AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಲಿದೆ ‘ಎ’ ಪಾರ್ಟ್ 2, ಚಿತ್ರಕತೆ ರೆಡಿ, ಆದರೆ ಉಪೇಂದ್ರ ನಿರ್ದೇಶಿಸುತ್ತಾರಾ?

ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದಾದ ‘ಎ’ 26 ವರ್ಷದ ಬಳಿಕ ಮತ್ತೆ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ. ಇದೀಗ ‘ಎ’ ಸಿನಿಮಾದ ಎರಡನೇ ಭಾಗ ನಿರ್ಮಾಣವಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ.

ಬರಲಿದೆ ‘ಎ’ ಪಾರ್ಟ್ 2, ಚಿತ್ರಕತೆ ರೆಡಿ, ಆದರೆ ಉಪೇಂದ್ರ ನಿರ್ದೇಶಿಸುತ್ತಾರಾ?
ಮಂಜುನಾಥ ಸಿ.
|

Updated on: May 23, 2024 | 4:55 PM

Share

ಉಪೇಂದ್ರ (Upendra) ನಟಿಸಿ, ನಿರ್ದೇಶನ ಮಾಡಿರುವ ‘ಎ’ ಸಿನಿಮಾ (A Cinema) 26 ವರ್ಷಗಳ ಬಳಿಕ ಇತ್ತೀಚೆಗಷ್ಟೆ ಮರು ಬಿಡುಗಡೆ ಆಗಿ ಮತ್ತೆ ಸೂಪರ್ ಹಿಟ್ ಎನಿಸಿಕೊಂಡಿದೆ. 26 ವರ್ಷಗಳ ಬಳಿಕವೂ ಜನ ಮುಗಿಬಿದ್ದು ಸಿನಿಮಾ ನೋಡಿದ್ದಾರೆ. ಚಿತ್ರತಂಡ ಸಂಭ್ರಮಾಚರಣೆ ಮಾಡಿದೆ. ಮಾತ್ರವಲ್ಲದೆ ಈ ಸಂಭ್ರಮಾಚರಣೆಯಲ್ಲಿ ಚಿತ್ರತಂಡ ಹೊಸ ಘೋಷಣೆಯನ್ನು ಸಹ ಮಾಡಿದೆ. ಅದುವೇ ‘ಎ’ ಪಾರ್ಟ್ 2. ಕತೆ, ಚಿತ್ರಕತೆ ಈಗಾಗಲೇ ಪೂರ್ಣವಾಗಿ ರೆಡಿಯಾಗಿದ್ದು, ‘ಎ’ ಪಾರ್ಟ್ 2 ಖಂಡಿತ ನಿರ್ಮಾಣವಾಗುತ್ತದೆ ಎಂದಿದ್ದಾರೆ.

ಸಂಭ್ರಮಾಚರಣೆಯಲ್ಲಿ ಮಾತನಾಡಿದ ‘ಎ’ ಸಿನಿಮಾದ ನಟಿ ಚಾಂದಿನಿ, ‘ಎ’ ಸಿನಿಮಾವನ್ನು ಮೆಚ್ಚದ ಜನರಿಲ್ಲ. ಬಾಲಿವುಡ್​ನ ಹಲವು ಸಿನಿಮಾಗಳಲ್ಲಿ ‘ಎ’ ಸಿನಿಮಾದ ಛಾಯೆ ಕಾಣುತ್ತದೆ. ಬಾಲಿವುಡ್​ನವರು ಸಹ ಈ ಸಿನಿಮಾ ನೋಡಿ ಬೆರಗಾಗಿದ್ದರು. ಈಗ ಇಲ್ಲಿ ಒಂದು ಘೋಷಣೆ ಮಾಡಲಿದ್ದೇವೆ, ‘ಎ’ ಸಿನಿಮಾದ ಎರಡನೇ ಭಾಗ ರೆಡಿಯಾಗುತ್ತಿದೆ. ನಮ್ಮೊಟ್ಟಿಗೆ ಬರಹಗಾರರ ತಂಡವೇ ಇದೆ. ಈಗಾಗಲೇ ನಾವು ಕತೆ, ಚಿತ್ರಕತೆಯನ್ನು ರೆಡಿ ಮಾಡಿಕೊಂಡಿದ್ದೇವೆ. ಸಂಭಾಷಣೆ ಬರೆಯಬೇಕಿದೆ’ ಎಂದಿದ್ದಾರೆ.

ಇದನ್ನೂ ಓದಿ:‘ಯುಐ’ ಅಂತರಾಷ್ಟ್ರೀಯ ಸ್ಪರ್ಷ, ಹಂಗೆರಿಯಲ್ಲಿ ಉಪೇಂದ್ರ, ಅಜನೀಶ್

ಚಿತ್ರತಂಡದಲ್ಲಿ ಸದ್ಯಕ್ಕೆ ನಾನು, ಗುರುಕಿರಣ್, ಅಸಿಸ್ಟೆಂಟ್​ಗಳು ಇನ್ನೂ ಕೆಲವರು ಇದ್ದೇವೆ. ನಾವೆಲ್ಲ ಕೂತು ಸಂಭಾಷಣೆ, ಪೋಸ್ಟ್ ಪ್ರೊಡಕ್ಷನ್ ಅಂತಿಮಗೊಳಿಸಿಕೊಳ್ಳುತ್ತೇವೆ ಆ ನಂತರ ಉಪೇಂದ್ರ ಅವರ ಬಳಿ ಹೋಗಿ ನಾವು ಅವರನ್ನು ಮನವಿ ಮಾಡುತ್ತೇವೆ, ಈ ಸಿನಿಮಾವನ್ನು ನೀವೇ ನಿರ್ದೇಶಿಸಿ ಅಂತ. ಅವರು ಒಪ್ಪುತ್ತಾರೆಂಬ ನಂಬಿಕೆ ಇದೆ. ನಿರ್ದೇಶನ ಮಾಡುವುದು ಮಾತ್ರವೇ ಅಲ್ಲ, ಅವರು ಈ ಸಿನಿಮಾದಲ್ಲಿ ನಟನೆ ಸಹ ಮಾಡಬೇಕು ಎಂದು ನಾವು ಕೇಳಲಿದ್ದೇವೆ. ಒಟ್ಟಾರೆ ನಾವು ಈ ಸಿನಿಮಾ ಮಾಡಲಿದ್ದೇವೆ’ ಎಂದಿದ್ದಾರೆ ಚಾಂದಿನಿ.

‘ಎ’ ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ನಡೆದ ಕೆಲವು ಘಟನೆಗಳನ್ನು ನೆನಪು ಮಾಡಿಕೊಂಡ ಚಾಂದಿನಿ, ಆಗಿನ್ನೂ ನಾನು ಚಿಕ್ಕ ಹುಡುಗಿ. ನನ್ನ ಎರಡು ಫೋಟೊಗಳನ್ನಷ್ಟೆ ನೋಡಿ ಉಪೇಂದ್ರ ಅವರು ನಾಯಕಿಯಾಗಿ ಸೆಲೆಕ್ಟ್ ಮಾಡಿದ್ದರು. ಅದು ನನಗೆ ಆಶ್ಚರ್ಯವಾಗಿತ್ತು. ನಾನು ನಟಿಸಿದ ಮೊದಲ ಶಾಟ್​ನಲ್ಲಿಯೇ ನನ್ನನ್ನು ಗುರುಕಿರಣ್ ತಳ್ಳಿ ಬೀಳಿಸಿದ್ದರು. ಆ ದಿನ ನನಗೆ ಶಾಕ್ ಆಗಿತ್ತು. ನಾನು ನಿಜಕ್ಕೂ ನೆಲಕ್ಕೆ ಬಿದ್ದಿದ್ದೆ. ನನಗೆ ಅಳು ತಡೆದುಕೊಳ್ಳಲು ಆಗಿರಲಿಲ್ಲ. ನನ್ನ ತಾಯಿಯೂ ಅಳುತ್ತಿದ್ದರು. ಅಸಲಿಗೆ ಈ ಚಿತ್ರರಂಗಕ್ಕೆ ನನ್ನನ್ನು ತಳ್ಳಿದವರು ಗುರುಕಿರಣ್’ ಎಂದಾಯಿತು ಎಂದು ತಮಾಷೆ ಮಾಡಿದರು ಚಾಂದಿನಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ