AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ರಾಜ್​ಕುಮಾರ್ ಪ್ರತಿಮೆ ವಿವಾದ; ಆಕ್ರೋಶ ಹೊರಹಾಕಿದ ಅಣ್ಣಾವ್ರ ಫ್ಯಾನ್ಸ್

ಬೆಂಗಳೂರಿನ ಉಪ್ಪಾರ ಪೇಟೆ ಸ್ಟೇಶನ್ ಬಳಿಯ ಶಾಂತಲಾ ಸಿಲ್ಕ್ ಸರ್ಕಲ್ ಬಳಿ ರಾಜ್ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ನೀಡಲಾಗಿತ್ತು. ಕೊರೊನಾ ಕಾರಣದಿಂದ ಕಾಮಗಾರಿ ಆರಂಭ ಆಗೋದು ವಿಳಂಬ ಆಯಿತು. ಈ ಜಾಗದಲ್ಲಿ ಈಗ ವಾಟರ್ ಫೌಂಟೇನ್ ನಿರ್ಮಾಣ ಆಗ್ತಿದೆ ಅನ್ನೋ ಮಾಹತಿ ಸಿಕ್ಕಿದೆ.

ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ರಾಜ್​ಕುಮಾರ್ ಪ್ರತಿಮೆ ವಿವಾದ; ಆಕ್ರೋಶ ಹೊರಹಾಕಿದ ಅಣ್ಣಾವ್ರ ಫ್ಯಾನ್ಸ್
ರಾಜ್​ಕುಮಾರ್
Malatesh Jaggin
| Edited By: |

Updated on:Oct 30, 2023 | 1:58 PM

Share

ನವೆಂಬರ್ 1 ಹತ್ತಿರ ಬಂದಿದೆ. ಕನ್ನಡ ರಾಜ್ಯೋತ್ಸವ ಆಚರಿಸಲು ಸಿದ್ಧತೆ ನಡೆದಿದೆ. ಕನ್ನಡ ರಾಜ್ಯೋತ್ಸವ ಎಂದಾಗ ನೆನಪಿಗೆ ಬರೋದು ಡಾ. ರಾಜ್​ಕುಮಾರ್ (Dr Rajkumar). ಈಗ ರಾಜ್ಯೋತ್ಸವದ ಸಂದರ್ಭದಲ್ಲೇ ರಾಜ್​ಕುಮಾರ್ ಪ್ರತಿಮೆ ವಿವಾದ ಮುನ್ನೆಲೆಗೆ ಬಂದಿದೆ. ಅಣ್ಣಾವ್ರ ಪ್ರತಿಮೆ ನಿರ್ಮಾಣಕ್ಕೆ ನೀಡಿದ ಜಾಗದಲ್ಲಿ ಬೇರೆ ಕಾಮಗಾರಿ ನಡೆಸಲು ಪ್ಲಾನ್ ನಡೆದಿದೆ ಎನ್ನಲಾಗುತ್ತಿದೆ. ಬಿಬಿಎಂಪಿಯ ಈ ನಡೆ ರಾಜ್​ ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ಆಗಿದೆ.

ಬೆಂಗಳೂರಿನ ಉಪ್ಪಾರ ಪೇಟೆ ಸ್ಟೇಶನ್ ಬಳಿಯ ಶಾಂತಲಾ ಸಿಲ್ಕ್ ಸರ್ಕಲ್ ಬಳಿ ರಾಜ್ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ನೀಡಲಾಗಿತ್ತು. ಕೊರೊನಾ ಕಾರಣದಿಂದ ಕಾಮಗಾರಿ ಆರಂಭ ಆಗೋದು ವಿಳಂಬ ಆಯಿತು. ಈ ಜಾಗದಲ್ಲಿ ಈಗ ವಾಟರ್ ಫೌಂಟೇನ್ ನಿರ್ಮಾಣ ಆಗ್ತಿದೆ ಅನ್ನೋ ಮಾಹತಿ ಸಿಕ್ಕಿದೆ. ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ಆಗಿದೆ.

ಈ ಸ್ಥಳದಲ್ಲಿ 1983ರಂದು ಕನ್ನಡ ಬಾವುಟ ನೆಟ್ಟು ಧ್ವಜರೋಹಣ ಮಾಡಲಾಗಿತ್ತು. ಗಾಂಧೀನಗರದಲ್ಲಿ ಮೊದಲು ಕನ್ನಡದ ಕಂಬ ನೆಟ್ಟಿದ್ದಜಾಗ ಇದು. ಹೀಗಾಗಿ ಅಣ್ಣಾವ್ರ ಪ್ರತಿಮೆ ಇಡೋಕೆ ಅವಕಾಶ ನೀಡಬೇಕು ಎಂಬುದು ಅಭಿಮಾನಿಗಳ ಕೋರಿಕೆ ಆಗಿದೆ. ಸದ್ಯ ರಾಜ್​ಕುಮಾರ್ ಅಭಿಮಾನಿಗಳು ಬಿಬಿಎಂಪಿ ಕಚೇರಿಗೆ ತೆರಳುತ್ತಿದ್ದಾರೆ. ಆಯುಕ್ತರಿಗೆ ಅವರು ವಿಶೇಷ ಮನವಿ ಮಾಡಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಚಂದನವನದ ಸೆಲೆಬ್ರಿಟಿಗಳ ಹೃದಯದಲ್ಲಿ ಪುನೀತ್​ ರಾಜ್​ಕುಮಾರ್​ ಎಂದೆಂದಿಗೂ ಅಮರ

ರಾಜ್​ಕುಮಾರ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಅವರು ಸ್ಪಷ್ಟವಾಗಿ ಕನ್ನಡ ಮಾತನಾಡುತ್ತಿದ್ದರು. ಕನ್ನಡದ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದರು. ಭಾಷೆ-ನೆಲದ ವಿಚಾರ ಬಂದರೆ ಅವರು ಧ್ವನಿ ಎತ್ತುತ್ತಿದ್ದರು. ಈ ಕಾರಣದಿಂದಲೇ ಕನ್ನಡಕ್ಕೂ, ರಾಜ್​ಕುಮಾರ್​ಗೂ ವಿಶೇಷ ನಂಟಿದೆ. ‘ಹುಟ್ಟಿದರೇ ಕನ್ನಡ್ ನಾಡಲ್ಲಿ ಹುಟ್ಟಬೇಕು..’ ಹಾಡು ರಾಜ್ ಕಂಠದಲ್ಲಿ ಮೂಡಿ ಬಂದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:58 pm, Mon, 30 October 23

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!