್​ ಶೆಟ್ಟಿ ಉತ್ತರ ನೀಡಿದ್ದಾರೆ.

‘ಕಿರಿಕ್​ ಪಾರ್ಟಿ’ ಸಿನಿಮಾದಲ್ಲಿ ಜೊತೆಯಾಗಿ ಕೆಲಸ ಮಾಡಿದ ಬಳಿಕ ರಕ್ಷಿತ್​ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಅವರ ನಡುವೆ ಪ್ರೀತಿ ಚಿಗುರಿತ್ತು. ಎರಡೂ ಕುಟುಂಬದವರ ಒಪ್ಪಿಗೆ ಮೇರೆಗೆ ಎಂಗೇಜ್​ಮೆಂಟ್​ ಕೂಡ ಅದ್ದೂರಿಯಾಗಿ ನೆರವೇರಿತ್ತು. ಆದರೆ ಇಬ್ಬರ ನಡುವೆ ನಂತರದ ದಿನಗಳಲ್ಲಿ ವೈಮನಸ್ಸು ಮೂಡಿದ್ದರಿಂದ ಆ ಸಂಬಂಧ ಮುರಿದು ಬಿತ್ತು.

ಇದನ್ನೂ ಓದಿ: Rakshit Shetty Birthday: ರಕ್ಷಿತ್​ ಶೆಟ್ಟಿ ಜನ್ಮದಿನವನ್ನು ಇನ್ನಷ್ಟು ಸ್ಪೆಷಲ್​ ಆಗಿಸಿದ ಅಭಿಮಾನಿಗಳು

ಇದನ್ನೂ ಓದಿ
Image
ಸ್ಟಾರ್​ ನಟನ ರೀತಿ ತಲೆ ಎತ್ತಿದೆ ಚಾರ್ಲಿ ಶ್ವಾನದ ಕಟೌಟ್​; ರಕ್ಷಿತ್​ ಶೆಟ್ಟಿ ಸಿನಿಮಾಗೆ ಭರ್ಜರಿ ಪ್ರಚಾರ
Image
21 ನಗರಗಳಲ್ಲಿ ಪ್ರೀಮಿಯರ್​ ಆಗಲಿದೆ ‘777 ಚಾರ್ಲಿ’; ಹೊಸ ದಾಖಲೆ ಬರೆಯಲು ಸಜ್ಜಾದ ರಕ್ಷಿತ್​ ಶೆಟ್ಟಿ ಸಿನಿಮಾ
Image
‘ಬೇರೆ ಭಾಷೆಯಲ್ಲಿ ನಟಿಸೋ ಆಸೆ ಇಲ್ಲ, ಕನ್ನಡದಲ್ಲಿ ಒಳ್ಳೆಯ ಚಿತ್ರ ಮಾಡಿದ್ರೆ ದೇಶಾದ್ಯಂತ ರೀಚ್​ ಆಗತ್ತೆ’: ರಕ್ಷಿತ್​ ಶೆಟ್ಟಿ
Image
ರಶ್ಮಿಕಾ ಮಂದಣ್ಣಗೆ ಖಂಡಿತಾ ಇಷ್ಟ ಆಗಲಿದೆ ರಕ್ಷಿತ್​ ಶೆಟ್ಟಿಯ ‘777 ಚಾರ್ಲಿ’ ಸಿನಿಮಾ; ಕಾರಣ ಏನು?

ಬ್ರೇಕಪ್​ ಬಳಿಕವೂ ರಕ್ಷಿತ್​ ಶೆಟ್ಟಿ ಅವರು ರಶ್ಮಿಕಾ ಮಂದಣ್ಣ ಬಗ್ಗೆ ಒಳ್ಳೆಯ ಭಾವನೆ ಹೊಂದಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಅವರು ಕೆಲವು ಸಂದರ್ಭಗಳಲ್ಲಿ ರಶ್ಮಿಕಾ ಬಗ್ಗೆ ರಕ್ಷಿತ್​ ಮಾತನಾಡಿದ್ದುಂಟು. ಇತ್ತೀಚೆಗೆ ‘777 ಚಾರ್ಲಿ’ ಸಿನಿಮಾದ ಪ್ರಚಾರದ ಸಲುವಾಗಿ ತಮಿಳಿನ ಒಂದು ಯೂಟ್ಯೂಬ್​ ಚಾನೆಲ್​ಗೆ ಅವರು ಸಂದರ್ಶನ ನೀಡುವಾಗಲೂ ಮತ್ತೆ ರಶ್ಮಿಕಾ ಬಗ್ಗೆ ಪ್ರಶ್ನೆ ಎದುರಾಯಿತು. ಅದಕ್ಕೆ ರಕ್ಷಿತ್ ಶೆಟ್ಟಿ ತುಂಬ​ ಕೂಲ್​ ಆಗಿಯೇ ಉತ್ತರಿಸಿದ್ದಾರೆ.

ಇದನ್ನೂ ಓದಿ: ಬದಲಾಯ್ತು ರಕ್ಷಿತ್​ ಶೆಟ್ಟಿ ಗೆಟಪ್​: ‘ನಿಮ್ಮ ಮನು 10 ವರ್ಷಗಳ ನಂತರ’ ಎಂದ ಸಿಂಪಲ್​ ಸ್ಟಾರ್​

‘ನೀವೇ ಕಿರಿಕ್​​ ಪಾರ್ಟಿ ಸಿನಿಮಾದಲ್ಲಿ ಪರಿಚಯಿಸಿದ ಹುಡುಗಿ ಇಂದು ಬಹುಬೇಡಿಕೆಯ ನಟಿಯಾಗಿದ್ದಾರೆ. ಅವರ ಬೆಳವಣಿಗೆ ನೋಡಿದರೆ ಏನು ಅನಿಸುತ್ತದೆ’ ಎಂದು ರಕ್ಷಿತ್​​ಗೆ ಕೇಳಲಾಯಿತು. ‘ರಶ್ಮಿಕಾ ಗೆಲುವನ್ನು ನೋಡಿ ಖುಷಿ ಆಗುತ್ತದೆ. ತಮ್ಮ ಕನಸುಗಳನ್ನು ನನಸು ಮಾಡಿಕೊಂಡಿದ್ದಕ್ಕಾಗಿ ಅವರಿಗೆ ಮೆಚ್ಚುಗೆ ಸೂಚಿಸುತ್ತೇನೆ’ ಎಂದು ರಕ್ಷಿತ್​ ಉತ್ತರ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:34 am, Mon, 6 June 22

ತಾಜಾ ಸುದ್ದಿ
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ