ಈ ಫೋಟೋಗಾಗಿ 36 ವರ್ಷಗಳಿಂದ ಕಾದಿದ್ದ ಸುದೀಪ್​; ಕಿಚ್ಚನ ಬಾಲ್ಯದ ಕನಸು ಈಗ ನನಸಾಯ್ತು

| Updated By: ಮದನ್​ ಕುಮಾರ್​

Updated on: Dec 19, 2021 | 1:10 PM

Kichcha Sudeep | Kapil Dev: 36 ವರ್ಷಗಳ ಬಳಿಕ ಕಪಿಲ್​ ದೇವ್​ ಅವರ ಜೊತೆಯಾಗಿ ನಿಂತು ತೆಗೆಸಿಕೊಂಡಿರುವ ಈ ಫೋಟೋವನ್ನು ಸುದೀಪ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಫೋಟೋಗಾಗಿ 36 ವರ್ಷಗಳಿಂದ ಕಾದಿದ್ದ ಸುದೀಪ್​; ಕಿಚ್ಚನ ಬಾಲ್ಯದ ಕನಸು ಈಗ ನನಸಾಯ್ತು
ಕಿಚ್ಚ ಸುದೀಪ್​, ಕಪಿಲ್​ ದೇವ್
Follow us on

ಕಿಚ್ಚ ಸುದೀಪ್ (Kichcha Sudeep)​ ಅವರಿಗೆ ಸಿನಿಮಾದ ಹಾಗೆಯೇ ಕ್ರಿಕೆಟ್​ ಮೇಲೂ ಆಸಕ್ತಿ ಇದೆ. ಸಿಸಿಎಲ್​ ಪಂದ್ಯಾವಳಿ ಸೇರಿದಂತೆ ಅನೇಕ ಬಾರಿ ಅವರು ಬ್ಯಾಟ್​ ಬೀಸಿದ್ದಾರೆ. 1983ರಲ್ಲಿ ಭಾರತ ಕ್ರಿಕೆಟ್​ ತಂಡ ವಿಶ್ವಕಪ್​ ಗೆದ್ದ ಘಟನೆಯನ್ನು ಆಧರಿಸಿ ‘83’ ಸಿನಿಮಾ (83 Movie) ತಯಾರಾಗಿದೆ. ಆ ಸಿನಿಮಾವನ್ನು ಕರ್ನಾಟಕದಲ್ಲಿ ಕಿಚ್ಚ ಸುದೀಪ್​ ಪ್ರಸ್ತುತಪಡಿಸುತ್ತಿದ್ದಾರೆ. ‘83’ ಚಿತ್ರದಲ್ಲಿ ಕಪಿಲ್​ ದೇವ್​ (Kapil Dev) ಪಾತ್ರವನ್ನು ರಣವೀರ್​ ಸಿಂಗ್​ ಮಾಡಿದ್ದಾರೆ. ಕಪಿಲ್​ ದೇವ್​ ಎಂದರೆ ಸುದೀಪ್​ ಅವರಿಗೆ ಸಖತ್​ ಅಭಿಮಾನ. ಅವರ ಜತೆ ಫೋಟೋ ತೆಗೆದುಕೊಳ್ಳಬೇಕು ಎಂಬ ಆಸೆ ಬಾಲ್ಯದಲ್ಲೇ ಸುದೀಪ್​ ಅವರ ಮನದಲ್ಲಿ ಚಿಗುರಿತ್ತು. ಆದರೆ ಸಾಧ್ಯವಾಗಿರಲಿಲ್ಲ. 36 ವರ್ಷಗಳ ಬಳಿಕ ಆ ಕ್ಷಣ ಬಂತು ಎಂದು ಸುದೀಪ್​ ಹೇಳಿದ್ದಾರೆ.

‘83’ ಸಿನಿಮಾ ಕನ್ನಡಕ್ಕೂ ಡಬ್​ ಆಗಿ ತೆರೆಕಾಣುತ್ತಿದೆ. ಶನಿವಾರ (ಡಿ.18) ಬೆಂಗಳೂರಿನಲ್ಲಿ ಈ ಚಿತ್ರದ ಸುದ್ದಿಗೋಷ್ಠಿ ನಡೆಸಲಾಯಿತು. ಅದರಲ್ಲಿ ಕಪಿಲ್​ ದೇವ್​, ಸುದೀಪ್​, ನಿರ್ದೇಶಕ ಕಬೀರ್​ ಖಾನ್​, ರಣವೀರ್​ ಸಿಂಗ್​ ಮುಂತಾದವರು ಪಾಲ್ಗೊಂಡಿದ್ದರು. ಈ ವೇಳೆ ತಮ್ಮ ಬಾಲ್ಯದಲ್ಲಿ ನಡೆದ ಘಟನೆಯನ್ನು ಸುದೀಪ್​ ವಿವರಿಸಿದರು.

‘ತುಂಬ ವರ್ಷಗಳ ಹಿಂದೆ. 1987-88 ಸಮಯ. ಕಪಿಲ್​ ದೇವ್​ ಅವರನ್ನು ನೋಡೋಕೆ ನಮ್ಮನ್ನು ಕರೆದುಕೊಂಡು ಹೋಗಿದ್ರು. ನಾನಾಗ ತುಂಬ ಚಿಕ್ಕವನು. ಅಂದು ಕಪಿಲ್​ ದೇವ್​ ಒಬ್ಬರೇ ನಡೆದುಕೊಂಡು ಹೋಗುತ್ತಿದ್ದರು. ಓಡಿಹೋಗಿ ನಾನು ಅವರ ಕೋಟ್​ ಎಳೆದೆ. ಆಗ ನನ್ನ ಬಳಿ ಒಂದು ಚಿಕ್ಕ ಕ್ಯಾಮೆರಾ ಇತ್ತು. ನಿಮ್ಮ ಜತೆ ಫೋಟೋ ಬೇಕು ಅಂತ ಹೇಳಿದೆ. ಫೋಟೋ ತೆಗೆಯಲು ನನ್ನ ಅಕ್ಕ ನನ್ನ ಹಿಂದೆ ಓಡಿ ಬಂದರು. ಆದರೆ ದುರದೃಷ್ಟ ಎಂದರೆ, ಕ್ಯಾಮೆರಾ ವರ್ಕ್​ ಆಗುತ್ತಾ ಇರಲಿಲ್ಲ. ನಾನು ಅಳಲು ಆರಂಭಿಸಿದೆ. ಅಂದು ಅವರು ಕಣ್ಣೀರು ಒರೆಸಿ, ನನಗೆ ಸಮಾಧಾನ ಮಾಡಿದ್ದರು. ಮುಂದೊಂದು ದಿನ ನಾವು ಜೊತೆಯಾಗಿ ಫೋಟೋ ತೆಗೆದುಕೊಳ್ಳೋಣ ಅಂತ ಹೇಳಿದ್ರು. ಆ ದಿನ ಈಗ ಬಂದಿದೆ’ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.

36 ವರ್ಷಗಳ ಬಳಿಕ ಕಪಿಲ್​ ದೇವ್​ ಅವರ ಜೊತೆಯಾಗಿ ನಿಂತು ತೆಗೆಸಿಕೊಂಡಿರುವ ಈ ಫೋಟೋವನ್ನು ಸುದೀಪ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘1983ರ ವಿಶ್ವಕಪ್​ ಬಗ್ಗೆ ಮಾತನಾಡಲು ಹಲವು ವಿಚಾರಗಳಿವೆ. ಅದರಲ್ಲೊಂದು ಕಥೆ ಇದೆ ಅಂತ ಒಂದು ತಂಡ ನಂಬಿದೆ. ಆ ಕಥೆ ಮಹತ್ವದ್ದಾಗಲಿದೆ ಎಂಬ ನಂಬಿಕೆ ಆ ತಂಡಕ್ಕೆ ಇದೆ. ಆ ನಂಬಿಕೆಯೇ ನನಗೆ ಒಂದು ಅದ್ಭುತ ಕಥೆಯಂತೆ ಕಾಣಿಸುತ್ತಿದೆ. ಒಬ್ಬ ಕ್ರಿಕೆಟ್​ ಪ್ರೇಮಿಯಾಗಿ, ಭಾರತೀಯನಾಗಿ ಥಿಯೇಟರ್​ನಲ್ಲಿ ಈ ಚಿತ್ರವನ್ನು ನೋಡಿ ಎಂಜಾಯ್​ ಮಾಡಲು ಬಯಸುತ್ತೇನೆ. ಇಂಥ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ನಿರ್ದೇಶಕ ಕಬೀರ್​ ಖಾನ್​ ಮತ್ತು ಇಡೀ ತಂಡಕ್ಕೆ ನನ್ನ ಅಭಿನಂದನೆಗಳು. ಭಾರತ ವಿಶ್ವಕಪ್​ ಗೆದ್ದಾಗ ಎಷ್ಟು ಖುಷಿ ಆಗಿತ್ತೋ ಅದೇ ರೀತಿ ಈ ಸಿನಿಮಾ ತೆರೆ​ಕಾಣುತ್ತಿರುವುದಕ್ಕೆ ಖುಷಿ ಆಗುತ್ತಿದೆ’ ಎಂದು ಸುದೀಪ್​ ಹೇಳಿದ್ದಾರೆ.

ಇದನ್ನೂ ಓದಿ:

‘83’ ಸಿನಿಮಾ ವೇದಿಕೆಯಲ್ಲಿ ರಣವೀರ್​ ಸಿಂಗ್​ಗೆ ಕನ್ನಡ ಡೈಲಾಗ್​ ಹೇಳಿಕೊಟ್ಟ ಕಿಚ್ಚ ಸುದೀಪ್​

ಒಂದೇ ವೇದಿಕೆ ಮೇಲೆ ಸುದೀಪ್​, ರಣವೀರ್​, ಕಪಿಲ್​ ದೇವ್​; ‘83’ ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್​ ಮಾಡಿ

Published On - 1:07 pm, Sun, 19 December 21