AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನಲ್ಲಿ ‘ಭಜರಂಗಿ’ ಹರ್ಷ; ಟೈಗರ್ ಶ್ರಾಫ್ ಚಿತ್ರದ ಖಡಕ್ ಪೋಸ್ಟರ್ ರಿಲೀಸ್

ಸದ್ಯ ರಿಲೀಸ್ ಆಗಿರೋ ಟೈಗರ್ ಶ್ರಾಫ್ ಪೋಸ್ಟರ್ ಗಮನ ಸೆಳೆದಿದೆ. ಟೈಗರ್ ಶ್ರಾಫ್ ಅವರು ಕೈಯಲ್ಲಿ ಮಚ್ಚು ಹಿಡಿದು ಕಮೋಡ್ ಮೇಲೆ ಕುಳಿತಿದ್ದಾರೆ. ಪೋಸ್ಟರ್​​ನಲ್ಲಿ ‘ಬಾಘಿ’ ಎಂದು ಬರೆಯಲಾಗಿದ್ದು, ಗೋಡೆಯ ಮೇಲೆ ದೊಡ್ಡದಾಗಿ ನಾಲ್ಕು ಎಂದಿದೆ.

ಬಾಲಿವುಡ್​ನಲ್ಲಿ ‘ಭಜರಂಗಿ’ ಹರ್ಷ; ಟೈಗರ್ ಶ್ರಾಫ್ ಚಿತ್ರದ ಖಡಕ್ ಪೋಸ್ಟರ್ ರಿಲೀಸ್
ಟೈಗರ್ ಶ್ರಾಫ್-ಹರ್ಷ
Follow us
ರಾಜೇಶ್ ದುಗ್ಗುಮನೆ
|

Updated on: Nov 18, 2024 | 1:07 PM

ನಿರ್ದೇಶಕ ಎ.ಹರ್ಷ ಅವರು ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಶಿವರಾಜ್​ಕುಮಾರ್ ಜೊತೆ ಕೆಲವು ಸಿನಿಮಾಗಳನ್ನು ಮಾಡಿದ್ದಾರೆ. ಈಗ ಅವರು ಬಾಲಿವುಡ್​ಗೆ ಕಾಲಿಟ್ಟಿದ್ದಾರೆ. ಅಲ್ಲಿ ಸಿನಿಮಾ ಮಾಡುವ ಕಮಿಟ್​ಮೆಂಟ್​ ತೆಗೆದುಕೊಂಡಿದ್ದಾರೆ. ಟೈಗರ್ ಶ್ರಾಫ್ ನಟನೆಯ ‘ಬಾಘಿ 4’ ಚಿತ್ರಕ್ಕೆ ಹರ್ಷ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಆಗಿದೆ.

ಬಾಲಿವುಡ್​ನ ಯಶಸ್ವಿ ಫ್ರಾಂಚೈಸ್​ಗಳಲ್ಲಿ ‘ಬಾಘಿ’ ಕೂಡ ಒಂದು. ಈ ಸರಣಿಯಲ್ಲಿ ಮೊದಲೆರಡು ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಹಿಟ್ ಆದರೆ, ‘ಬಾಘಿ 3 ವಿಮರ್ಶೆಯಲ್ಲಿ ಸೋತಿತ್ತು. ಆದರೆ ಗಳಿಕೆ ಉತ್ತಮವಾಗಿಯೇ ಆಗಿತ್ತು. ಈಗ ಇದೇ ಹುಮ್ಮಸ್ಸಲ್ಲಿ ಸಾಜಿದ್ ನಾಡಿಯಾದ್ವಾಲಾ ಅವರು ಈ ಸರಣಿಯಲ್ಲಿ ನಾಲ್ಕನೇ ಸಿನಿಮಾ ಮಾಡುತ್ತಿದ್ದಾರೆ. ಇದಕ್ಕೆ ಹರ್ಷ ಅವರ ನಿರ್ದೇಶನ ಇರಲಿದೆ ಅನ್ನೋದು ವಿಶೇಷ.

2007ರಲ್ಲಿ ರಿಲೀಸ್ ಆದ ‘ಗೆಳೆಯ’ ಸಿನಿಮಾ ಮೂಲಕ ನಿರ್ದೇಶನ ಆರಂಭಿಸಿದವರು ಹರ್ಷ. ಆ ಬಳಿಕ ‘ಬಿರುಗಾಳಿ’, ‘ಚಿಂಗಾರಿ’, ರೀತಿಯ ಚಿತ್ರ ಮಾಡಿದರು. 2013ರಲ್ಲಿ ಶಿವರಾಜ್​ಕುಮಾರ್ ಜೊತೆ ‘ಭಜರಂಗಿ’ ಸಿನಿಮಾ ಮಾಡಿ ದೊಡ್ಡ ಗೆಲುವು ಕಂಡರು. ‘ವಜ್ರಕಾಯ’, ‘ಅಂಜನೀ ಪುತ್ರ’, ‘ಭಜರಂಗಿ 2’, ‘ವೇದ’ ರೀತಿಯ ಸಿನಿಮಾನ ಅವರು ನಿರ್ದೇಶನ ಮಾಡಿದ್ದಾರೆ.

ಈ ವರ್ಷ ‘ಭೀಮ’ ಹೆಸರಿನ ತೆಲುಗು ಸಿನಿಮಾ ನಿರ್ದೇಶನ ಮಾಡಿದರು ಹರ್ಷ. ಈ ವೇಳೆ ಟೈಗರ್ ಶ್ರಾಫ್ ಭೇಟಿ ಆಗಿತ್ತು. ಆಗ ಟೈಗರ್​ಗೆ ಹರ್ಷ ಅವರ ಕೆಲಸಗಳ ಬಗ್ಗೆ ತಿಳಿದು ಇಂಪ್ರೆಸ್ ಆಗಿದ್ದಾರೆ ಎನ್ನುತ್ತಿವೆ ಮೂಲಗಳು. ಕಥೆ ನಿರ್ಮಾಣ ಸಂಸ್ಥೆಯವರದ್ದೇ ಆಗಿದ್ದು, ಹರ್ಷ ನಿರ್ದೇಶನ ಮಾತ್ರ ಮಾಡಲಿದ್ದಾರೆ. ಇದಕ್ಕಾಗಿ ಅವರು ದೊಡ್ಡ ಸಂಭಾವನೆ ಕೂಡ ಪಡೆಯುತ್ತಿದ್ದಾರೆ. ಇಂದಿನಿಂದ (ನವೆಂಬರ್ 18) ಮುಂಬೈನಲ್ಲಿ ಶೂಟಿಂಗ್ ಆರಂಭ ಆಗಿದೆ ಅನ್ನೋದು ವಿಶೇಷ.

ಇದನ್ನೂ ಓದಿ: ದಿನ ಕಳೆದಂತೆ ಹೆಚ್ಚಿತು ‘ಭೈರತಿ ರಣಗಲ್’ ಕಲೆಕ್ಷನ್; ಇಲ್ಲಿದೆ ಮೂರು ದಿನಗಳ ಗಳಿಕೆ ಲೆಕ್ಕ

ಸದ್ಯ ರಿಲೀಸ್ ಆಗಿರೋ ಟೈಗರ್ ಶ್ರಾಫ್ ಪೋಸ್ಟರ್ ಗಮನ ಸೆಳೆದಿದೆ. ಟೈಗರ್ ಶ್ರಾಫ್ ಅವರು ಕೈಯಲ್ಲಿ ಮಚ್ಚು ಹಿಡಿದು ಕಮೋಡ್ ಮೇಲೆ ಕುಳಿತಿದ್ದಾರೆ. ಪೋಸ್ಟರ್​​ನಲ್ಲಿ ‘ಬಾಘಿ’ ಎಂದು ಬರೆಯಲಾಗಿದ್ದು, ಗೋಡೆಯ ಮೇಲೆ ದೊಡ್ಡದಾಗಿ ನಾಲ್ಕು ಎಂದಿದೆ. ಗೋಡೆಗಳ ಮೇಲೆ, ಕಮೋಡ್ ಮೇಲೆ, ಮಚ್ಚಿನ ಮೇಲೆ ರಕ್ತವಿದೆ. ಈ ಚಿತ್ರ ಮುಂದಿನ ಸೆಪ್ಟೆಂಬರ್​ನಲ್ಲಿ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ