AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೀಮ’ ಚಿತ್ರದಿಂದ ಇತ್ತೀಚೆಗೆ ಮುಚ್ಚಲ್ಪಟ್ಟ 18 ಥಿಯೇಟರ್​ಗಳಿಗೆ ಮರುಜೀವ

ದುನಿಯಾ ವಿಜಯ್ ಅವರು ನಿರ್ದೇಶನದಲ್ಲಿ ಮೂಡಿ ಬಂದ ಮೊದಲ ಸಿನಿಮಾ ‘ಸಲಗ’ ಹಿಟ್ ಆಯಿತು. ಆ ಬಳಿಕ ಅವರು ನಿರ್ದೇಶನ ಮಾಡಿದ ಎರಡನೇ ಸಿನಿಮಾ ಎಂದರೆ ಅದು ‘ಭೀಮ’. ಈ ಸಿನಿಮಾ ಕೂಡ ರೌಡಿಸಂ ಬಗ್ಗೆ ಇರಲಿದೆ. ಈ ಸಿನಿಮಾ ಬಗ್ಗೆ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

‘ಭೀಮ’ ಚಿತ್ರದಿಂದ ಇತ್ತೀಚೆಗೆ ಮುಚ್ಚಲ್ಪಟ್ಟ 18 ಥಿಯೇಟರ್​ಗಳಿಗೆ ಮರುಜೀವ
ದುನಿಯಾ ವಿಜಯ್
ರಾಜೇಶ್ ದುಗ್ಗುಮನೆ
|

Updated on: Jul 27, 2024 | 2:39 PM

Share

ಚುನಾವಣೆ, ಐಪಿಎಲ್ ಕಾರಣದಿಂದ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಸಿನಿಮಾಗಳು ರಿಲೀಸ್ ಆಗಿರಲಿಲ್ಲ. ಈಗ ಚಿತ್ರರಂಗಕ್ಕೆ ಮತ್ತೆ ಕಳೆ ಬರುತ್ತಿದೆ. ದುನಿಯಾ ವಿಜಯ್ ನಟನೆಯ ‘ಭೀಮ’ ಸಿನಿಮಾ ಆಗಸ್ಟ್ 9ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಕರ್ನಾಟಕದಾದ್ಯಂತ 400ಕ್ಕೂ ಅಧಿಕ ಥಿಯೇಟರ್​ಗಳಲ್ಲಿ ರಿಲೀಸ್ ಆಗಲಿದೆ. ವಿಶೇಷ ಎಂದರೆ ಇತ್ತೀಚೆಗೆ ಮುಚ್ಚಲ್ಪಟ್ಟ 18 ಥಿಯೇಟರ್​ಗಳು ಈಗ ಮರುಜೀವ ಪಡೆಯುತ್ತಿವೆ.

ದುನಿಯಾ ವಿಜಯ್ ಅವರು ನಿರ್ದೇಶನದಲ್ಲಿ ಮೂಡಿ ಬಂದ ಮೊದಲ ಸಿನಿಮಾ ‘ಸಲಗ’ ಹಿಟ್ ಆಯಿತು. ಆ ಬಳಿಕ ಅವರು ನಿರ್ದೇಶನ ಮಾಡಿದ ಎರಡನೇ ಸಿನಿಮಾ ಎಂದರೆ ಅದು ‘ಭೀಮ’. ಈ ಸಿನಿಮಾ ಕೂಡ ರೌಡಿಸಂ ಬಗ್ಗೆ ಇರಲಿದೆ. ಈ ಸಿನಿಮಾ ಬಗ್ಗೆ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದ ನಿರ್ಮಾಪಕ ಜಗದೀಶ್ ಗೌಡ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ಸಿಕ್ಕಿದೆ. ‘ನಾನು ಸಣ್ಣ ವಯಸ್ಸಿನಲ್ಲಿದ್ದಾಗ ಬಿ+, ಸಿ+ ಸ್ಟುಡೆಂಟ್. ನಾನು ಎ+ ತೆಗೆದುಕೊಳ್ಳಬೇಕು ಎಂದು ನನ್ನ ತಂದೆ ನಿರೀಕ್ಷಿಸುತ್ತಿದ್ದರು. ಕೊನೆಗೂ ದುನಿಯಾ ವಿಜಯ್ ಅವರು ‘ಎ’ ಪ್ರಮಾಣಪತ್ರ ಕೊಡಿಸಿದ್ದಾರೆ. ಅವರ ಈ ಮೊದಲ ಚಿತ್ರ ಸಲಗ ಕೂಡ ಎ ಸರ್ಟಿಫಿಕೇಟ್ ಆಗಿತ್ತು. ಈ ಸಿನಿಮಾ ಕೆಲ ವರ್ಷಗಳ ಹಿಂದೆ ರಿಲೀಸ್ ಆಗಿ ಗೆದ್ದಿತ್ತು’ ಎಂದಿದ್ದಾರೆ ನಿರ್ಮಾಪಕ ಜಗದೀಶ್ ಗೌಡ.

ಭೀಮ ಸಿನಿಮಾ ಬೆಂಗಳೂರಿನ ಸ್ಲಮ್​ಗಳಲ್ಲಿ ಶೂಟ್ ಮಾಡಲಾಗಿದೆ. 125 ದಿನಗಳ ಕಾಲ ಸಿನಿಮಾ ಶೂಟ್ ಮಾಡಲಾಗಿದೆ. ಬಹುತೇಕ ಸಿನಿಮಾಗಳು ನಿಜವಾದ ಲೊಕೇಶನ್​ಗಳಲ್ಲಿ ಶೂಟ್ ಮಾಡಲಾಗಿದೆ. ಈ ಸಿನಿಮಾ ಮೂಲಕ ಹಲವು ಹೊಸ ಮುಖಗಳನ್ನು ದುನಿಯಾ ವಿಜಯ್ ಪರಿಚಯಿಸುತ್ತಿದ್ದಾರೆ. ಬ್ಲ್ಯಾಕ್​ ಡ್ರಾಗನ್ ಮಂಜು ಹೆಸರಿನ ವ್ಯಕ್ತಿ ಈ ಚಿತ್ರದ ಮೂಲಕ ವಿಲನ್ ಆಗಿ ಎಂಟ್ರಿ ಕೊಡುತ್ತಿದ್ದಾರೆ.

ಇದನ್ನೂ ಓದಿ: ‘ಭೀಮ’ ರಿಲೀಸ್ ದಿನಾಂಕ ಘೋಷಿಸಿದ ದುನಿಯಾ ವಿಜಯ್ 

‘ಭೀಮ’ ಚಿತ್ರವನ್ನು ಕೃಷ್ಣ ಸಾರ್ಥಕ್ ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ‘ಭೈರಾಗಿ’ ಚಿತ್ರವನ್ನು ಅವರು ನಿರ್ಮಾಣ ಮಾಡಿದ್ದರು. ಇವರ ಜೊತೆ ಜಗದೀಶ್ ಗೌಡ ಕೂಡ ಕೈ ಜೋಡಿಸಿದ್ದಾರೆ. ಚರಣ್​ ರಾಜ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಶಿವಸೇನಾ ಅವರು ಈ ಚಿತ್ರವನ್ನು ಛಾಯಾಗ್ರಾಹಣ ಮಾಡಿದ್ದರು, ಮಾಸ್ತಿ ಮಂಜು ಸಂಭಾಷಣೆ ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ