AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ರಾಜ್​ಕುಮಾರ್ ಪ್ರತಿಮೆ ವಿವಾದ; ಆಕ್ರೋಶ ಹೊರಹಾಕಿದ ಅಣ್ಣಾವ್ರ ಫ್ಯಾನ್ಸ್

ಬೆಂಗಳೂರಿನ ಉಪ್ಪಾರ ಪೇಟೆ ಸ್ಟೇಶನ್ ಬಳಿಯ ಶಾಂತಲಾ ಸಿಲ್ಕ್ ಸರ್ಕಲ್ ಬಳಿ ರಾಜ್ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ನೀಡಲಾಗಿತ್ತು. ಕೊರೊನಾ ಕಾರಣದಿಂದ ಕಾಮಗಾರಿ ಆರಂಭ ಆಗೋದು ವಿಳಂಬ ಆಯಿತು. ಈ ಜಾಗದಲ್ಲಿ ಈಗ ವಾಟರ್ ಫೌಂಟೇನ್ ನಿರ್ಮಾಣ ಆಗ್ತಿದೆ ಅನ್ನೋ ಮಾಹತಿ ಸಿಕ್ಕಿದೆ.

ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ರಾಜ್​ಕುಮಾರ್ ಪ್ರತಿಮೆ ವಿವಾದ; ಆಕ್ರೋಶ ಹೊರಹಾಕಿದ ಅಣ್ಣಾವ್ರ ಫ್ಯಾನ್ಸ್
ರಾಜ್​ಕುಮಾರ್
ಮಾಲತೇಶ ಜಗ್ಗೀನ್
| Edited By: |

Updated on:Oct 30, 2023 | 1:58 PM

Share

ನವೆಂಬರ್ 1 ಹತ್ತಿರ ಬಂದಿದೆ. ಕನ್ನಡ ರಾಜ್ಯೋತ್ಸವ ಆಚರಿಸಲು ಸಿದ್ಧತೆ ನಡೆದಿದೆ. ಕನ್ನಡ ರಾಜ್ಯೋತ್ಸವ ಎಂದಾಗ ನೆನಪಿಗೆ ಬರೋದು ಡಾ. ರಾಜ್​ಕುಮಾರ್ (Dr Rajkumar). ಈಗ ರಾಜ್ಯೋತ್ಸವದ ಸಂದರ್ಭದಲ್ಲೇ ರಾಜ್​ಕುಮಾರ್ ಪ್ರತಿಮೆ ವಿವಾದ ಮುನ್ನೆಲೆಗೆ ಬಂದಿದೆ. ಅಣ್ಣಾವ್ರ ಪ್ರತಿಮೆ ನಿರ್ಮಾಣಕ್ಕೆ ನೀಡಿದ ಜಾಗದಲ್ಲಿ ಬೇರೆ ಕಾಮಗಾರಿ ನಡೆಸಲು ಪ್ಲಾನ್ ನಡೆದಿದೆ ಎನ್ನಲಾಗುತ್ತಿದೆ. ಬಿಬಿಎಂಪಿಯ ಈ ನಡೆ ರಾಜ್​ ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ಆಗಿದೆ.

ಬೆಂಗಳೂರಿನ ಉಪ್ಪಾರ ಪೇಟೆ ಸ್ಟೇಶನ್ ಬಳಿಯ ಶಾಂತಲಾ ಸಿಲ್ಕ್ ಸರ್ಕಲ್ ಬಳಿ ರಾಜ್ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ನೀಡಲಾಗಿತ್ತು. ಕೊರೊನಾ ಕಾರಣದಿಂದ ಕಾಮಗಾರಿ ಆರಂಭ ಆಗೋದು ವಿಳಂಬ ಆಯಿತು. ಈ ಜಾಗದಲ್ಲಿ ಈಗ ವಾಟರ್ ಫೌಂಟೇನ್ ನಿರ್ಮಾಣ ಆಗ್ತಿದೆ ಅನ್ನೋ ಮಾಹತಿ ಸಿಕ್ಕಿದೆ. ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ಆಗಿದೆ.

ಈ ಸ್ಥಳದಲ್ಲಿ 1983ರಂದು ಕನ್ನಡ ಬಾವುಟ ನೆಟ್ಟು ಧ್ವಜರೋಹಣ ಮಾಡಲಾಗಿತ್ತು. ಗಾಂಧೀನಗರದಲ್ಲಿ ಮೊದಲು ಕನ್ನಡದ ಕಂಬ ನೆಟ್ಟಿದ್ದಜಾಗ ಇದು. ಹೀಗಾಗಿ ಅಣ್ಣಾವ್ರ ಪ್ರತಿಮೆ ಇಡೋಕೆ ಅವಕಾಶ ನೀಡಬೇಕು ಎಂಬುದು ಅಭಿಮಾನಿಗಳ ಕೋರಿಕೆ ಆಗಿದೆ. ಸದ್ಯ ರಾಜ್​ಕುಮಾರ್ ಅಭಿಮಾನಿಗಳು ಬಿಬಿಎಂಪಿ ಕಚೇರಿಗೆ ತೆರಳುತ್ತಿದ್ದಾರೆ. ಆಯುಕ್ತರಿಗೆ ಅವರು ವಿಶೇಷ ಮನವಿ ಮಾಡಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಚಂದನವನದ ಸೆಲೆಬ್ರಿಟಿಗಳ ಹೃದಯದಲ್ಲಿ ಪುನೀತ್​ ರಾಜ್​ಕುಮಾರ್​ ಎಂದೆಂದಿಗೂ ಅಮರ

ರಾಜ್​ಕುಮಾರ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಅವರು ಸ್ಪಷ್ಟವಾಗಿ ಕನ್ನಡ ಮಾತನಾಡುತ್ತಿದ್ದರು. ಕನ್ನಡದ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದರು. ಭಾಷೆ-ನೆಲದ ವಿಚಾರ ಬಂದರೆ ಅವರು ಧ್ವನಿ ಎತ್ತುತ್ತಿದ್ದರು. ಈ ಕಾರಣದಿಂದಲೇ ಕನ್ನಡಕ್ಕೂ, ರಾಜ್​ಕುಮಾರ್​ಗೂ ವಿಶೇಷ ನಂಟಿದೆ. ‘ಹುಟ್ಟಿದರೇ ಕನ್ನಡ್ ನಾಡಲ್ಲಿ ಹುಟ್ಟಬೇಕು..’ ಹಾಡು ರಾಜ್ ಕಂಠದಲ್ಲಿ ಮೂಡಿ ಬಂದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:58 pm, Mon, 30 October 23

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ