AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ರಾಜ್​ಕುಮಾರ್ ಪ್ರತಿಮೆ ವಿವಾದ; ಆಕ್ರೋಶ ಹೊರಹಾಕಿದ ಅಣ್ಣಾವ್ರ ಫ್ಯಾನ್ಸ್

ಬೆಂಗಳೂರಿನ ಉಪ್ಪಾರ ಪೇಟೆ ಸ್ಟೇಶನ್ ಬಳಿಯ ಶಾಂತಲಾ ಸಿಲ್ಕ್ ಸರ್ಕಲ್ ಬಳಿ ರಾಜ್ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ನೀಡಲಾಗಿತ್ತು. ಕೊರೊನಾ ಕಾರಣದಿಂದ ಕಾಮಗಾರಿ ಆರಂಭ ಆಗೋದು ವಿಳಂಬ ಆಯಿತು. ಈ ಜಾಗದಲ್ಲಿ ಈಗ ವಾಟರ್ ಫೌಂಟೇನ್ ನಿರ್ಮಾಣ ಆಗ್ತಿದೆ ಅನ್ನೋ ಮಾಹತಿ ಸಿಕ್ಕಿದೆ.

ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ರಾಜ್​ಕುಮಾರ್ ಪ್ರತಿಮೆ ವಿವಾದ; ಆಕ್ರೋಶ ಹೊರಹಾಕಿದ ಅಣ್ಣಾವ್ರ ಫ್ಯಾನ್ಸ್
ರಾಜ್​ಕುಮಾರ್
ಮಾಲತೇಶ ಜಗ್ಗೀನ್
| Edited By: |

Updated on:Oct 30, 2023 | 1:58 PM

Share

ನವೆಂಬರ್ 1 ಹತ್ತಿರ ಬಂದಿದೆ. ಕನ್ನಡ ರಾಜ್ಯೋತ್ಸವ ಆಚರಿಸಲು ಸಿದ್ಧತೆ ನಡೆದಿದೆ. ಕನ್ನಡ ರಾಜ್ಯೋತ್ಸವ ಎಂದಾಗ ನೆನಪಿಗೆ ಬರೋದು ಡಾ. ರಾಜ್​ಕುಮಾರ್ (Dr Rajkumar). ಈಗ ರಾಜ್ಯೋತ್ಸವದ ಸಂದರ್ಭದಲ್ಲೇ ರಾಜ್​ಕುಮಾರ್ ಪ್ರತಿಮೆ ವಿವಾದ ಮುನ್ನೆಲೆಗೆ ಬಂದಿದೆ. ಅಣ್ಣಾವ್ರ ಪ್ರತಿಮೆ ನಿರ್ಮಾಣಕ್ಕೆ ನೀಡಿದ ಜಾಗದಲ್ಲಿ ಬೇರೆ ಕಾಮಗಾರಿ ನಡೆಸಲು ಪ್ಲಾನ್ ನಡೆದಿದೆ ಎನ್ನಲಾಗುತ್ತಿದೆ. ಬಿಬಿಎಂಪಿಯ ಈ ನಡೆ ರಾಜ್​ ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ಆಗಿದೆ.

ಬೆಂಗಳೂರಿನ ಉಪ್ಪಾರ ಪೇಟೆ ಸ್ಟೇಶನ್ ಬಳಿಯ ಶಾಂತಲಾ ಸಿಲ್ಕ್ ಸರ್ಕಲ್ ಬಳಿ ರಾಜ್ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ನೀಡಲಾಗಿತ್ತು. ಕೊರೊನಾ ಕಾರಣದಿಂದ ಕಾಮಗಾರಿ ಆರಂಭ ಆಗೋದು ವಿಳಂಬ ಆಯಿತು. ಈ ಜಾಗದಲ್ಲಿ ಈಗ ವಾಟರ್ ಫೌಂಟೇನ್ ನಿರ್ಮಾಣ ಆಗ್ತಿದೆ ಅನ್ನೋ ಮಾಹತಿ ಸಿಕ್ಕಿದೆ. ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ಆಗಿದೆ.

ಈ ಸ್ಥಳದಲ್ಲಿ 1983ರಂದು ಕನ್ನಡ ಬಾವುಟ ನೆಟ್ಟು ಧ್ವಜರೋಹಣ ಮಾಡಲಾಗಿತ್ತು. ಗಾಂಧೀನಗರದಲ್ಲಿ ಮೊದಲು ಕನ್ನಡದ ಕಂಬ ನೆಟ್ಟಿದ್ದಜಾಗ ಇದು. ಹೀಗಾಗಿ ಅಣ್ಣಾವ್ರ ಪ್ರತಿಮೆ ಇಡೋಕೆ ಅವಕಾಶ ನೀಡಬೇಕು ಎಂಬುದು ಅಭಿಮಾನಿಗಳ ಕೋರಿಕೆ ಆಗಿದೆ. ಸದ್ಯ ರಾಜ್​ಕುಮಾರ್ ಅಭಿಮಾನಿಗಳು ಬಿಬಿಎಂಪಿ ಕಚೇರಿಗೆ ತೆರಳುತ್ತಿದ್ದಾರೆ. ಆಯುಕ್ತರಿಗೆ ಅವರು ವಿಶೇಷ ಮನವಿ ಮಾಡಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಚಂದನವನದ ಸೆಲೆಬ್ರಿಟಿಗಳ ಹೃದಯದಲ್ಲಿ ಪುನೀತ್​ ರಾಜ್​ಕುಮಾರ್​ ಎಂದೆಂದಿಗೂ ಅಮರ

ರಾಜ್​ಕುಮಾರ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಅವರು ಸ್ಪಷ್ಟವಾಗಿ ಕನ್ನಡ ಮಾತನಾಡುತ್ತಿದ್ದರು. ಕನ್ನಡದ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದರು. ಭಾಷೆ-ನೆಲದ ವಿಚಾರ ಬಂದರೆ ಅವರು ಧ್ವನಿ ಎತ್ತುತ್ತಿದ್ದರು. ಈ ಕಾರಣದಿಂದಲೇ ಕನ್ನಡಕ್ಕೂ, ರಾಜ್​ಕುಮಾರ್​ಗೂ ವಿಶೇಷ ನಂಟಿದೆ. ‘ಹುಟ್ಟಿದರೇ ಕನ್ನಡ್ ನಾಡಲ್ಲಿ ಹುಟ್ಟಬೇಕು..’ ಹಾಡು ರಾಜ್ ಕಂಠದಲ್ಲಿ ಮೂಡಿ ಬಂದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:58 pm, Mon, 30 October 23

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ