AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘9 ಸುಳ್ಳು ಕಥೆಗಳು’ ಹೇಳ್ತಾರೆ 100ಕ್ಕೂ ಹೆಚ್ಚು ಕಲಾವಿದರು; ಇದರಲ್ಲಿದೆ ಹಲವು ವಿಶೇಷ

9 Sullu Kathegalu: ‘9 ಸುಳ್ಳು ಕಥೆಗಳು’ ಚಿತ್ರದ ಟ್ರೇಲರ್ ಮತ್ತು ಹಾಡುಗಳನ್ನು ಇತ್ತೀಚೆಗೆ​ ಬಿಡುಗಡೆಗೊಳಿಸಲಾಗಿದೆ. ಆ ಮೂಲಕ ಸಿನಿಪ್ರಿಯರಲ್ಲಿ ಕೌತುಕ ಮೂಡಿಸುವ ಪ್ರಯತ್ನ ಮಾಡಲಾಗಿದೆ.

‘9 ಸುಳ್ಳು ಕಥೆಗಳು’ ಹೇಳ್ತಾರೆ 100ಕ್ಕೂ ಹೆಚ್ಚು ಕಲಾವಿದರು; ಇದರಲ್ಲಿದೆ ಹಲವು ವಿಶೇಷ
‘9 ಸುಳ್ಳು ಕಥೆಗಳು’ ಸಿನಿಮಾ ತಂಡ
TV9 Web
| Edited By: |

Updated on: Jul 27, 2022 | 7:15 AM

Share

ಚಿತ್ರರಂಗದಲ್ಲಿ ಒಂದಿಲ್ಲೊಂದು ಪ್ರಯೋಗ ನಡೆಯುತ್ತಲೇ ಇರುತ್ತದೆ. ವಿಶೇಷವಾದ ಶೀರ್ಷಿಕೆ ಮೂಲಕ ಗಮನ ಸೆಳೆಯುವ ಪ್ರಯತ್ನವೂ ಆಗುತ್ತಿರುತ್ತದೆ. ಆ ಕಾರಣದಿಂದ ‘9 ಸುಳ್ಳು ಕಥೆಗಳು’ (9 Sullu Kathegalu) ಸಿನಿಮಾ ಕೌತುಕ ಮೂಡಿಸಿದೆ. ಈ ಚಿತ್ರದ ಟ್ರೇಲರ್​ ಬಿಡುಗಡೆ ಆಗಿದೆ. 100ಕ್ಕೂ ಅಧಿಕ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ ಎಂಬುದು ವಿಶೇಷ. ಟ್ರೇಲರ್​ಗೆ ಶಿವರಾಜ್​ಕುಮಾರ್​ (Shivarajkumar) ಅವರು ಧ್ವನಿ ನೀಡಿದ್ದಾರೆ. ಚಿತ್ರದ ಹಾಡೊಂದನ್ನು ರಿಷಬ್​ ಶೆಟ್ಟಿ (Rishab Shetty) ಹಾಡಿದ್ದಾರೆ. ಹೀಗೆ ಅನೇಕ ವಿಶೇಷತೆಗಳನ್ನು ಇಟ್ಟುಕೊಂಡು ‘9 ಸುಳ್ಳು ಕಥೆಗಳು’ ಸಿನಿಮಾ ಬರುತ್ತಿದೆ. ಪ್ರಮೋದ್ ಶೆಟ್ಟಿ, ವಿನಾಯಕ ಜೋಶಿ, ಕೃಷ್ಣ ಹೆಬ್ಬಾಳೆ, ಸಕೃತ ವಾಗ್ಳೆ, ಶ್ರೀನಿವಾಸ್​ ಪ್ರಭು, ಸುನೇತ್ರಾ ಪಂಡಿತ್, ಸುಪ್ರಿತಾ ಶೆಟ್ಟಿ, ಸುಂದರ್ ವೀಣಾ, ಕರಿಸುಬ್ಬು, ನಂದಗೋಪಾಲ್, ಲಕ್ಷ್ಮೀ ಚಂದ್ರಶೇಖರ್ ಮುಂತಾದ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.

‘9 ಸುಳ್ಳು ಕಥೆಗಳು’ ಸಿನಿಮಾಗೆ ಮಂಜುನಾಥ್​ ಮುನಿಯಪ್ಪ ನಿರ್ದೇಶನ ಮಾಡಿದ್ದಾರೆ. ನಿರ್ಮಾಣ ಕೂಡ ಅವರದ್ದೇ. ರಂಗಭೂಮಿಯಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ಅವರಿಗೆ ಇದು ಮೊದಲ ಸಿನಿಮಾ ಪ್ರಯತ್ನ. ‘ಇದೊಂದು ನೈಜ ಘಟನೆ ಆಧಾರಿತ ಚಿತ್ರ. ನವರಸಗಳನ್ನು ಆಧರಿಸಿ ಈ ಚಿತ್ರದ ಕಥೆಯನ್ನು ಸಿದ್ಧ ಮಾಡಿಕೊಂಡೆ‌‌. ನಂತರ ನಿರ್ಮಾಪಕರಿಗೆ ಹುಡುಕಾಟ ನಡೆಸಿದೆ. ಆದರೆ ಯಾರೂ ಸಿಗಲಿಲ್ಲ. ನನ್ನ ಸ್ನೇಹಿತ ಸೂರ್ಯ ನಾರಾಯಣ್ ಮೊದಲು ದೊಡ್ಡ ಮೊತ್ತದ ಹಣ ಕೊಟ್ಟು ಈ ಚಿತ್ರಕ್ಕೆ ಚಾಲನೆ ನೀಡಿದರು. ನಂತರ ಸಾಕಷ್ಟು ಗೆಳೆಯರು ನನ್ನ ಜೊತೆಯಾದರು’ ಎಂದು ಸಿನಿಮಾ ಸೆಟ್ಟೇರಿದ ಬಗೆಯನ್ನು ನೆನಪಿಸಿಕೊಂಡಿದ್ದಾರೆ ಮಂಜುನಾಥ್​ ಮುನಿಯಪ್ಪ.

ಈ ಸಿನಿಮಾದ 6 ಗೀತೆಗಳಿಗೆ ಪ್ರವೀಣ್-ಪ್ರದೀಪ್ ಸಂಗೀತ ನಿರ್ದೇಶನ ಮಾಡಿದ್ದಾರೆ. ವಿಕ್ರಮ್ ವಸಿಷ್ಠ, ಸತೀಶ್ ಬೆಲ್ಲೂರು ಹಾಗೂ ಕಿರಣ್ ವಿಪ್ರ ಸಾಹಿತ್ಯ ಬರೆದಿದ್ದಾರೆ. ಸಂತ ಶಿಶುನಾಳ ಶರೀಫರ ಒಂದು ಹಾಡನ್ನೂ ಬಳಸಿಕೊಳ್ಳಲಾಗಿದೆ. ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್, ವಾರಿಜಾಶ್ರೀ, ಶಶಿಧರ್ ಕೋಟೆ, ಚಿಂತನ್ ವಿಕಾಸ್ ಮತ್ತು ರಿಷಬ್​ ಶೆಟ್ಟಿ ಅವರು ಹಾಡುಗಳಿಗೆ ಧ್ವನಿ ನೀಡಿದ್ದಾರೆ.

ಇದನ್ನೂ ಓದಿ
Image
‘ಇನ್ಮುಂದೆ ಇಂಥ ಸಿನಿಮಾ ಮಾಡಲ್ಲ’: ರಶ್ಮಿಕಾ ಜತೆ ನಟಿಸಿದ ಬಳಿಕ ಮಹತ್ವದ ನಿರ್ಧಾರ ತಿಳಿಸಿದ ದುಲ್ಕರ್​ ಸಲ್ಮಾನ್​
Image
Genelia Dsouza: ಕಿಚ್ಚ ಸುದೀಪ್​ ಚಿತ್ರಕ್ಕೆ ಬೆಂಬಲ ನೀಡಲು ಗಂಡನ ಜೊತೆ ಬಂದ ಜೆನಿಲಿಯಾ ಡಿಸೋಜಾ
Image
‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಕತ್ರಿನಾ ಜಪ ಮಾಡಿದ ಸಲ್ಮಾನ್​ ಖಾನ್​; ಕಾರಣ ಏನು?
Image
Salman Khan: ‘ವಿಕ್ರಾಂತ್​ ರೋಣ’ ವೇದಿಕೆಯಲ್ಲಿ ಸುದೀಪ್​-ಸಲ್ಮಾನ್​​; ಕಿಚ್ಚನ ಜತೆಗಿನ ಬಾಂಧವ್ಯದ ಬಗ್ಗೆ ಸಲ್ಲು ಮಾತು

ನಟ ವಿನಾಯಕ ಜೋಶಿ ಅವರು ಈ ಚಿತ್ರದಲ್ಲಿ ಸಾಹಿತ್ಯ ಪ್ರೇಮಿಯಾಗಿ ಕಾಣಿಸಿಕೊಂಡಿದ್ದಾರೆ. ಪರಮೇಶ್​ ಸಿ.ಎಂ. ಛಾಯಾಗ್ರಹಣ ಹಾಗೂ ಶ್ರೀಕಾಂತ್ ಸಂಕಲನ ಮಾಡಿದ್ದಾರೆ. ಇತ್ತೀಚೆಗೆ ‘9 ಸುಳ್ಳು ಕಥೆಗಳು’ ಚಿತ್ರದ ಹಾಡು ಮತ್ತು ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ಆ ಮೂಲಕ ಸಿನಿಪ್ರಿಯರಲ್ಲಿ ಕೌತುಕ ಮೂಡಿಸುವ ಪ್ರಯತ್ನ ಮಾಡಲಾಗಿದೆ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ