AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hamsalekha: ಹಂಸಲೇಖ ವಿವಾದಿತ ಹೇಳಿಕೆ ಪ್ರಕರಣ; ಪೇಜಾವರ ಶ್ರೀ ಶಿಷ್ಯರಿಂದ ದೂರು ದಾಖಲು

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ದಲಿತರ ಮನೆಯಲ್ಲಿ ವಾಸ್ತವ್ಯದ ಕುರಿತಂತೆ ನೀಡಿದ್ದ ಹೇಳಿಕೆಗೆ ಸಂಬಂಧಪಟ್ಟಂತೆ, ಬೆಂಗಳೂರಿನಲ್ಲಿ ದೂರು ದಾಖಲಾಗಿದೆ.

Hamsalekha: ಹಂಸಲೇಖ ವಿವಾದಿತ ಹೇಳಿಕೆ ಪ್ರಕರಣ; ಪೇಜಾವರ ಶ್ರೀ ಶಿಷ್ಯರಿಂದ ದೂರು ದಾಖಲು
ಹಂಸಲೇಖ
TV9 Web
| Updated By: shivaprasad.hs|

Updated on: Nov 16, 2021 | 1:37 PM

Share

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಇತ್ತೀಚೆಗೆ ಮಾತನಾಡುತ್ತಾ ದಲಿತರ ಮನೆಯಲ್ಲಿ ಸವರ್ಣೀಯರ ವಾಸ್ತವ್ಯದ ಕುರಿತಂತೆ ಹೇಳಿಕೆ ನೀಡಿದ್ದರು. ಇದು ಪರ ಹಾಗೂ ವಿರೋಧದ ಚರ್ಚೆಗೆ ಕಾರಣವಾಗಿತ್ತು. ಹೇಳಿಕೆ ವಿವಾದದ ಸ್ವರೂಪ ಪಡೆದುಕೊಳ್ಳುತ್ತಿರುವಂತೆಯೇ ಅವರು ಕ್ಷಮೆ ಯಾಚಿಸಿದ್ದರು. ಇದೀಗ ಹಂಸಲೇಖ ಹೇಳಿಕೆಯ ವಿರುದ್ಧ ದೂರು ದಾಖಲಾಗಿದೆ. ಅವರ ಹೇಳಿಕೆಗೆ ಪೇಜಾವರ ಶ್ರೀಗಳ ಶಿಷ್ಯರಿಂದ ಆಕ್ಷೇಪ ವ್ಯಕ್ತವಾಗಿದ್ದು, ಹನುಮಂತನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಇಂದು (ನವೆಂಬರ್ 16) ಕೃಷ್ಣರಾಜ ಎಂಬುವವರು ಹಂಸಲೇಖ ವಿರುದ್ಧ ದೂರು ನೀಡಿದ್ಧಾರೆ.

ಪ್ರಕರಣವೇನು? ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹಂಸಲೇಖ ಪೇಜಾವರ ಶ್ರೀಗಳ ಕುರಿತು ಹೇಳಿಕೆ ನೀಡಿದ್ದರು. ಮೇಲುಜಾತಿ ಹಾಗೂ ಕೀಳುಜಾತಿ, ಜಾತಿ ತಾರತಮ್ಯ, ಜಾತಿ ಪಿಡುಗು ವಿಚಾರವಾಗಿ ಮಾತನಾಡುತ್ತಾ ಅವರು ಪ್ರಯೋಗಿಸಿದ್ದ ಪದಗಳು ವಿವಾದಕ್ಕೆ ಕಾರಣವಾಗಿತ್ತು. ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಮಾತನಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವಿವಾದ ಹುಟ್ಟುಹಾಕಿತ್ತು.

ಕ್ಷಮೆಯಾಚಿಸಿದ ಹಂಸಲೇಖ: ಹೇಳಿಕೆ ವಿವಾದ ಪಡೆಯುತ್ತಿದ್ದಂತೆಯೇ ಕ್ಷಮೆಯಾಚಿಸಿದ್ದ ಹಂಸಲೇಖ, ‘‘ಎಲ್ಲಾ ಮಾತುಗಳಿಗೂ ಅದು ವೇದಿಕೆಯಲ್ಲ. ಆ ವೇದಿಕೆಯಲ್ಲಿ ನುಡಿದರೆ ಮುತ್ತಿನಹಾರದಂತಿರಬೇಕು ಎಂದು ಇರಬೇಕಿತ್ತು. ಆದರೆ, ತಪ್ಪಾಗಿದೆ. ಅಸ್ಪ್ರಶ್ಯತೆ ಎಂಬುದು ನಮ್ಮ ದೇಶಕ್ಕೆ ಅಂಟಿದ ಶಾಪ. ಈ ಅನಿಷ್ಠವನ್ನು ತೊಡೆದು ಹಾಕುವುದಕ್ಕೆ ಪೇಜಾವರರಂಥ ಗುರುಹಿರಿಯರು ಅಪಾರ ಪ್ರಯತ್ನ ನಡೆಸುತ್ತಿದ್ದಾರೆ. ಅದರ ಬಗ್ಗೆ ನನಗೆ ಆ ಬಗ್ಗೆ ಅಪಾರ ಗೌರವವಿದೆ ಎಂದು ಹೇಳಿದ್ದರು.

ನಾನು ಒಬ್ಬ ಸಂಗೀತಗಾರ. ನಮಗ್ಯಾಕೆ ಟ್ರೋಲು, ಕಂಟ್ರೋಲ್ ಆಗಿರುವುದು ನಮ್ಮ ಕೆಲಸ. ನನಗೆ ಯಾರಿಗೂ ನೋವು ಕೊಡಲು ಇಷ್ಟವಿಲ್ಲ. ನನ್ನ ಸಂಗೀತದಂತೆ ನನ್ನ ಮಾತು, ಬದುಕು ಕೂಡ ಎಲ್ಲರಿಗೂ ಸುಖ ಕೊಡಬೇಕು. ಆದರೆ, ಎಲ್ಲಾ ಅನಿಷ್ಠಗಳನ್ನು ತೊಡೆದು ಹಾಕುವ ದಿಸೆಯಲ್ಲಿ ನನ್ನ ಪಾತ್ರ ಯಾವುದರ ಮೂಲಕ ಇದ್ದರೂ ಅದನ್ನು ಮಾಡಿಯೇ ಮಾಡುತ್ತೇನೆ ಎಂದು ಅವರು ನುಡಿದಿದ್ದರು. ಇದೀಗ ಅವರ ಹೇಳಿಕೆಯ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಇದನ್ನೂ ಓದಿ:

ಪ್ರಚಾರಕ್ಕಾಗಿ ಜನ ಹೀಗೆ ಮಾಡ್ತಾರೆ; ಶಿಶುಪಾಲನಿಗೆ ಕೃಷ್ಣನೇ ಶಾಸ್ತಿ ಮಾಡಿದ್ದ -ಹಂಸಲೇಖ ಟೀಕೆಗೆ ವಿಶ್ವಪ್ರಸನ್ನ ತೀರ್ಥಶ್ರೀ ಉತ್ತರ

Hamsalekha: ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ; ಕ್ಷಮೆ ಕೋರಿದ ಹಂಸಲೇಖ

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ