AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಕಿಚ್ಚ ಸುದೀಪ್-ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಭೇಟಿ; ಇಲ್ಲಿದೆ ಕಾರಣ

Kichcha Sudeep: ಡಿಕೆ ಶಿವಕುಮಾರ್, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೊಹಮದ್ ನಲ್ಪಾಡ್ ಹಾಗೂ ಸುದೀಪ್ ಒಟ್ಟಿಗೆ ಇರುವ ಫೋಟೋ ವೈರಲ್ ಆಗಿದೆ. ಮೂವರು ಒಟ್ಟಾಗಿ ಭೋಜನ ಮಾಡಿದ್ದಾರೆ ಎನ್ನಲಾಗುತ್ತಿದೆ.

ರಾಜೇಶ್ ದುಗ್ಗುಮನೆ
|

Updated on:Feb 03, 2023 | 1:05 PM

Share

ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಂಬರುವ ವಿಧಾನಸಭಾ ಚುನಾವಣೆಗೆ ಭರದ ಸಿದ್ಧತೆ ನಡೆಯುತ್ತಿದೆ. ಎಲ್ಲಾ ಪಕ್ಷದವರು ಪ್ರಚಾರಕ್ಕಾಗಿ ಸೆಲೆಬ್ರಿಟಿಗಳ ಮೊರೆ ಹೋಗುತ್ತಿದ್ದಾರೆ. ಇನ್ನೂ ಕೆಲವರು ಸೆಲೆಬ್ರಿಟಿಗಳನ್ನು ಪಕ್ಷಕ್ಕೆ ಕರೆತರುವ ಪ್ರಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ಕಿಚ್ಚ ಸುದೀಪ್ (Kichcha Sudeep) ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (Dk Shivakumar) ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ.

ಕಿಚ್ಚ ಸುದೀಪ್ ಅವರು ಸ್ಯಾಂಡಲ್​​ವುಡ್​ನ ಬೇಡಿಕೆಯ ನಟ. ಅವರು ಅನೇಕ ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಅವರು ಕಾಂಗ್ರೆಸ್​ಗೆ ಸೇರ್ಪಡೆ ಆಗುತ್ತಾರೆ ಎನ್ನುವ ವಿಚಾರ ಕೆಲ ದಿನಗಳಿಂದ ಚರ್ಚೆಯಲ್ಲಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಈ ವಿಚಾರವಾಗಿ ಸುದೀಪ್​ಗೆ ಈ ಮೊದಲು ಪ್ರಶ್ನೆ ಮಾಡಲಾಗಿತ್ತು. ಆದರೆ, ಇದಕ್ಕೆ ಅವರು ಪ್ರತಿಕ್ರಿಯೆ ನೀಡಿಲ್ಲ. ಈ ಬೆನ್ನಲ್ಲೇ ಡಿಕೆಶಿ ಅವರನ್ನು ಭೇಟಿ ಮಾಡಿದ್ದಾರೆ.

ಡಿಕೆ ಶಿವಕುಮಾರ್, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೊಹಮದ್ ನಲ್ಪಾಡ್ ಹಾಗೂ ಸುದೀಪ್ ಒಟ್ಟಿಗೆ ಇರುವ ಫೋಟೋ ವೈರಲ್ ಆಗಿದೆ. ಮೂವರು ಒಟ್ಟಾಗಿ ಭೋಜನ ಮಾಡಿದ್ದಾರೆ ಎನ್ನಲಾಗುತ್ತಿದೆ. ಚುನಾವಣಾ ಪ್ರಚಾರ ಸಭೆಗಳಿಗೆ ಬುರವಂತೆ ಸುದೀಪ್​ಗೆ ಡಿಕೆಶಿ ಆಹ್ವಾನ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಕಾಂಗ್ರೆಸ್ ಕಡೆಯಿಂದಾಗಲೀ ಸುದೀಪ್ ಕಡೆಯಿಂದಾಗಲಿ ಇನ್ನಷ್ಟೇ ಪ್ರತಿಕ್ರಿಯೆ ಸಿಗಬೇಕಿದೆ.

ಸುದೀಪ್ ಪಕ್ಷಕ್ಕೆ ಬಂದರೆ ಸ್ವಾಗತ

ಸುದೀಪ್ ಅವರು ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ‘ಸುದೀಪ್ ಪಕ್ಷಕ್ಕೆ ಬಂದರೆ ಸ್ವಾಗತ. ನಮ್ಮ ಸಿದ್ದಾಂತ ಒಪ್ಪಿ ಪಕ್ಷಕ್ಕೆ ಬರುವುದು ಅವರಿಗೂ ಹೈಕಮಾಂಡ್​​ಗೂ ಬಿಟ್ಟ ವಿಚಾರ. ಪಕ್ಷ ಸೇರ್ಪಡೆ ಆದರೆ ಪ್ರಚಾರದಲ್ಲಿ ಪೂರ್ಣವಾಗಿ ತೊಡಗಿಸಿಕೊಳ್ಳಬಹುದು. ನಾನು ಸುದೀಪ್ ಅವರನ್ನು ಸದ್ಯ ಭೇಟಿಯಾಗಿಲ್ಲ. ಈ ಕುರಿತು ಮಾತುಕತೆ ಮಾಡಿಲ್ಲ. ರಾಜ್ಯದಲ್ಲಿ ಸಿನಿಮಾ ನಟರು ರಾಜಕೀಯಕ್ಕೆ ಬರುವುದಕ್ಕೆ ಸ್ವಲ್ಪ ಯೋಚನೆ ಮಾಡುತ್ತಾರೆ. ಆಂಧ್ರ ತಮಿಳುನಾಡು ತೆಲಂಗಾಣದಲ್ಲಿ ಆದಂತೆ ನಮ್ಮಲ್ಲಿ ಆಗುವುದಿಲ್ಲ. ಆ ರಾಜ್ಯಗಳ ತರಹ, ಬೇರೆ ಪಕ್ಷದವರ ತರಹ ನಮ್ಮ ಪಕ್ಷ ಸ್ಟಾರ್​​ಗಳನ್ನು ಕರೆತಂದು ಯಾವತ್ತೂ ಪ್ರಚಾರ ಮಾಡಿಲ್ಲ. ಆದರೆ ಸುದೀಪ್ ಬಂದು ಪ್ರಚಾರದಲ್ಲಿ ತೊಡಗಿದರೆ ಸ್ವಾಗತ ಮಾಡ್ತೇವೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:01 pm, Fri, 3 February 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ